AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ಗೆ ಒಟಿಟಿಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?

‘ಸು ಫ್ರಮ್ ಸೋ’ ಸಿನಿಮಾ ಥಿಯೇಟರ್‌ಗಳಲ್ಲಿ ದೊಡ್ಡ ಯಶಸ್ಸು ಕಂಡಿದೆ. 120 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಆದರೆ, ಒಟಿಟಿಯಲ್ಲಿ ವಿಮರ್ಶೆಗಳು ಬಹಳ ಭಿನ್ನವಾಗಿವೆ.‘ನಾವು ಸಿನಿಮಾನ ಥಿಯೇಟರ್ನಲ್ಲಿ ನೋಡದೇ ಇದ್ದಿದ್ದೇ ಒಳ್ಳೆಯದಾಯ್ತು, ಇದು ಓವರ್ ರೇಟೆಡ್ ಚಿತ್ರ’ ಎಂದೆಲ್ಲ ಬರೆದುಕೊಳ್ಳುತ್ತಿದ್ದಾರೆ. ಈ ರೀತಿ ಹೇಳಲು ಅನೇಕ ಕಾರಣಗಳು ಇವೆ.

‘ಸು ಫ್ರಮ್ ಸೋ’ಗೆ ಒಟಿಟಿಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on: Sep 11, 2025 | 7:06 AM

Share

‘ಸು ಫ್ರಮ್ ಸೋ’ ಸಿನಿಮಾ (Su From So) ಥಿಯೇಟರ್​ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿದ್ದು ಗೊತ್ತೇ ಇದೆ. ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ 120 ಕೋಟಿ ರೂಪಾಯಿ ಬಾಚಿಕೊಂಡಿದೆ. ಕನ್ನಡದ ಒಂದು ಸಿನಿಮಾ 120 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದರೆ ಅದು ಸುಲಭದ ಮಾತಲ್ಲ. ಅಷ್ಟು ಉತ್ತಮ ವಿಮರ್ಶೆ ಪಡೆದಿದ್ದರಿಂದಲೇ ಸಿನಿಮಾ ಗೆಲುವು ಕಂಡಿದೆ. ಆದರೆ, ಒಟಿಟಿಯಲ್ಲಿ ನೋಡಿದ ಕೆಲವರು ಇದಕ್ಕೆ ನೆಗೆಟಿವ್ ವಿಮರ್ಶೆ ನೀಡಿದ್ದಾರೆ.

‘ಸು ಫ್ರಮ್ ಸೋ’ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಗುವ ಕೆಲ ದಿನ ಮೊದಲೇ ಚಿತ್ರಕ್ಕೆ ವಿಶೇಷ ಶೋಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೋನಿಂದ ಸಿನಿಮಾಗೆ ಬಾಯ್ಮಾತಿನ ಪ್ರಚಾರ ಸಿಕ್ಕಿತು. ಮೂರಕ್ಕೂ ಹೆಚ್ಚು ವಾರಗಳು ಸಿನಿಮಾಗೆ ಟಿಕೆಟ್ ಸಿಗದಂತೆ ಆದವು. ಜನರು ಈ ರೇಂಜ್​ಗೆ ಸಿನಿಮಾ ನೋಡಿದ್ದಾರೆ ಎಂದರೆ ಸಿನಿಮಾ ಉತ್ತಮವಾಗಿದೆ ಎಂದೇ ಅರ್ಥ. ಆದರೆ, ಈಗ ಒಟಿಟಿಯಲ್ಲಿ ಸಿನಿಮಾ ನೋಡಿದ ಕೆಲವರು ಕ್ಯಾತೆ ತೆಗೆದಿದ್ದಾರೆ.

ಇದನ್ನೂ ಓದಿ
Image
Video: ‘ತಡ ಮಾಡದೇ ಮಗು ಮಾಡಿಕೊಳ್ಳಿ’ ಎಂದು ಸಲಹೆ; ಓಕೆ ಎಂದ ಅನುಶ್ರೀ
Image
ರಜನಿಕಾಂತ್ ಉದಾಹರಣೆ ನೀಡಿ ಅಮಿತಾಭ್ ಬಚ್ಚನ್​​ಗೆ ಪಾಠ ಮಾಡಿದ ನೆಟ್ಟಿಗರು
Image
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
Image
ಸುಧಾರಾಣಿ ಬಿಗ್ ಬಾಸ್​ಗೆ ಬರ್ತಾರೆ ಎಂದವರಿಗೆ ಉತ್ತರಿಸಿದ ನಟಿ

ಇದನ್ನೂ ಓದಿ: ‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು?  

