AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನಕ್ಕೆ ಮೂರು ಪಟ್ಟಾಯ್ತು ‘ಸು ಫ್ರಮ್ ಸೋ’ ಶೋ ಸಂಖ್ಯೆ; ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ

‘ಸು ಫ್ರಮ್ ಸೋ’ ಚಿತ್ರದ ನಿರ್ಮಾಪಕ ರಾಜ್ ಬಿ ಶೆಟ್ಟಿ ಅವರು ಸಾಂಪ್ರದಾಯಿಕ ಪ್ರಚಾರದಿಂದ ದೂರ ಉಳಿದಿದ್ದಾರೆ. ಚಿತ್ರವನ್ನು ಮುಂಚಿತವಾಗಿ ಪ್ರೇಕ್ಷಕರಿಗೆ ತೋರಿಸುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದ್ದಾರೆ. ಚಿತ್ರದ ಬಾಯಿ ಮಾತಿನ ಪ್ರಚಾರವೇ ಟಿಕೆಟ್ ಮಾರಾಟ ಹೆಚ್ಚಳಕ್ಕೆ ಕಾರಣ. ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಚಿತ್ರದ ಜೊತೆ ಬಿಡುಗಡೆಯಾದರೂ, ‘ಸು ಫ್ರಮ್ ಸೋ’ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆ.

ಒಂದೇ ದಿನಕ್ಕೆ ಮೂರು ಪಟ್ಟಾಯ್ತು ‘ಸು ಫ್ರಮ್ ಸೋ’ ಶೋ ಸಂಖ್ಯೆ; ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on: Jul 26, 2025 | 12:08 PM

Share

ಸಾಮಾನ್ಯವಾಗಿ ಸಿನಿಮಾ ರಿಲೀಸ್ ಬಂತು ಎಂದರೆ ಚಿತ್ರ ತಂಡದವರು ಸಂದರ್ಶನ ನೀಡಿತ್ತಾರೆ. ಸಿನಿಮಾ ಪೋಸ್ಟರ್​ಗಳನ್ನು ರಸ್ತೆಗಳ ಬದಿಯಲ್ಲಿರೋ ಗೋಡೆಗೆ ಅಂಟಿಸುವ ಕೆಲಸ ಮಾಡುತ್ತಾರೆ. ಸಿನಿಮಾ ಜನರ ತಲುಪಲು ಏನೆಲ್ಲ ಬೇಕೋ ಅದೆಲ್ಲ ಪ್ರಯತ್ನವನ್ನು ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡ ಪದ್ಧತಿ. ಹಾಗಂತ ಇದು ತಪ್ಪು ಕೂಡ ಅಲ್ಲ. ‘ಸು ಫ್ರಮ್ ಸೋ’ ನಿರ್ಮಾಪಕ ರಾಜ್​ ಬಿ ಶೆಟ್ಟಿ ಒಂದು ಹೊಸ ಪ್ರಯತ್ನ ಮಾಡಿ ಗೆದ್ದಿದ್ದಾರೆ. ‘ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರೇ ಬರುತ್ತಿಲ್ಲ’ ಎಂಬ ಮಾತಿನಿಂದ ‘ಚಿತ್ರಕ್ಕೆ ಟಿಕೇಟ್​ಗಳೇ ಸಿಗುತ್ತಿಲ್ಲ, ಎಲ್ಲಾ ಹೌಸ್ ಫುಲ್ ಆಗಿದೆ’ ಎಂಬ ಮಾತು ಬರುವಂತೆ ಮಾಡಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾ (Su From So Movie) ಗೆಲುವಿನ ಬಳಿಕ ಅವರು ಟಿವಿ9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ.

ಶೋ ತ್ರಿಬಲ್ ಆಯ್ತು..

ಕನ್ನಡ ಸಿನಿಮಾಗಳಿಗೆ ಶೋ ಸಿಗಲ್ಲ, ಪರ ಭಾಷೆಯವರು ಬಂದು ನಮ್ಮ ಶೋ ಕಸಿದುಕೊಳ್ಳುತ್ತಾರೆ ಎಂಬಿತ್ಯಾದಿ ಆರೋಪಗಳಿವೆ. ಆದರೆ, ‘ಸು ಫ್ರಮ್ ಸೋ’ ವಿಚಾರದಲ್ಲಿ ಅದು ಉಲ್ಟಾ ಆಗಿದೆ. ‘ದೊಡ್ಡ ಸಿನಿಮಾಗಳ ಮಧ್ಯೆ ಬರ್ತಿದೀವಿ ಎಂದಾಗ ಅನೇಕರು ಬೇಡ ಎಂದು ಸಲಹೆ ನೀಡಿದರು. ಆದರೆ, ನಾನು ಒಂದು ಸಂದೇಶ ಕೊಡಬೇಕಿತ್ತು. ಹೀಗಾಗಿ, ರಿಸ್ಕ್ ತೆಗೆದುಕೊಂಡು ಜುಲೈ 25ಕ್ಕೆ ಬಂದೆ. ಸಂದರ್ಶನ ಕೊಡಲು ಟಿವಿ ಮುಂದೆ ಕೂರಲ್ಲ, ಪೋಸ್ಟರ್ ಅಂಟಿಸಲ್ಲ ಎಂದು ಮೊದಲೇ ನಿರ್ಧರಿಸಿದ್ದೆ. ಬೇರೆ ರೀತಿ ಪ್ರಮೋಟ್ ಮಾಡಬೇಕು ಎಂದು ಅಂದುಕೊಂಡಿದ್ದೆ. ಇದು ವರ್ಕ್ ಆಗುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇರಲಿಲ್ಲ. ಏಕೆಂದರೆ ಹಿಂದೆ ಯಾರೂ ಮಾಡಿರಲಿಲ್ಲ. ಮೊದಲ ದಿನ ಬೆಂಗಳೂರಿನಲ್ಲಿ 78 ಶೋ ಕೊಡಲಾಗಿತ್ತು. ಎಡನೇ ದಿನಕ್ಕೆ ಅದು 210 ಶೋಗಳಾದವು’ ಎಂದು ಮಾಹಿತಿ ನೀಡಿದ್ದಾರೆ ರಾಜ್. ಈ ಮೂಲಕ ಒಂದೇ ದಿನಕ್ಕೆ ಶೋ ಮೂರು ಪಟ್ಟಾಗಿದೆ.

