AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ

Puneeth Rajkumar: ನಟ ಪುನೀತ್ ರಾಜ್​ಕುಮಾರ್ ಅವರಿಗೆ ಚಿಕ್ಕಮಗಳೂರಿನ ಗಾಂತವ್ಯ ಡಾನ್ಸ್ ಅಕಾಡೆಮಿಯ 50ಕ್ಕೂ ಹೆಚ್ಚು ಪುಟಾಣಿಗಳು ದೀಪ ನಮನ ಸಲ್ಲಿಸಿದ್ದಾರೆ.

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ
ಪುನೀತ್ ರಾಜ್​ಕುಮಾರ್​ಗೆ ದೀಪ ನಮನ ಸಲ್ಲಿಸಿದ ಪುಟಾಣಿಗಳು
TV9 Web
| Updated By: shivaprasad.hs|

Updated on:Nov 17, 2021 | 9:56 AM

Share

ಚಿಕ್ಕಮಗಳೂರು: ನಟ ಪುನೀತ್ ರಾಜ್​ಕುಮಾರ್ ಅಗಲಿಕೆಯ ನೋವಿನಿಂದ ನಾಡು ಇನ್ನೂ ಹೊರಬಂದಿಲ್ಲ. ವಿವಿಧ ಕಾರ್ಯಕ್ರಮಗಳ ಮೂಲಕ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸಿ, ನಮನ ಸಲ್ಲಿಸಲಾಗುತ್ತಿದೆ. ರಾಜ್ಯದ ಹಲವೆಡೆ ಪುನೀತ್ ಅಭಿಮಾನಿಗಳು ಸಾಮಾಜಿಕ ಕಾರ್ಯಗಳು, ನೇತ್ರದಾನ ಮೊದಲಾದವುಗಳ ಮೂಲಕ ಬಹಳ ಅರ್ಥಪೂರ್ಣವಾಗಿ ನಮನ ಸಲ್ಲಿಸುತ್ತಿದ್ದಾರೆ. ಮಕ್ಕಳಿಗೆ ಅತ್ಯಂತ ನೆಚ್ಚಿನ ನಟರಾಗಿದ್ದ ಪುನೀತ್​ಗೆ ಅಪಾರ ಪುಟಾಣಿ ಅಭಿಮಾನಿ ಬಳಗವಿದೆ. ಅವರ ನೃತ್ಯವನ್ನು ನೋಡಿ, ತಾವೂ ನೃತ್ಯ ಮಾಡಬೇಕು ಎಂದು ಕನಸು ಕಂಡ ಮಕ್ಕಳ ಸಂಖ್ಯೆಯೂ ದೊಡ್ಡದು. ಇಂತಹ ಪುಟಾಣಿ ಅಪ್ಪು ಅಭಿಮಾನಿಗಳು ಚಿಕ್ಕಮಗಳೂರಿನಲ್ಲಿ ಪುನೀತ್​ಗೆ ವಿಶೇಷ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು ನಗರದ ಗಾಂತವ್ಯ ಡ್ಯಾನ್ಸ್ ಅಕಾಡೆಮಿಯ ಮಕ್ಕಳು ಪುನೀತ್​ಗೆ ದೀಪ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಜೊತೆಗೆ ‘ಬೊಂಬೆ ಹೇಳುತೈತೆ, ನೀನೇ ರಾಜಕುಮಾರ’ ಹಾಡಿನ ಮುಖಾಂತರ ಪುನೀತ್​ಗೆ ನಮನವನ್ನು ಪುಟಾಣಿಗಳು ಸಲ್ಲಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಪುಟಾಣಿಗಳು ಪುನೀತ್ ರಾಜ್​ಕುಮಾರ್ ಭಾವಚಿತ್ರದ ಎದುರು ದೀಪ ಬೆಳಗಿಸಿ ಹಾಡಿನೊಂದಿಗೆ ಹೆಜ್ಜೆ ಹಾಕುತ್ತಾ, ತಮ್ಮ ನೆಚ್ಚಿನ ಡಾನ್ಸರ್, ನಟ ಅಪ್ಪುಗೆ ಭಾವುಕ ನಮನ ಸಲ್ಲಿಸಿದ್ದಾರೆ.

