AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

'ಸು ಫ್ರಮ್ ಸೋ' ಸಿನಿಮಾ ಕೇವಲ 5 ಕೋಟಿ ಬಜೆಟ್‌ನಲ್ಲಿ ನೂರಾರು ಕೋಟಿ ಗಳಿಸಿ ಭಾರಿ ಯಶಸ್ಸು ಕಂಡಿತು. ಈಗ ಈ ಕನ್ನಡ ಹಿಟ್ ಚಿತ್ರ ಮರಾಠಿಗೆ 'ತುಂಬಾಡ್ಚಿ ಮಂಜುಳಾ' ಹೆಸರಿನಲ್ಲಿ ರಿಮೇಕ್ ಆಗಿದೆ. ಹಿಂದಿಯ 'ತುಂಬಾಡ್' ಸಿನಿಮಾದ ಹೆಸರಿನ ಕನೆಕ್ಷನ್ ಮೂಲಕ ಈ ರಿಮೇಕ್ ಗಮನ ಸೆಳೆದಿದೆ. ಹಳ್ಳಿ ಕಥೆ, ಕಾಮಿಡಿ ಅಂಶಗಳುಳ್ಳ ಮರಾಠಿ ಟ್ರೇಲರ್ ಭಾರಿ ಮೆಚ್ಚುಗೆ ಗಳಿಸುತ್ತಿದೆ.

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್
ಸು ಫ್ರಮ್ ಸೋ
TV9 Web
| Edited By: |

Updated on:May 23, 2026 | 9:32 AM

Share

‘ಸು ಫ್ರಮ್ ಸೋ’ ಸಿನಿಮಾ 2025ರ ಯಶಸ್ವಿ ಸಿನಿಮಾಗಳಲ್ಲಿ ಒಂದು. ಕೇವಲ 5 ಕೋಟಿ ರೂಪಾಯಿ ಬಜೆಟ್​​ನಲ್ಲಿ ತಯಾರಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಈ ಚಿತ್ರ ಸದ್ದಿಲ್ಲದೆ ಮರಾಠಿಗೆ ರಿಮೇಕ್ ಆಗಿದೆ. ಮರಾಠಿಯಲ್ಲಿ ಈ ಚಿತ್ರಕ್ಕೆ ದೊಡ್ಡ ಹಿಂದಿ ಸಿನಿಮಾದ ಕನೆಕ್ಷನ್ ಕೊಡಲಾಗಿದೆ. ಈ ಟ್ರೇಲರ್​​ಗೆ ಮರಾಠಿ ಭಾಷೆಯಲ್ಲಿ ಮೆಚ್ಚುಗೆ ಸಿಗುತ್ತಿದೆ.

ಕನ್ನಡದಲ್ಲಿ ‘ಸುಲೋಚನ ಫ್ರಮ್ ಸೋಮೇಶ್ವರ’ ಎಂಬ ಟೈಟಲ್​​ನೊಂದಿಗೆ ಸಿನಿಮಾ ರಿಲೀಸ್ ಆಗಿತ್ತು. ಟೈಟಲ್ ಉದ್ದ ಆಗುತ್ತದೆ ಎಂಬ ಕಾರಣಕ್ಕೆ, ‘ಸು ಫ್ರಮ್ ಸೋ’ ಎಂದು ಇಡಲಾಗಿತ್ತು. ಇದನ್ನು ಮರಾಠಿಯಲ್ಲಿ ‘ತುಂಬಾಡ್ಚಿ ಮಂಜುಳಾ’ ಎಂದು ಇಡಲಾಗಿದೆ. ಅಂದರೆ ತುಂಬಾಡ್​ನ ಮಂಜುಳ ಎಂದರ್ಥ. ಈ ಟೈಟಲ್ ಇಡೋದಕ್ಕೂ ಒಂದು ಕಾರಣ ಇದೆ ಎನ್ನಲಾಗಿದೆ.

‘ತುಂಬಾಡ್’ ಹೆಸರಿನ ಸಿನಿಮಾ ಬಾಲಿವುಡ್​​ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ತುಂಬಾಡ್ ಊರಿಗೆ ಕಾಲ್ಪನಿಕ ಕಥೆಯ ಹಿನ್ನೆಲೆ ಸೇರಿಸಲಾಗಿತ್ತು . ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಕಾರಣದಿಂದಲೇ ತುಂಬಾಡ್ ಹೆಸರನ್ನು ಸಿನಿಮಾಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಾ ಇದೆ.

ಇನ್ನು, ‘ತುಂಬಾಡ್ಚಿ ಮಂಜುಳಾ’ ಚಿತ್ರ ಬಹುತೇಕ ‘ಸು ಫ್ರಮ್ ಸೋ’ ಮಾದರಿಯಲ್ಲೇ ಇದೆ. ಹಳ್ಳಿ ಕಥೆ, ಕಾಮಿಡಿ ಮೊದಲಾದ ವಿಷಯಗಳನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ‘ಸು ಫ್ರಮ್ ಸೋ’ ಟ್ರೇಲರ್​​ನಲ್ಲಿ ಗುರೂಜಿಯ ದರ್ಶನ ಆಗಿರಲಿಲ್ಲ, ಆದರೆ, ಮರಾಠಿ ಟ್ರೇಲರ್​​ನಲ್ಲಿ ಇದನ್ನು ತೋರಿಸಲಾಗಿದೆ.

ಇದನ್ನೂ ಓದಿ: ‘ಸು ಫ್ರಮ್ ಸೋ’ ಸುಮೇಧ್ ಬತ್ತಳಿಕೆಯಿಂದ ಬಂತು ‘ತುಳಸಿ’; ಹಾಡು ಕಿವಿಗೆ ಇಂಪು

ಮರಾಠಿಯಲ್ಲಿ ಜಿತೇಂದ್ರ ಜೋಶಿ, ಓಂ ಭುಟ್ಕರ್,ಮಾರ್ಕಂಡ್ ಅನಸ್ಪುರೆ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ವಿವಿಧ್ ಕೊರಗಾಂವ್ಕರ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:22 am, Sat, 23 May 26

Follow Us
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