AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ

Puneeth Rajkumar: ನಟ ಪುನೀತ್ ರಾಜ್​ಕುಮಾರ್ ಅವರಿಗೆ ಚಿಕ್ಕಮಗಳೂರಿನ ಗಾಂತವ್ಯ ಡಾನ್ಸ್ ಅಕಾಡೆಮಿಯ 50ಕ್ಕೂ ಹೆಚ್ಚು ಪುಟಾಣಿಗಳು ದೀಪ ನಮನ ಸಲ್ಲಿಸಿದ್ದಾರೆ.

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ
ಪುನೀತ್ ರಾಜ್​ಕುಮಾರ್​ಗೆ ದೀಪ ನಮನ ಸಲ್ಲಿಸಿದ ಪುಟಾಣಿಗಳು
TV9 Web
| Edited By: |

Updated on:Nov 17, 2021 | 9:56 AM

Share

ಚಿಕ್ಕಮಗಳೂರು: ನಟ ಪುನೀತ್ ರಾಜ್​ಕುಮಾರ್ ಅಗಲಿಕೆಯ ನೋವಿನಿಂದ ನಾಡು ಇನ್ನೂ ಹೊರಬಂದಿಲ್ಲ. ವಿವಿಧ ಕಾರ್ಯಕ್ರಮಗಳ ಮೂಲಕ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸಿ, ನಮನ ಸಲ್ಲಿಸಲಾಗುತ್ತಿದೆ. ರಾಜ್ಯದ ಹಲವೆಡೆ ಪುನೀತ್ ಅಭಿಮಾನಿಗಳು ಸಾಮಾಜಿಕ ಕಾರ್ಯಗಳು, ನೇತ್ರದಾನ ಮೊದಲಾದವುಗಳ ಮೂಲಕ ಬಹಳ ಅರ್ಥಪೂರ್ಣವಾಗಿ ನಮನ ಸಲ್ಲಿಸುತ್ತಿದ್ದಾರೆ. ಮಕ್ಕಳಿಗೆ ಅತ್ಯಂತ ನೆಚ್ಚಿನ ನಟರಾಗಿದ್ದ ಪುನೀತ್​ಗೆ ಅಪಾರ ಪುಟಾಣಿ ಅಭಿಮಾನಿ ಬಳಗವಿದೆ. ಅವರ ನೃತ್ಯವನ್ನು ನೋಡಿ, ತಾವೂ ನೃತ್ಯ ಮಾಡಬೇಕು ಎಂದು ಕನಸು ಕಂಡ ಮಕ್ಕಳ ಸಂಖ್ಯೆಯೂ ದೊಡ್ಡದು. ಇಂತಹ ಪುಟಾಣಿ ಅಪ್ಪು ಅಭಿಮಾನಿಗಳು ಚಿಕ್ಕಮಗಳೂರಿನಲ್ಲಿ ಪುನೀತ್​ಗೆ ವಿಶೇಷ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು ನಗರದ ಗಾಂತವ್ಯ ಡ್ಯಾನ್ಸ್ ಅಕಾಡೆಮಿಯ ಮಕ್ಕಳು ಪುನೀತ್​ಗೆ ದೀಪ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಜೊತೆಗೆ ‘ಬೊಂಬೆ ಹೇಳುತೈತೆ, ನೀನೇ ರಾಜಕುಮಾರ’ ಹಾಡಿನ ಮುಖಾಂತರ ಪುನೀತ್​ಗೆ ನಮನವನ್ನು ಪುಟಾಣಿಗಳು ಸಲ್ಲಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಪುಟಾಣಿಗಳು ಪುನೀತ್ ರಾಜ್​ಕುಮಾರ್ ಭಾವಚಿತ್ರದ ಎದುರು ದೀಪ ಬೆಳಗಿಸಿ ಹಾಡಿನೊಂದಿಗೆ ಹೆಜ್ಜೆ ಹಾಕುತ್ತಾ, ತಮ್ಮ ನೆಚ್ಚಿನ ಡಾನ್ಸರ್, ನಟ ಅಪ್ಪುಗೆ ಭಾವುಕ ನಮನ ಸಲ್ಲಿಸಿದ್ದಾರೆ.

