AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ

ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ಖುಷಿಯನ್ನು ಇನ್ನಷ್ಟು ಹೆಚ್ಚಿಸುವ ಸುದ್ದಿಯೊಂದು ಸಿಕ್ಕಿದೆ. ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ ಎಂದು ನಾಮಕರಣ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ
ಹರೀಶ್​ ಅರಸು, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Aug 31, 2023 | 6:39 PM

Share

ನಟ ಕಿಚ್ಚ ಸುದೀಪ್​ (Kichcha Sudeepa) ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಕಾದಿದ್ದಾರೆ. ಸೆಪ್ಟೆಂಬರ್ 2ರಂದು ಅವರ ಜನ್ಮದಿನಕ್ಕೆ (Sudeep Birthday) ಹಲವು ಬಗೆಯ ಉಡುಗೊರೆ ಸಿಗಲಿದೆ. ವಿವಿಧ ಚಿತ್ರತಂಡಗಳು ಹೊಸ ಹೊಸ ಪೋಸ್ಟರ್​ ಬಿಡುಗಡೆ ಮಾಡಲಿವೆ. ಅದಕ್ಕಿಂತಲೂ ಸ್ಪೆಷಲ್​ ಏನೆಂದರೆ, ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ್​ ಅವರ ಹೆಸರನ್ನು ಇಡಲಾಗಿದೆ. ಅವರ ಬರ್ತ್​ಡೇ ಸಮೀಪಿಸಿರುವ ಸಂದರ್ಭದಲ್ಲಿ ಹೀಗೊಂದು ವಿಶೇಷವಾದ ಗೌರವವನ್ನು ಸಲ್ಲಿಸಲಾಗಿದೆ. ‘ಅರಸು ಕ್ರಿಯೇಷನ್ಸ್​’ ಮೂಲಕ ಈ ಕೆಲಸ ಮಾಡಲಾಗಿದೆ. ಇದು ಅಭಿಮಾನಿಗಳಿಗೆ (Kichcha Sudeep Fans) ಖುಷಿ ನೀಡಿದೆ. ಸಿನಿಮಾ ಪ್ರಚಾರಕರ್ತರಾಗಿ ಕೆಲಸ ಮಾಡುತ್ತಿರುವ ಹರೀಶ್ ಅರಸು ಅವರು ತಮ್ಮ ‘ಅರಸು ಕ್ರಿಯೇಷನ್ಸ್​’ ಸಂಸ್ಥೆಯ ಮೂಲಕ ಈ ಉಡುಗೊರೆ ನೀಡುತ್ತಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯಿಂದ ‘ಅಭಿನಯ ಚಕ್ರವರ್ತಿ’ ಎಂದು ಕರೆಸಿಕೊಳ್ಳುವ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ವರ್ಷ ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಫ್ಯಾನ್ಸ್​ ಜೊತೆ ಸುದೀಪ್​ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಪ್ರಯುಕ್ತ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಸುದೀಪ್​ ಅವರ ಗುಣಗಾನ ಮಾಡುವಂತಹ ವಿಶೇಷ ಹಾಡುಗಳು ಕೂಡ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಲಿವೆ. ಇದೆಲ್ಲದರ ನಡುವೆ ‘ಅರಸು ಕ್ರಿಯೇಷನ್ಸ್’ ಮೂಲಕ ನಕ್ಷತ್ರವೊಂದಕ್ಕೆ ಸುದೀಪ್​ ಹೆಸರು ಇಟ್ಟಿರುವುದು ವಿಶೇಷ ಎನಿಸಿಕೊಂಡಿದೆ.

ಹರೀಶ್ ಅರಸು ಟ್ವೀಟ್​:

‘ಈ ಜಗತ್ತಿನಲ್ಲಿ ಇರುವ ರತ್ನಗಳಲ್ಲಿ ನೀವೇ ಅತ್ಯಮೂಲ್ಯ. ಇಂದು ನಕ್ಷತ್ರ ಹುಟ್ಟಿದ ದಿನವನ್ನು ನಾವು ಆಚರಿಸುತ್ತೇವೆ. ಆದರೆ ಆಕಾಶದಲ್ಲಿ ಅಲ್ಲ, ಭೂಮಿಯಲ್ಲಿ’ ಎಂಬ ಅರ್ಥಪೂರ್ಣ ಸಂದೇಶದ ಮೂಲಕ ಸುದೀಪ್ ಅವರಿಗೆ ಈ ಸಂಸ್ಥೆಯ ಮೂಲಕ ಶುಭಾಶಯ ತಿಳಿಸಲಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಇದು ವೈರಲ್​ ಆಗಿದೆ.

Exclusive: ತಮಿಳುನಾಡಲ್ಲಿ ಕನ್ನಡದ ಕಂಪು ಹರಡಿದ ಸುದೀಪ್: ಮಹಾಬಲಿಪುರಂ ಶೂಟಿಂಗ್ ಸೆಟ್‌ನಲ್ಲಿ ಕನ್ನಡಿಗರ ದರ್ಬಾರು

ಕಿಚ್ಚ ಸುದೀಪ್ ಅವರು ಈಗ 46ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ. ಮಧ್ಯರಾತ್ರಿ 12ಕ್ಕೆ ಟೈಟಲ್​ ಘೋಷಣೆ ಆಗಲಿದೆ. ಈ ಮೊದಲು ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಮಾತ್ರ ಸುದೀಪ್​ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ಮತ್ತು ಮನೆ ಬಳಿ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಸುದೀಪ್ ಅವರ ಜೆಪಿ ನಗರದ ನಿವಾಸದ ಬಳಿಯೂ ಕಿಚ್ಚೋತ್ಸವ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?