ಪ್ರಚಾರಕ್ಕೆ ಹೊಸ ತಂತ್ರ

ರಾಜ್ ಬಿ ಶೆಟ್ಟಿ ಅವರು ಈ ಬಾರಿ ಮಾಡಿದ ಹೊಸ ತಂತ್ರ ಎಂದರೆ ಸಿನಿಮಾ ರಿಲೀಸ್​ಗೆ ನಾಲ್ಕೈದು ದಿನ ಇರುವಾಗಲೇ ಜನರಿಗೆ ಸಿನಿಮಾ ತೋರಿಸಿದ್ದಾರೆ. ಸಿನಿಮಾ ನೋಡುವಾಗ ಜನರ ಭಾವನೆಯನ್ನು ಕ್ಯಾಪ್ಚರ್ ಮಾಡಿ ಅದನ್ನು ಜನರ ಮುಂದಿಡುವ ಕೆಲಸ ಮಾಡಿದ್ದಾರೆ. ಈ ತಂತ್ರ ಕೆಲಸ ಮಾಡಿದೆ. ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಬಾಯ್ಮಾತಿನ ಪ್ರಚಾರ ನೀಡಿದ್ದಾರೆ.

ಇದನ್ನೂ ಓದಿ
Image
ಕಡಿಮೆ ಶೋ ಕೊಟ್ಟರೂ ಸು ಫ್ರಮ್ ಸೋ ಆರ್ಭಟದ ಕಲೆಕ್ಷನ್; ಬಾಕ್ಸ್ ಆಫೀಸ್ ಉಡೀಸ್
Image
ಹರಿ ಹರ ವೀರ ಮಲ್ಲು ಕಲೆಕ್ಷನ್; ಮೊದಲ ದಿನ ಭರ್ಜರಿ ಎರಡನೇ ದಿನ ಒಂದಂಕಿ ಗಳಿಕೆ
Image
Su from So Review: ನಗುವಿನ ಅಲೆಯಲ್ಲಿ ತೇಲಿಸೋ ಸುಲೋಚನಾ
Image
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ

73 ಸಾವಿರ ಟಿಕೆಟ್

‘ನಾನು ಟೋಬಿ ಸಿನಿಮಾಗೆ ತುಂಬಾನೇ ಪ್ರಚಾರ ಮಾಡಿದ್ದೆ. ಅದಕ್ಕೆ ಮೊದಲ ದಿನ 43 ಸಾವಿರ ಟಿಕೆಟ್ ಮಾರಾಟ ಆಗಿತ್ತು. ಸು ಫ್ರಮ್ ಸೋಗೆ ಮೊದಲ ದಿನ 73 ಸಾವಿರ ಟಿಕೆಟ್ ಮಾರಾಟ ಆಗಿದೆ. ಜನರಿಂದ ಇನ್ನೂ ಹೆಚ್ಚು ಏನನ್ನು ಕೇಳಲು ಸಾಧ್ಯ’ ಎಂದು ಸಂತಸದ ಧ್ವನಿಯಲ್ಲಿ ರಾಜ್ ಮಾತನಾಡಿದರು.

ಇದನ್ನೂ ಓದಿ: ಬುಕಿಂಗ್​ನಲ್ಲಿ ಪವನ್ ಕಲ್ಯಾಣ್ ಚಿತ್ರವನ್ನೂ ಬೀಟ್ ಮಾಡಿದ ‘ಸು ಫ್ರಮ್ ಸೋ’

ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಸಿನಿಮಾ ಕೂಡ ಈ ವಾರ ರಿಲೀಸ್ ಆಗಿದೆ. ಅನೇಕ ಕಡೆಗಳಲ್ಲಿ ಪವನ್ ಸಿನಿಮಾ ತೆಗೆದು ‘ಸು ಫ್ರಮ್ ಸೋ’ ಶೋ ಹಾಕಲಾಗಿದೆ. ‘ಅನೇಕ ಕಡೆಗಳಲ್ಲಿ ಮೊದಲ ದಿನ ನಮಗೆ ಒಂದು ಶೋ ಮಾತ್ರ ಕೊಡಲಾಗಿತ್ತು. ಆ ಬಳಿಕ ಅದು ನೇರವಾಗಿ ನಾಲ್ಕಕ್ಕೆ ಏರಿಕೆ ಆಗಿದೆ. ಶೋ ನೀಡಿ ಎಂದು ನಾವು ಕೇಳುತ್ತಿಲ್ಲ. ಜನರ ಬೇಡಿಕೆಗೆ ತಕ್ಕಂತೆ ಅವರೇ ಶೋ ಸಂಖ್ಯೆ ಹೆಚ್ಚಿಸುತ್ತಿದ್ದಾರೆ’ ಎಂದಿದ್ದಾರೆ ರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