AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ

ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ಖುಷಿಯನ್ನು ಇನ್ನಷ್ಟು ಹೆಚ್ಚಿಸುವ ಸುದ್ದಿಯೊಂದು ಸಿಕ್ಕಿದೆ. ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ ಎಂದು ನಾಮಕರಣ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ
ಹರೀಶ್​ ಅರಸು, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Aug 31, 2023 | 6:39 PM

Share

ನಟ ಕಿಚ್ಚ ಸುದೀಪ್​ (Kichcha Sudeepa) ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಕಾದಿದ್ದಾರೆ. ಸೆಪ್ಟೆಂಬರ್ 2ರಂದು ಅವರ ಜನ್ಮದಿನಕ್ಕೆ (Sudeep Birthday) ಹಲವು ಬಗೆಯ ಉಡುಗೊರೆ ಸಿಗಲಿದೆ. ವಿವಿಧ ಚಿತ್ರತಂಡಗಳು ಹೊಸ ಹೊಸ ಪೋಸ್ಟರ್​ ಬಿಡುಗಡೆ ಮಾಡಲಿವೆ. ಅದಕ್ಕಿಂತಲೂ ಸ್ಪೆಷಲ್​ ಏನೆಂದರೆ, ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ್​ ಅವರ ಹೆಸರನ್ನು ಇಡಲಾಗಿದೆ. ಅವರ ಬರ್ತ್​ಡೇ ಸಮೀಪಿಸಿರುವ ಸಂದರ್ಭದಲ್ಲಿ ಹೀಗೊಂದು ವಿಶೇಷವಾದ ಗೌರವವನ್ನು ಸಲ್ಲಿಸಲಾಗಿದೆ. ‘ಅರಸು ಕ್ರಿಯೇಷನ್ಸ್​’ ಮೂಲಕ ಈ ಕೆಲಸ ಮಾಡಲಾಗಿದೆ. ಇದು ಅಭಿಮಾನಿಗಳಿಗೆ (Kichcha Sudeep Fans) ಖುಷಿ ನೀಡಿದೆ. ಸಿನಿಮಾ ಪ್ರಚಾರಕರ್ತರಾಗಿ ಕೆಲಸ ಮಾಡುತ್ತಿರುವ ಹರೀಶ್ ಅರಸು ಅವರು ತಮ್ಮ ‘ಅರಸು ಕ್ರಿಯೇಷನ್ಸ್​’ ಸಂಸ್ಥೆಯ ಮೂಲಕ ಈ ಉಡುಗೊರೆ ನೀಡುತ್ತಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯಿಂದ ‘ಅಭಿನಯ ಚಕ್ರವರ್ತಿ’ ಎಂದು ಕರೆಸಿಕೊಳ್ಳುವ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ವರ್ಷ ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಫ್ಯಾನ್ಸ್​ ಜೊತೆ ಸುದೀಪ್​ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಪ್ರಯುಕ್ತ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಸುದೀಪ್​ ಅವರ ಗುಣಗಾನ ಮಾಡುವಂತಹ ವಿಶೇಷ ಹಾಡುಗಳು ಕೂಡ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಲಿವೆ. ಇದೆಲ್ಲದರ ನಡುವೆ ‘ಅರಸು ಕ್ರಿಯೇಷನ್ಸ್’ ಮೂಲಕ ನಕ್ಷತ್ರವೊಂದಕ್ಕೆ ಸುದೀಪ್​ ಹೆಸರು ಇಟ್ಟಿರುವುದು ವಿಶೇಷ ಎನಿಸಿಕೊಂಡಿದೆ.

ಹರೀಶ್ ಅರಸು ಟ್ವೀಟ್​:

‘ಈ ಜಗತ್ತಿನಲ್ಲಿ ಇರುವ ರತ್ನಗಳಲ್ಲಿ ನೀವೇ ಅತ್ಯಮೂಲ್ಯ. ಇಂದು ನಕ್ಷತ್ರ ಹುಟ್ಟಿದ ದಿನವನ್ನು ನಾವು ಆಚರಿಸುತ್ತೇವೆ. ಆದರೆ ಆಕಾಶದಲ್ಲಿ ಅಲ್ಲ, ಭೂಮಿಯಲ್ಲಿ’ ಎಂಬ ಅರ್ಥಪೂರ್ಣ ಸಂದೇಶದ ಮೂಲಕ ಸುದೀಪ್ ಅವರಿಗೆ ಈ ಸಂಸ್ಥೆಯ ಮೂಲಕ ಶುಭಾಶಯ ತಿಳಿಸಲಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಇದು ವೈರಲ್​ ಆಗಿದೆ.

Exclusive: ತಮಿಳುನಾಡಲ್ಲಿ ಕನ್ನಡದ ಕಂಪು ಹರಡಿದ ಸುದೀಪ್: ಮಹಾಬಲಿಪುರಂ ಶೂಟಿಂಗ್ ಸೆಟ್‌ನಲ್ಲಿ ಕನ್ನಡಿಗರ ದರ್ಬಾರು

ಕಿಚ್ಚ ಸುದೀಪ್ ಅವರು ಈಗ 46ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ. ಮಧ್ಯರಾತ್ರಿ 12ಕ್ಕೆ ಟೈಟಲ್​ ಘೋಷಣೆ ಆಗಲಿದೆ. ಈ ಮೊದಲು ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಮಾತ್ರ ಸುದೀಪ್​ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ಮತ್ತು ಮನೆ ಬಳಿ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಸುದೀಪ್ ಅವರ ಜೆಪಿ ನಗರದ ನಿವಾಸದ ಬಳಿಯೂ ಕಿಚ್ಚೋತ್ಸವ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?