AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಬಳಿಕ ತೆಲುಗಿಗೆ ಹೊರಟ ‘ಸು ಫ್ರಮ್ ಸೋ’; ಹಕ್ಕು ಪಡೆಯಲು ನಿರ್ಮಾಣ ಸಂಸ್ಥೆಗಳಿಂದ ಸ್ಪರ್ಧೆ

ಕನ್ನಡದ ಸೂಪರ್ ಹಿಟ್ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ತೆಲುಗು ಡಬ್ಬಿಂಗ್ ಹಕ್ಕುಗಳಿಗೆ ಹಲವು ನಿರ್ಮಾಣ ಸಂಸ್ಥೆಗಳಿಂದ ಬಲವಾದ ಸ್ಪರ್ಧೆ ಏರ್ಪಟ್ಟಿದೆ. ಚಿತ್ರದ ಯಶಸ್ಸು ವಾರದ ದಿನಗಳಲ್ಲೂ ಮುಂದುವರಿದಿದೆ. ಒಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳಿಗೆ ಮಾತುಕತೆಗಳು ನಡೆಯುತ್ತಿವೆ.

ಮಲಯಾಳಂ ಬಳಿಕ ತೆಲುಗಿಗೆ ಹೊರಟ ‘ಸು ಫ್ರಮ್ ಸೋ’; ಹಕ್ಕು ಪಡೆಯಲು ನಿರ್ಮಾಣ ಸಂಸ್ಥೆಗಳಿಂದ ಸ್ಪರ್ಧೆ
ಸು ಫ್ರಮ್ ಸೋ ಸಿನಿಮಾ ಪೋಸ್ಟರ್ ಹಾಗೂ ರಾಜ್ ಬಿ. ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 29, 2025 | 5:30 PM

Share

ಕನ್ನಡದಲ್ಲಿ ರಾಜ್ ಬಿ. ಶೆಟ್ಟಿ ನಿರ್ಮಾಣ ಮಾಡಿದ, ಜೆಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾ (Su From So) ಸೂಪರ್ ಹಿಟ್ ಆಗಿದೆ. ಇತ್ತೀಚಿಗಿನ ವರ್ಷಗಳಲ್ಲಿ ಕನ್ನಡದ ಯಾವ ಕಡಿಮೆ ಬಜೆಟ್​ನ ಚಿತ್ರವೂ ಇಷ್ಟು ದೊಡ್ಡ ಮಟ್ಟದ ಬುಕಿಂಗ್​ನ ಕಂಡಿರಲಿಲ್ಲ ಅನ್ನೋದು ವಿಶೇಷ. ರಂಗಭೂಮಿ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಈ ಚಿತ್ರ ಈಗಾಗಲೇ ಮಲಯಾಳಂನಲ್ಲಿ ರಿಲೀಸ್ ಆಗಲು ರೆಡಿ ಆಗಿದೆ. ಇದರ ಜೊತೆಗೆ ತೆಲುಗಿನಲ್ಲೂ ಸಿನಿಮಾಗೆ ಬೇಡಿಕೆ ಬಂದಿದ್ದು, ನಾಲ್ಕೈದು ದೊಡ್ಡ ಸಂಸ್ಥೆಗಳು ಸಿನಿಮಾ ಹಕ್ಕು ಪಡೆಯಲು ಸ್ಪರ್ಧೆಗೆ ಇಳಿದಿವೆ.

ಈ ವಾರ ಮಲಯಾಳಂನಲ್ಲಿ

ಈ ವಾರ (ಆಗಸ್ಟ 1) ‘ಸು ಫ್ರಮ್ ಸೋ’ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಕಾಣಲಿದೆ. ಖ್ಯಾತ ಮಲಯಾಳಂ ಹೀರೋ ದುಲ್ಕುರ್ ಸಲ್ಮಾನ್ ಅವರು ಈ ಚಿತ್ರವನ್ನು ಕೇರಳದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಮಲಯಾಳಂ ಪ್ರೇಕ್ಷಕರನ್ನು ರಂಜಿಸಲು ಸಿನಿಮಾ ರೆಡಿ ಆಗಿದೆ.