ಈ ಕುರಿತ ವಿಡಿಯೋ ವರದಿ ಇಲ್ಲಿದೆ:

‘ಪುನೀತ ನಮನ’ದಲ್ಲಿ ನುಡಿನಮನ ಸಲ್ಲಿಸಿದ ಶಕ್ತಿಧಾಮದ ಮಕ್ಕಳು: ಶಕ್ತಿಧಾಮದ ಮೂಲಕ ಸಾವಿರಾರು ಮಕ್ಕಳಿಗೆ ಆಶ್ರಯದಾತರಾಗಿದ್ದ ಪುನೀತ್​ರನ್ನು ಸ್ಮರಿಸಿಕೊಂಡು ಮಕ್ಕಳು ನುಡಿನಮನ ಸಲ್ಲಿಸಿದ್ದಾರೆ. ಟಿವಿ9ನೊಂದಿಗೆ ಮಾತನಾಡಿದ ಮಕ್ಕಳು, ‘‘ಪುನೀತ್​ ರಾಜ್​ಕುಮಾರ್​ ಅವರು ಇಲ್ಲ ಎಂಬುದನ್ನು ನಮಗೆ ನಂಬೋಕೆ ಆಗುತ್ತಿಲ್ಲ. ಈಗಲೂ ಅವರು ನಮ್ಮ ಜೊತೆ ಇದ್ದಾರೆ ಅಂತಲೇ ಅನಿಸುತ್ತಿದೆ. ರಾಜ್​ಕುಮಾರ್ ರೀತಿಯೇ ಪುನೀತ್​ ಅವರ ವ್ಯಕ್ತಿತ್ವವಿತ್ತು. ಅವರಾಗಲಿ, ಶಿವಣ್ಣ ಅವರಾಗಲಿ ನಮ್ಮನ್ನು ಬೇರೆಯವರ ರೀತಿ ನೋಡಿಲ್ಲ. ಸ್ವಂತ ಮಕ್ಕಳ ರೀತಿಯೇ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಯಾವುದೋ ರೀತಿಯಲ್ಲಿ ನಮಗೆ ಅವರು ಆಶೀರ್ವಾದ ಮಾಡುತ್ತಿರುತ್ತಾರೆ. ಅವರ ನಗುವೇ ಎಲ್ಲರಿಗೂ ಸ್ಫೂರ್ತಿ’’ ಎಂದಿದ್ದಾರೆ.

‘‘ಅವರು ಶಕ್ತಿಧಾಮಕ್ಕೆ ಬಂದಾಗೆಲ್ಲ ನಾವು ಏನೇ ಕೇಳಿದರೂ ಅದನ್ನು ನೆರವೇರಿಸುತ್ತಿದ್ದರು. ಸಿನಿಮಾಗೆ ಕರೆದುಕೊಂಡು ಹೋಗುತ್ತಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ಅವರ ಜನ್ಮದಿನದಂದು ನಮಗೆಲ್ಲ ಬಟ್ಟೆ ನೀಡಿದ್ದರು. ಪ್ರತಿ ಬಾರಿ ಬಂದಾಗೆಲ್ಲ ನಮಗೆ ಗಿಫ್ಟ್​ ತಂದುಕೊಡುತ್ತಿದ್ದರು’’ ಎಂದು ಮಕ್ಕಳು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ಓದಿ:

ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

Puneeth Rajkumar: ಬಂಗಾರಪೇಟೆ ಪಾನಿಪುರಿಗೆ ಮನಸೋತಿದ್ದ ಪುನೀತ್​ ರಾಜ್​ಕುಮಾರ್​

Published On - 9:55 am, Wed, 17 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!