AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

Bandaru Bandaru Baava Bandaru Song: ‘ಸು ಫ್ರಮ್ ಸೋ’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸನ್ನು ಕಂಡಿದೆ. ಪುಷ್ಪರಾಜ್ ಬೋಳಾರ್ ಅವರ "ಬಾವ" ಪಾತ್ರ ವಿಶೇಷವಾಗಿ ಜನಪ್ರಿಯವಾಗಿದೆ. ಅವರ ನಟನೆ ಹಾಗೂ "ಬಂದರು ಬಂದರು ಬಾವ ಬಂದರು" ಹಾಡು ವೈರಲ್ ಆಗಿದೆ.

‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?
ಪುಷ್ಪರಾಜ್
ರಾಜೇಶ್ ದುಗ್ಗುಮನೆ
|

Updated on:Jul 31, 2025 | 9:01 AM

Share

‘ಸು ಫ್ರಮ್ ಸೋ’ ಸಿನಿಮಾ ಸಾಕಷ್ಟು ಜನಪ್ರಿಯತೆ ಪಡೆದಿದೆ. ಈ ಚಿತ್ರದ ಪ್ರತಿ ಪಾತ್ರಗಳೂ ಹೈಲೈಟ್ ಆಗಿವೆ. ಈ ಸಿನಿಮಾದಿಂದ ನಿರ್ಮಾಪಕ ರಾಜ್ ಬಿ. ಶೆಟ್ಟಿ ಗೆದ್ದು ಬೀಗಿದ್ದಾರೆ. ನಿರ್ದೇಶಕ ಜೆಪಿ ತುಮಿನಾಡ ಅವರು ಮೊದಲ ಪ್ರಯತ್ನದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಈಗ ‘ಸು ಫ್ರಮ್ ಸೋ’ (Su From So) ಚಿತ್ರದ ಬಾವ ಅವರು ಸಿನಿಮಾ ಗೆದ್ದ ಖುಷಿಯಲ್ಲಿ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಸು ಫ್ರಮ್ ಸೋ’ ಸಿನಿಮಾದಲ್ಲಿ ಬಾವ ಪಾತ್ರ ಹೈಲೈಟ್ ಆಗಿದೆ. ಈ ಪಾತ್ರ ಮಾಡಿದ್ದು ಪುಷ್ಪರಾಜ್ ಬೋಳಾರ್ ಅವರು. ತುಳು ನಾಟಕ ಹಾಗೂ ಸಿನಿಮಾಗಳಲ್ಲಿ ಪುಷ್ಪರಾಜ್ ನಟಿಸಿ ಗಮನ ಸೆಳೆದಿದ್ದಾರೆ. ಇವರು ಕರಾವಳಿ ಪ್ರತಿಭೆ. ಈ ಮೊದಲು ‘ಕಾಂತಾರ’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ರಿಷಬ್ ಹಾಗೂ ಇತರರು ಜೈಲಿನಲ್ಲಿ ಇದ್ದಾಗ ನಗು ಉಕ್ಕಿಸುವ ಹಾಸ್ಯ ಮಾಡುತ್ತಾರೆ. ‘ಸು ಫ್ರಮ್ ಸೋ’ನಲ್ಲಿ ಅವರು ಮಾಡಿದ ಬಾವನ ಪಾತ್ರಕ್ಕೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಈ ಪಾತ್ರದ ಎಂಟ್ರಿ ವೇಳೆ ವಿಶೇಷ ಹಾಡನ್ನು ಕೂಡ ಹಾಕಲಾಗುತ್ತದೆ. ಈ ಹಾಡು ಕೂಡ ವೈರಲ್ ಆಗಿದೆ.

ಇದನ್ನೂ ಓದಿ: ವಾರದ ಮಧ್ಯವೂ ‘ಸು ಫ್ರಮ್ ಸೋ’ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

ಇದನ್ನೂ ಓದಿ
Image
ಈ ಫೋಟೋದಲ್ಲಿರೋ ಬಾಲಕಿ ಈಗ ಸ್ಟಾರ್ ನಟಿ; ಯಾರೆಂದು ಗುರುತಿಸಿ
Image
ಫೇಕ್ ಅಕೌಂಟ್ ಮಾಡಿದವರಿಗೆ ಸೂರ್ಯವಂಶ ಸ್ಟೈಲ್​ನಲ್ಲಿ ಎಸ್. ನಾರಾಯಣ್ ಕೌಂಟರ್
Image
ವಾರದ ಮಧ್ಯವೂ ‘ಸು ಫ್ರಮ್ ಸೋ’ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್
Image
ಬಂಡುಕೋರನ ಅವತಾರದಲ್ಲಿ ರಿಷಬ್; ರಾಜಮೌಳಿ ಗರಡಿಯ ನಿರ್ದೇಶಕನ ಜೊತೆ ಸಿನಿಮಾ

‘ಸು ಫ್ರಮ್ ಸೋ’ ಸಿನಿಮಾದಲ್ಲಿ ‘ಬಂದರು ಬಂದರು ಬಾವ ಬಂದರು..’ ಎಂಬ ಹಾಡು ಬಂದರೆ ಪುಷ್ಪರಾಜ್ ಎಂಟ್ರಿ ಆಯಿತು ಎಂದು ತಿಳಿದುಕೊಳ್ಳಬಹುದು. ಅವರಿಗೆ ಸಿಕ್ಕ ಜನಪ್ರಿಯತೆ ಬಗ್ಗೆ ಅವರು ಮಾತನಾಡಿದ್ದಾರೆ. ‘ಒಂದೊಳ್ಳೆಯ ಪಾತ್ರ ಸಿಕ್ಕಿದೆ. ನಾನು ಈ ಪಾತ್ರಕ್ಕೆ ಎಷ್ಟು ಜೀವ ತುಂಬಿಸಿದೆನೋ ಗೊತ್ತಿಲ್ಲ. ಅದು ನಿರ್ದೇಶಕರಿಗೆ ಬಿಟ್ಟಿದ್ದು. ಜನರು ಪಾತ್ರ ಇಷ್ಟಪಡುತ್ತಿದ್ದಾರೆ. ಎಲ್ಲರೂ ಸಿನಿಮಾನ ಸಪೋರ್ಟ್ ಮಾಡಬೇಕು’ ಎಂದು ಪುಷ್ಪರಾಜ್ ಕೋರಿದ್ದಾರೆ.

ಬಾವ ಹಾಡು

‘ಸು ಫ್ರಮ್ ಸೋ’ ಸಿನಿಮಾದ ಒಟ್ಟಾರೆ ಕಲೆಕ್ಷನ್ 20 ಕೋಟಿ ರೂಪಾಯಿ ಸಮೀಪಿಸಿದೆ. ಈ ಚಿತ್ರವು ವಾರದ ದಿನವೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಒರಾಯ್​ನ್, ಮಾಲ್ ಆಫ್ ಏಷ್ಯಾ ಮೊದಲಾದ ಕಡೆಗಳಲ್ಲಿ ಸಿನಿಮಾಗೆ 15-20 ಶೋಗಳನ್ನು ನೀಡಲಾಗುತ್ತಿದೆ. ಈ ಕಾರಣದಿಂದಲೇ ಸಿನಿಮಾದ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಇನ್ನೂ ಕೆಲ ವಾರ ಸಿನಿಮಾದ ಅಬ್ಬರ ಮುಂದುವರಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:54 am, Thu, 31 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?