ತೆಲುಗಿಗೆ ಡಬ್, ತಮಿಳಿಗೆ ರಿಮೇಕ್

‘ಸು ಫ್ರಮ್ ಸೋ’ ಚಿತ್ರದ ತೆಲುಗು ಡಬ್ಬಿಂಗ್ ಹಕ್ಕಿಗೆ ಬೇಡಿಕೆ ಬಂದಿದೆ. ಕೆಲವು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಈ ಚಿತ್ರದ ಡಬ್ಬಿಂಗ್ ಹಕ್ಕಿಗೆ ಬೇಡಿಕೆ ಇಟ್ಟಿವೆ. ಈ ಪೈಕಿ ಯಾವ ನಿರ್ಮಾಣ ಸಂಸ್ಥೆಗೆ ಇದು ಫೈನಲ್ ಆಗಲಿದೆ ಎಂಬ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇನ್ನು, ಮುಂದಿನ ದಿನಗಳಲ್ಲಿ ಸಿನಿಮಾ ಹಿಂದಿ ಭಾಷೆಯಲ್ಲೂ ರಿಲೀಸ್ ಆದರೂ ಅಚ್ಚರಿ ಏನಿಲ್ಲ. ಇದಲ್ಲದೆ, ತಮಿಳಿನ ಕೆಲ ಸಂಸ್ಥೆಗಳು ಸಿನಿಮಾದ ರಿಮೇಕ್ ಹಕ್ಕಿಗೆ ಬೇಡಿಕೆ ಇಟ್ಟಿದೆ.

ಇದನ್ನೂ ಓದಿ
Image
ಶ್ರಾವಣದ ಉಪವಾಸ ಮಾಡಿ ಬಳಿಕ ಕುರಿ ಮರಿ ತಿಂದ ನಟಿ; ವ್ಯಕ್ತವಾಯಿತು ಟೀಕೆ
Image
ಜೀ ಕನ್ನಡದಲ್ಲಿ ‘ನಾವು ನಮ್ಮವರು’ ಶೋ; ತಾರಾ, ಶರಣ್, ಅಮೂಲ್ಯ ಜಡ್ಜ್
Image
ಸೋಮವಾರವೂ ಭಾನುವಾರದಷ್ಟೇ ಗಳಿಸಿದ ‘ಸು ಫ್ರಮ್ ಸೋ’
Image
‘ಕನಿಷ್ಠ ಸಭ್ಯತೆ ಇರಲಿ’; ದರ್ಶನ್ ಅಭಿಮಾನಿಗಳ ಬಳಿ ಕೋರಿದ್ರಾ ರಕ್ಷಿತಾ

ವಾರದ ದಿನವೂ ಹೌಸ್​​ಫುಲ್

‘ಸು ಫ್ರಮ್ ಸೋ’ ಸಿನಿಮಾ ವಾರದ ದಿನವೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಭಾನುವಾರದಷ್ಟೇ ಗಳಿಕೆ, ಸೋಮವಾರವೂ ಆಗಿದೆ ಎಂಬುದು ವಿಶೇಷ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಚಿತ್ರದ ಒಟಿಟಿ ಹಾಗೂ ಸೆಟಲೈಟ್ ಹಕ್ಕುಗಳ ಖರೀದಿ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನೂ ಕೆಲವು ತಿಂಗಳ ಬಳಿಕ ಸಿನಿಮಾನ ಒಟಿಟಿಯಲ್ಲಿ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ: ಭಾನುವಾರಕ್ಕಿಂತ ಸೋಮವಾರ ಹೆಚ್ಚು ಗಳಿಸಿದ ‘ಸು ಫ್ರಮ್ ಸೋ’; ಕಲೆಕ್ಷನ್​ನಲ್ಲಿ ರಾಜ್ ಬಿ. ಶೆಟ್ಟಿ ದಾಖಲೆ

ನಿರ್ದೇಶಕ ಹಾಗೂ ತಂಡದ ಬಗ್ಗೆ

ರಾಜ್ ಬಿ. ಶೆಟ್ಟಿ ಅವರು ‘ಒಂದು ಮೊಟ್ಟೆಯ ಕಥೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಬಂದರು. ತಲೆಯಲ್ಲಿ ಕೂದಲು ಇಲ್ಲ ಎಂಬ ವಿಚಾರವನ್ನೇ ಇಟ್ಟುಕೊಂಡು ಸಿನಿಮಾ ಮಾಡಿ ಭೇಷ್ ಎನಿಸಿಕೊಂಡರು. ಆ ಬಳಿಕ ಅವರು ‘ಟೋಬಿ’, ‘ಗರುಡ ಗಮನ ವೃಷಭ ವಾಹನ’ ರೀತಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸು ಫ್ರಮ್ ಸೋ’ ಚಿತ್ರಕ್ಕೆ ಅವರು ನಿರ್ಮಾಪಕ ಹಾಗೂ ನಟ ಎರಡೂ ಹೌದು. ಈ ಚಿತ್ರವನ್ನು ಜೆಪಿ ತುಮಿನಾಡ ನಿರ್ದೇಶನ ಮಾಡಿದ್ದು, ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ. ಈ ಸಿನಿಮಾ ತುಂಬಾನೇ ನ್ಯಾಚುರಲ್ ಆಗಿ ಮೂಡಿ ಬಂದಿದ್ದು, ಯಾವುದೇ ಗ್ರಾಫಿಕ್ಸ್ ಬಳಕೆ ಆಗಿಲ್ಲ. ಚಿತ್ರದ ಸಂಭಾಷಣೆ ಇಲ್ಲಿ ಹೈಲೈಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:43 am, Tue, 29 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು