ಪ್ರೀ-ಲುಕ್ ಮೂಲಕ ಗಮನ ಸೆಳೆದ ‘ಸುಬ್ರಹ್ಮಣ್ಯ’: ರವಿಶಂಕರ್​ ಪುತ್ರನ ಪ್ಯಾನ್​ ಇಂಡಿಯಾ ಸಿನಿಮಾ

ರವಿಶಂಕರ್​ ನಿರ್ದೇಶನ ಮಾಡುತ್ತಿರುವ ‘ಸುಬ್ರಹ್ಮಣ್ಯ’ ಸಿನಿಮಾದ ಪ್ರೀ-ಲುಕ್​ ಪೋಸ್ಟರ್ ರಿಲೀಸ್​ ಆಗಿದೆ. ಸದ್ಯದಲ್ಲೇ ಫಸ್ಟ್​ಲುಕ್​ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಲು ಚಿತ್ರತಂಡ ಪ್ಯ್ಲಾನ್​ ಮಾಡಿಕೊಂಡಿದೆ. ರವಿ ಬಸ್ರೂರ್ ಅವರ ಸಂಗೀತ ನಿರ್ದೇಶಕ ಈ ಸಿನಿಮಾಗೆ ಇರಲಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಪ್ರೀ-ಲುಕ್ ಮೂಲಕ ಗಮನ ಸೆಳೆದ ‘ಸುಬ್ರಹ್ಮಣ್ಯ’: ರವಿಶಂಕರ್​ ಪುತ್ರನ ಪ್ಯಾನ್​ ಇಂಡಿಯಾ ಸಿನಿಮಾ
‘ಸುಬ್ರಹ್ಮಣ್ಯ’ ಸಿನಿಮಾದ ಪ್ರೀ-ಲುಕ್​ ಪೋಸ್ಟರ್​
Follow us
|

Updated on: Sep 01, 2024 | 10:50 PM

ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವಯ್​ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದಕ್ಕೂ ಮುನ್ನವೇ ಚಿತ್ರತಂಡದಿಂದ ಪ್ರೀ-ಲುಕ್ ಅನಾವರಣ ಆಗಿದೆ. ಪಾಳುಬಿದ್ದ ದೇಗುಲದ ಮುಂದೆ ಹೀರೋ ಅದ್ವಯ್​ ಅವರು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿರುವ ಈ ಪೋಸ್ಟರ್​ನಲ್ಲಿ ಅನೇಕ ಅಂಶಗಳು ಹೈಲೈಟ್​ ಆಗುವೆ. ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸುವಲ್ಲಿ ಈ ಪೋಸ್ಟರ್​ ಯಶಸ್ವಿ ಆಗಿದೆ. ಈ ಸಿನಿಮಾಗೆ ರವಿಶಂಕರ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಆ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

‘ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ.

ಈ ಸಿನಿಮಾದ ಮೂಲಕ ಅದ್ವಯ್​ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಅನಾವರಣವಾಗಿತ್ತು. ಆ ಬಳಿಕ ಯಾವುದೇ ಅಪ್​ಡೇಟ್​ ಸಿಕ್ಕಿರಲಿಲ್ಲ. ಈಗ ಚಿತ್ರತಂಡದಿಂದ ಒಂದಷ್ಟು ಮಾಹಿತಿ ಸಿಕ್ಕಿದೆ. ‘ಸುಬ್ರಹ್ಮಣ್ಯ’ ಚಿತ್ರದ ಶೇಕಡ 60ರಷ್ಟು ಚಿತ್ರೀಕರಣ ಈಗಾಗಲೇ ಮುಕ್ತಾಯ ಆಗಿದೆ. ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಮುಂಬೈನಲ್ಲಿ ಶಾರುಖ್ ಒಡೆತನದ ‘ರೆಡ್ ಚಿಲ್ಲೀಸ್ ಸ್ಟುಡಿಯೋ’ದಲ್ಲಿ ನಡೆಯುತ್ತಿವೆ ಎಂಬುದು ವಿಶೇಷ.

‘ಸುಬ್ರಹ್ಮಣ್ಯ’ ಚಿತ್ರಕ್ಕಾಗಿ ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಹಾಗೂ ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಭರ್ಜರಿ ಫೀಲ್ ಕೊಡುವ ರೀತಿಯಲ್ಲಿ ಈ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. ‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆ ಆಗಲಿದೆ.

ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸಿನಿಮಾ ಇದಾಗಲಿದ್ದು, ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.