AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು? ಇಲ್ಲಿದೆ ವಿವರ

ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಕನ್ನಡ ಚಿತ್ರವು 50 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್ ಮಾಡಿದೆ. ಚಿತ್ರದ ಯಶಸ್ಸಿನಿಂದಾಗಿ ಅನೇಕ ಕಲಾವಿದರಿಗೆ ಮನ್ನಣೆ ದೊರೆತಿವೆ. ಈ ಚಿತ್ರದ ಗಳಿಕೆಯ ವಿವರಗಳು ಮತ್ತು ಯಶಸ್ಸಿನ ಹಿಂದಿನ ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.

50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು? ಇಲ್ಲಿದೆ ವಿವರ
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on: Aug 07, 2025 | 7:37 AM

Share

ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So Movie) 50 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಂಡಿದ್ದಾರೆ. ನಿರ್ದೇಶಕ ಜೆಪಿ ತುಮಿನಾಡ ಮೊದಲ ಪ್ರಯತ್ನದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ನಗೆ ಗಡಲಿನಲ್ಲಿ ತೇಲಿಸುತ್ತಾ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಕೊಡುವ ಚಿತ್ರ ‘ಸು ಫ್ರಮ್ ಸೋ’. ಈ ಸಿನಿಮಾ ವಿವಿಧ ಹಂತಗಳಲ್ಲಿ ಗಳಿಕೆ ಮಾಡಿದೆ. ಆ ಬಗ್ಗೆ ಇಲ್ಲಿ ಸಂಪೂರ್ಣ ವಿವರ ಇದೆ.

‘ಸು ಫ್ರಮ್ ಸೋ’ ಸಿನಿಮಾ ಮೊದಲ ದಿನ (ಜುಲೈ 25) ಕಲೆಕ್ಷನ್ ಮಾಡಿದ್ದು ಕೇವಲ 78 ಲಕ್ಷ ರೂಪಾಯಿ. ಆ ಬಳಿಕ ಸಿನಿಮಾಗೆ ಶೋಗಳ ಸಂಖ್ಯೆ ಹೆಚ್ಚಿತು. ಜುಲೈ 27ರಿಂದ ಆಗಸ್ಟ್ 5ರವರೆಗೆ ಸಿನಿಮಾ ನಿರಂತರವಾಗಿ 3+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವುದು ಚಿತ್ರದ ಹೆಚ್ಚುಗಾರಿಕೆ. ಆಗಸ್ಟ್ 6ರಂದು ಸುಮಾರು ಎರಡೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.  ಈ ಸಿನಿಮಾದ ಕಲೆಕ್ಷನ್ ಅನೇಕರಿಗೆ ಅಚ್ಚರಿ ತಂದಿದೆ. ಕನ್ನಡ ಸಿನಿಮಾ ನೋಡೋಕೆ ಪ್ರೇಕ್ಷಕರಿಲ್ಲ ಎಂದು ಬೇಸರ ಪಟ್ಟುಕೊಳ್ಳುತ್ತಿದ್ದವರು, ಈಗ ಟಿಕೆಟ್ ಸಿಗುತ್ತಿಲ್ಲ ಎಂದು ಒದ್ದಾಡುವ ಸ್ಥಿತಿ ನಿರ್ಮಾಣ ಆಗಿದೆ.

‘ಸು ಫ್ರಮ್ ಸೋ’ ಸಿನಿಮಾ ಈವರೆಗೆ 55 ಕೋಟಿ ರೂಪಾಯಿಗೂ ಅಧಿ ಕಲೆಕ್ಷನ್ ಮಾಡಿದೆ ಎಂದು sacnilk ವರದಿ ಹೇಳಿದೆ. ಕನ್ನಡ ಒಂದರಿಂದಲೇ ಚಿತ್ರಕ್ಕೆ ಸರಿ ಸುಮಾರು 50 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ವಿದೇಶದಿಂದ ಸಿನಿಮಾಗೆ 4 ಕೋಟಿ ರೂಪಾಯಿ ಹರಿದು ಬಂದಿದೆ. ಮಲಯಾಳಂ ಭಾಷೆಯಿಂದ 1.35 ಕೋಟಿ ರೂಪಾಯಿ ಗಳಿಕೆ ಆಗಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ
Image
ಪತಿಗೆ ಎಂದೂ ಮರೆಯಲಾರದ ಉಡುಗೊರೆ ಕೊಟ್ಟ ಸೋನಲ್; ಭಾವುಕರಾಗಿ ಕೈ ಮುಗಿದ ತರುಣ್
Image
ಜೂ. ಎನ್​ಟಿಆರ್​ಗೆ ಸಿದ್ಧತೆಯೇ ಬೇಡ; ಡ್ಯಾನ್ಸ್ ಸ್ಟೆಪ್ ನೋಡಿ ದಂಗಾದ ಹೃತಿಕ್
Image
ರಾಜ್ ಬಿ. ಶೆಟ್ಟಿ ಬಳಿ ಇವೆ ಮೂರು ಅದ್ಭುತ ಪ್ರಾಜೆಕ್ಟ್​​ಗಳು; ಇಲ್ಲಿದೆ ವಿವರ
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

‘ಸು ಫ್ರಮ್ ಸೋ’ ಸಿನಿಮಾ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಹಲವರು ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಿಸಿ ಬಂದಿದ್ದಾರೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅನೇಕ ಕಲಾವಿದರ ವೃತ್ತಿ ಜೀವನಕ್ಕೆ ಹೆಚ್ಚು ಮೈಲೇಜ್ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ಬಾವನ ಬದುಕು ಬದಲಿಸಿತು ರಿಷಬ್ ಮಾಡಿದ್ದ ಆ ಒಂದು ಆಡಿಷನ್; ಪುಷ್ಪರಾಜ್ ಜೀವನದ ಸ್ವಾರಸ್ಯಕರ ಕಥೆ

‘ಸು ಫ್ರಮ್ ಸೋ’ ಸಿನಿಮಾದ ಒಟಿಟಿ ಹಾಗೂ ಟಿವಿ ಹಕ್ಕಿನ ಮಾರಾಟದ ಬಗ್ಗೆ ಒಪ್ಪಂದ ಆಗಿದೆ ಎನ್ನಲಾಗುತ್ತಿದೆ. ಸಿನಿಮಾ ಥಿಯೇಟರ್​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವುದರಿಂದ ಸದ್ಯಕ್ಕಂತೂ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡೋದು ಅನುಮಾನವೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!