AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಸುಬುಧೇಂದ್ರ ತೀರ್ಥರಿಂದ ‘ಶ್ರೀಜಗನ್ನಾಥ ದಾಸರು ಭಾಗ 2’ ಸಿನಿಮಾ ಹಾಡುಗಳ ಬಿಡುಗಡೆ

ಗಾಯನ ಸಮಾಜದಲ್ಲಿ ಅದ್ದೂರಿ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ‘ಶ್ರೀಜಗನ್ನಾಥ ದಾಸರು ಭಾಗ 2’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಗೀತೆಗಳನ್ನು ರಿಲೀಸ್ ಮಾಡಿ ಶುಭಕೋರಿದರು. ಮಧುಸೂದನ್ ಹವಾಲ್ದಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಶ್ರೀಸುಬುಧೇಂದ್ರ ತೀರ್ಥರಿಂದ ‘ಶ್ರೀಜಗನ್ನಾಥ ದಾಸರು ಭಾಗ 2’ ಸಿನಿಮಾ ಹಾಡುಗಳ ಬಿಡುಗಡೆ
Song Release Event
ಮದನ್​ ಕುಮಾರ್​
|

Updated on: Jun 11, 2025 | 7:38 PM

Share

ನಾಡಿನ ಪ್ರಸಿದ್ದ ಹರಿದಾಸರ (Haridasa) ಬದುಕಿನ ಕಥೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾಗಳ ಮೂಲಕ ಜನತೆಗೆ ಪರಿಚಯ ಮಾಡಿಕೊಡುತ್ತಿದ್ದಾರೆ. ದಾಸಶ್ರೇಷ್ಠರಾದ ಶ್ರೀಜಗನ್ನಾಥ ದಾಸರು, ಶ್ರೀಮಹಿಪತಿ ದಾಸರು, ಶ್ರೀವಿಜಯ ದಾಸರು, ಶ್ರೀಪ್ರಸನ್ನ ವೆಂಕಟ ದಾಸರು ಮುಂತಾದ ಮಹಾಮಹಿಮರ ಕುರಿತ ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿದೆ. ಈಗ ‘ಶ್ರೀಜಗನ್ನಾಥ ದಾಸರು ಭಾಗ 2’ (Sri Jagannatha Dasaru Part 2) ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು.

ಗಾಯನ ಸಮಾಜದಲ್ಲಿ ‘ಶ್ರೀಜಗನ್ನಾಥ ದಾಸರು ಭಾಗ 2’ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಧುಸೂದನ್ ಹವಾಲ್ದಾರ್ ಮತ್ತು ರಾಯಚೂರು ಶೇಷಗಿರಿದಾಸ್ ಸಂಗೀತ ಸಂಯೋಜಿಸಿರುವ ಈ ಸಿನಿಮಾದಲ್ಲಿ 8 ಹಾಡುಗಳಿವೆ.

‘ಶ್ರೀಜಗನ್ನಾಥ ದಾಸರು ಭಾಗ 2’ ಸಿನಿಮಾದ ಹಾಡುಗಳಿಗೆ ಜನಪ್ರಿಯ ಗಾಯಕರು ಧ್ವನಿ ನೀಡಿದ್ದಾರೆ. ಸಮಾರಂಭದಲ್ಲಿ 6 ಹಾಡುಗಳನ್ನು ಪ್ರದರ್ಶಿಸಲಾಯಿತು. ಈ ವೇಳೆ ನಾಡಿನ ಖ್ಯಾತ ದಾಸರಾದ 99 ವಯಸ್ಸಿನ ಶ್ರೀಅನಂತಾಚಾರ್ ಕಟಗೇರಿ ಅವರನ್ನು ಸನ್ಮಾನಿಸಲಾಯಿತು. ಈ ವಯಸ್ಸಿನಲ್ಲೂ ಕಟಗೇರಿ ದಾಸರು ವಿಜಯದಾಸರ ಕೀರ್ತನೆ ಹಾಡಿ ಗಮನ ಸೆಳೆದರು.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಈ ಕಾರ್ಯಕ್ರಮದಲ್ಲಿ ಗಾಯಕಿ ಸಂಗೀತ ಕಟ್ಟಿ ಅವರ ಗಾಯನ ಸಹ ಕೇಳುಗರನ್ನು ಸೆಳೆಯಿತು. ಹಲವು ಕ್ಷೇತ್ರಗಳ ಗಣ್ಯರು ಮತ್ತು ಸಿನಿಮಾ ತಂಡದವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ‘ಮಾತಾಂಬುಜ ಮೂವೀಸ್’ ಮೂಲಕ ಮಧುಸೂದನ್ ಹವಾಲ್ದಾರ್ ಅವರು ನಿರ್ಮಿಸಿ, ನಿರ್ದೇಶನ ಮಾಡಿರುವ ಈ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಕರಾವಳಿ ಕಹಾನಿ ಇರುವ ‘ಮಾರ್ನಮಿ’ ಸಿನಿಮಾದಲ್ಲಿ ರಿತ್ವಿಕ್ ಮಠದ್; ಹೇಗಿದೆ ನೋಡಿ ಟೀಸರ್

ಹಾಡುಗಳ ಬಿಡುಗಡೆ ಬಳಿಕ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ‘ಮಧುಸೂದನ್ ಹವಾಲ್ದಾರ್ ಮಾಡುತ್ತಿರುವ ಕಾರ್ಯ ಬಹಳ ದೊಡ್ಡದು. ಅಶ್ಲೀಲ ಸಂಭಾಷಣೆಯಿಂದ ಕೂಡಿರುವ ಮತ್ತು ಹೊಡಿಬಡಿ ಸಿನಿಮಾಗಳೇ ಹೆಚ್ಚು ಬರುತ್ತಿರುವ ಈ ಕಾಲದಲ್ಲಿ ನಾಡಿನ ಹರಿದಾಸರ ಬಗ್ಗೆ ಇಂದಿನ ಜನತೆಗೆ ಪರಿಚಯಿಸುವ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದರ ಉಪಯೋಗವನ್ನು ಹೆಚ್ಚಾಗಿ ಯುವಜನತೆ ಪಡೆದುಕೊಳ್ಳಬೇಕು. ‘ಶ್ರೀಜಗನ್ನಾಥದಾಸರು ಭಾಗ 2’ ಸಿನಿಮಾ ಅತ್ಯಂತ ಯಶಸ್ವಿ ಆಗಲಿ’ ಎಂದು ಹಾರೈಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!