‘ನಾವು ಸಿನಿಮಾನ ಥಿಯೇಟರ್​ನಲ್ಲಿ ನೋಡದೇ ಇದ್ದಿದ್ದೇ ಒಳ್ಳೆಯದಾಯ್ತು, ಇದು ಓವರ್​ ರೇಟೆಡ್ ಚಿತ್ರ’ ಎಂದೆಲ್ಲ ಬರೆದುಕೊಳ್ಳುತ್ತಿದ್ದಾರೆ. ಈ ರೀತಿ ಹೇಳಲು ಅನೇಕ ಕಾರಣಗಳು ಇವೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಪ್ರೀಮಿಯಮ್ ಸಬ್​ಸ್ಕ್ರಿಪ್ಶನ್ ತೆಗೆದುಕೊಂಡರೆ ಮಾತ್ರ ನಿಮಗೆ ಜಾಹೀರಾತು ಇಲ್ಲದೆ ಸಿನಿಮಾ ನೋಡುವ ಅವಕಾಶ ಸಿಗುತ್ತದೆ. ಇಲ್ಲವಾದಲ್ಲಿ, ಸಿನಿಮಾ ಪೂರ್ಣಗೊಳ್ಳುವುದಕ್ಕೂ ಮೊದಲು ಕನಿಷ್ಠ ಹದಿನೈದು ಬಾರಿ ಜಾಹೀರಾತುಗಳು ಬರುತ್ತವೆ. ಪ್ರತಿ ಬಾರಿ ಜಾಹೀರಾತು ಒಂದು ನಿಮಿಷಕ್ಕೂ ಹೆಚ್ಚು ಸಮಯ ಇರುತ್ತದೆ. ಆ ಸಮಯದಲ್ಲಿ ಗಮನ ಮೊಬೈಲ್ ಕಡೆ ಹೋಗುತ್ತದೆ, ಇಲ್ಲವೇ ಅಡುಗೆ ಮನೆಯ ಸಣ್ಣ ಪುಟ್ಟ ಕೆಲಸ ನೆನಪಾಗುತ್ತದೆ. ಹೀಗಾದಾಗ ಸಿನಿಮಾದ ನಿಜವಾದ ಅನುಭವ ಸೀಗೋದಿಲ್ಲ.

ಇನ್ನು ಸಿನಿಮಾಗಳನ್ನು ತಯಾರಿಸೋದೇ ಥಿಯೇಟರ್ ಅನುಭವಕ್ಕೆ. ಅಲ್ಲಿ ಸಿನಿಮಾ ಬೇರೆಯದೇ ರೀತಿಯ ಅನುಭವ ನೀಡುತ್ತದೆ. ಇದೇ ಅನುಭವವನ್ನು ಮೊಬೈಲ್​ನಲ್ಲೋ ಅಥವಾ ಟಿವಿಯಲ್ಲೋ ನೋಡಿ ಪಡೆಯಲು ಸಾಧ್ಯವಿಲ್ಲ. ಗುಂಪಿನಲ್ಲಿದ್ದಾಗ ಸಣ್ಣ ಸಣ್ಣ ಹಾಸ್ಯಗಳು ಸಾಂಕ್ರಾಮಿಕದಂತೆ ಹರಡಿ ನಗು ತರಿಸುತ್ತವೆ. ಆದರೆ, ಮನೆಯಲ್ಲಿ ಆ ರೀತಿ ಆಗೋದಿಲ್ಲ. ಈ ಕಾರಣದಿಂದಲೂ ಕೆಲವರಿಗೆ ಸಿನಿಮಾ ಇಷ್ಟ ಆಗದೇ ಇರಬಹುದು. ಇನ್ನೂ ಕೆಲವರಿಗೆ ಸಿನಿಮಾದ ನಿಜವಾದ ಆಶಯ ಅಥವಾ ಹಾಸ್ಯದ ಒಳಗಿರೋ ಒಂದೊಳ್ಳೆಯ ಸಂದೇಶ ಅರ್ಥವಾಗದೇ ಇರಬಹುದು. ಈ ಮಧ್ಯೆಯೂ ಕೆಲವರು ಸಿನಿಮಾನ ಅದ್ಭುತ ಎಂದು ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