ಈ ಕುರಿತ ವಿಡಿಯೋ ವರದಿ ಇಲ್ಲಿದೆ:

‘ಪುನೀತ ನಮನ’ದಲ್ಲಿ ನುಡಿನಮನ ಸಲ್ಲಿಸಿದ ಶಕ್ತಿಧಾಮದ ಮಕ್ಕಳು: ಶಕ್ತಿಧಾಮದ ಮೂಲಕ ಸಾವಿರಾರು ಮಕ್ಕಳಿಗೆ ಆಶ್ರಯದಾತರಾಗಿದ್ದ ಪುನೀತ್​ರನ್ನು ಸ್ಮರಿಸಿಕೊಂಡು ಮಕ್ಕಳು ನುಡಿನಮನ ಸಲ್ಲಿಸಿದ್ದಾರೆ. ಟಿವಿ9ನೊಂದಿಗೆ ಮಾತನಾಡಿದ ಮಕ್ಕಳು, ‘‘ಪುನೀತ್​ ರಾಜ್​ಕುಮಾರ್​ ಅವರು ಇಲ್ಲ ಎಂಬುದನ್ನು ನಮಗೆ ನಂಬೋಕೆ ಆಗುತ್ತಿಲ್ಲ. ಈಗಲೂ ಅವರು ನಮ್ಮ ಜೊತೆ ಇದ್ದಾರೆ ಅಂತಲೇ ಅನಿಸುತ್ತಿದೆ. ರಾಜ್​ಕುಮಾರ್ ರೀತಿಯೇ ಪುನೀತ್​ ಅವರ ವ್ಯಕ್ತಿತ್ವವಿತ್ತು. ಅವರಾಗಲಿ, ಶಿವಣ್ಣ ಅವರಾಗಲಿ ನಮ್ಮನ್ನು ಬೇರೆಯವರ ರೀತಿ ನೋಡಿಲ್ಲ. ಸ್ವಂತ ಮಕ್ಕಳ ರೀತಿಯೇ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಯಾವುದೋ ರೀತಿಯಲ್ಲಿ ನಮಗೆ ಅವರು ಆಶೀರ್ವಾದ ಮಾಡುತ್ತಿರುತ್ತಾರೆ. ಅವರ ನಗುವೇ ಎಲ್ಲರಿಗೂ ಸ್ಫೂರ್ತಿ’’ ಎಂದಿದ್ದಾರೆ.

‘‘ಅವರು ಶಕ್ತಿಧಾಮಕ್ಕೆ ಬಂದಾಗೆಲ್ಲ ನಾವು ಏನೇ ಕೇಳಿದರೂ ಅದನ್ನು ನೆರವೇರಿಸುತ್ತಿದ್ದರು. ಸಿನಿಮಾಗೆ ಕರೆದುಕೊಂಡು ಹೋಗುತ್ತಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ಅವರ ಜನ್ಮದಿನದಂದು ನಮಗೆಲ್ಲ ಬಟ್ಟೆ ನೀಡಿದ್ದರು. ಪ್ರತಿ ಬಾರಿ ಬಂದಾಗೆಲ್ಲ ನಮಗೆ ಗಿಫ್ಟ್​ ತಂದುಕೊಡುತ್ತಿದ್ದರು’’ ಎಂದು ಮಕ್ಕಳು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ಓದಿ:

ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

Puneeth Rajkumar: ಬಂಗಾರಪೇಟೆ ಪಾನಿಪುರಿಗೆ ಮನಸೋತಿದ್ದ ಪುನೀತ್​ ರಾಜ್​ಕುಮಾರ್​

Published On - 9:55 am, Wed, 17 November 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?