AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ರೂಪಾಯಿ ಗಳಿಸಿದ ‘ಸು ಫ್ರಮ್ ಸೋ’: ಇಷ್ಟಕ್ಕೇ ನಿಲ್ಲಲ್ಲ ಕಲೆಕ್ಷನ್

ಜನಮೆಚ್ಚಿದ ‘ಸು ಫ್ರಮ್ ಸೋ’ ಸಿನಿಮಾ ಪ್ರತಿ ವೀಕೆಂಡ್​​ನಲ್ಲೂ ಅತ್ಯುತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ. ನಿರ್ಮಾಪಕನಾಗಿ ರಾಜ್ ಬಿ. ಶೆಟ್ಟಿ, ನಿರ್ದೇಶಕನಾಗಿ ಜೆ.ಪಿ. ತುಮಿನಾಡು ಅವರಿಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ‘ವಾರ್ 2’, ‘ಕೂಲಿ 2’ ಸಿನಿಮಾಗಳ ಪೈಪೋಟಿ ಇದ್ದರೂ ‘ಸು ಫ್ರಮ್ ಸೋ’ ಸಿನಿಮಾದ ಕಲೆಕ್ಷನ್ 100 ಕೋಟಿ ರೂಪಾಯಿ ಗಡಿ ದಾಟಿದೆ.

100 ಕೋಟಿ ರೂಪಾಯಿ ಗಳಿಸಿದ ‘ಸು ಫ್ರಮ್ ಸೋ’: ಇಷ್ಟಕ್ಕೇ ನಿಲ್ಲಲ್ಲ ಕಲೆಕ್ಷನ್
Su From So
ಮದನ್​ ಕುಮಾರ್​
|

Updated on: Aug 17, 2025 | 7:17 AM

Share

ಹಾರರ್ ಕಾಮಿಡಿ ಕಥಾಹಂದರದ ‘ಸು ಫ್ರಮ್ ಸೋ’ (Su From So) ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತದೆ ಎಂಬುದನ್ನು ಬಿಡುಗಡೆಗೂ ಮುನ್ನ ಯಾರೂ ಊಹಿಸಿರಲಿಲ್ಲ. ಎಷ್ಟೋ ಜನರಿಗೆ ಈ ರೀತಿಯ ಒಂದು ಸಿನಿಮಾ ಬರುತ್ತಿದೆ ಎಂಬುದೇ ತಿಳಿದಿರಲಿಲ್ಲ. ಚಿತ್ರದ ಹೆಸರು ಹೇಳಲು ಕೆಲವರಿಗೆ ನಾಲಿಗೆ ಹೊರಳುತ್ತಿರಲಿಲ್ಲ. ಆದರೆ ಬಿಡುಗಡೆ ಆಗಿ ಉತ್ತಮ ವಿಮರ್ಶೆ ಪಡೆದುಕೊಳ್ಳಲು ಆರಂಭಿಸಿದ ಬಳಿಕ ಎಲ್ಲರ ಬಾಯಲ್ಲೂ ಇದೇ ಸಿನಿಮಾದ ಚರ್ಚೆ ಶುರು ಆಯಿತು. ಅದರ ಪರಿಣಾಮವಾಗಿ ‘ಸು ಫ್ರಮ್ ಸೋ’ ಸಿನಿಮಾ ಅದ್ಭುತ ಕಲೆಕ್ಷನ್ (Su From So Box Office Collection) ಮಾಡಿದೆ. sacnilk ವರದಿ ಪ್ರಕಾರ, ವಿಶ್ವಾದ್ಯಂತ ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ರಾಜ್ ಬಿ. ಶೆಟ್ಟಿ (Raj B. Shetty) ಮತ್ತು ಅವರ ತಂಡಕ್ಕೆ ಈ ಯಶಸ್ಸಿನಿಂದ ಸಖತ್ ಖುಷಿ ಆಗಿದೆ.

ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ 100 ಕೋಟಿ ರೂಪಾಯಿ ಯಶಸ್ಸು ಕಾಣುವುದು ಎಂದರೆ ತಮಾಷೆಯೇ ಅಲ್ಲ. ಅಂಥ ಸಾಧನೆಯನ್ನು ಜೆ.ಪಿ. ತುಮಿನಾಡು ಅವರು ಮಾಡಿದ್ದಾರೆ. ಅವರೇ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಕೂಡ ಮಾಡಿರುವುದರಿಂದ ಅವರಿಗೆ ಇದು ಡಬಲ್ ಗೆಲುವು.

ಈ ಸಿನಿಮಾದಲ್ಲಿ ಜೆ.ಪಿ. ತುಮಿನಾಡು, ರಾಜ್ ಬಿ. ಶೆಟ್ಟಿ, ದೀಪಕ್ ರೈ ಪಣಾಜೆ, ಪ್ರಕಾಶ್ ತುಮಿನಾಡು, ಸಂಧ್ಯಾ ಅರಕೆರೆ, ಶನೀಲ್ ಗೌತಮ್, ಮೈಮ್ ರಾಮದಾಸ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿದ್ದರೂ ಕೂಡ ‘ಸು ಫ್ರಮ್ ಸೋ’ ಹವಾ ಕಡಿಮೆ ಆಗಿಲ್ಲ.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?
Image
‘ಸು ಫ್ರಮ್ ಸೋ’ ಚಿತ್ರಕ್ಕೆ ಸೀಕ್ವೆಲ್ ಬರುತ್ತಾ? ರಾಜ್ ಪ್ಲ್ಯಾನೇ ಬೇರೆ
Image
‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮ್ಮಿನಾಡ್ ಯಾರು? ಹಿನ್ನೆಲೆ ಏನು?
Image
‘ಸು ಫ್ರಮ್ ಸೋ’ ಚಿತ್ರದಲ್ಲಿ ಈ ಪಾತ್ರಗಳೇ ಹೈಲೈಟ್; ಮಿಸ್ ಮಾಡಲೇಬಾರದು

ಬಿಡುಗಡೆ ಆಗಿ 24 ದಿನ ಕಳೆದರೂ ಸಹ ‘ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. 23 ದಿನಕ್ಕೆ ಕರ್ನಾಟಕದಲ್ಲಿ ಈ ಸಿನಿಮಾ 69.2 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮಲಯಾಳಂನಲ್ಲಿ 5.07 ಕೋಟಿ ರೂಪಾಯಿ, ತೆಲುಗಿನಲ್ಲಿ 1.23 ಕೋಟಿ ರೂಪಾಯಿ ಗಳಿಸಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 100.99 ಕೋಟಿ ರೂಪಾಯಿ ಆಗಲಿದೆ.

ಇದನ್ನೂ ಓದಿ: ‘ಸು ಫ್ರಮ್ ಸೋ’ ರವಿ ಅಣ್ಣನಿಗೆ ಪ್ರೇಕ್ಷಕರಿಂದ ಸಿಕ್ತು ಸಿಕ್ಕಾಪಟ್ಟೆ ಪ್ರೀತಿ

ಆಗಸ್ಟ್ 14ರಂದು ‘ಕೂಲಿ’ ಮತ್ತು ‘ವಾರ್ 2’ ಸಿನಿಮಾಗಳು ಬಿಡುಗಡೆ ಆದವು. ಆ ಸಿನಿಮಾಗಳು ಸಾಕಷ್ಟು ಪರದೆಗಳನ್ನು ಆಕ್ರಮಿಸಿಕೊಂಡವು. ಹಾಗಿದ್ದರೂ ಕೂಡ ‘ಸು ಫ್ರಮ್ ಸೋ’ ಸಿನಿಮಾದ ಹವಾ ತಗ್ಗಿಲ್ಲ. ಬೆಂಗಳೂರಿನಲ್ಲಿ ಈಗಲೂ ಕೂಡ ಈ ಸಿನಿಮಾ ಅನೇಕ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​​ಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರತಿ ವೀಕೆಂಡ್​​ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮವಾಗಿ ಕಲೆಕ್ಷನ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!