AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಚ್ಚನಿಗೆ ಒಂದು ಅಚ್ಚರಿ ಕಾದಿದೆ’: ಸುದೀಪ್​ ಬರ್ತ್​ಡೇಗೂ ಮುನ್ನ ಸಿಹಿ ಸುದ್ದಿ ನೀಡಿದ ಪತ್ನಿ ಪ್ರಿಯಾ

ಈ ಬಾರಿ ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬಕ್ಕೆ ಹಲವು ಉಡುಗೊರೆಗಳು ಸಿಗುತ್ತಿವೆ. ಅವರ ಪತ್ನಿ ಪ್ರಿಯಾ ಸುದೀಪ್​ ಕೂಡ ಸರ್ಪ್ರೈಸ್​ ನೀಡುವುದಾಗಿ ತಿಳಿಸಿದ್ದಾರೆ. ನಂದಿ ಲಿಂಕ್​ ಗ್ರೌಂಡ್​ನಲ್ಲಿ ತಮ್ಮ ನೆಚ್ಚಿನ ನಟರ ಬರ್ತ್​ಡೇ ಸೆಲೆಬ್ರೇಟ್​ ಮಾಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಲಿದ್ದಾರೆ. ಅದಕ್ಕೆ ಈಗಾಗಲೇ ಸಕಲ ಸಿದ್ಧತೆ ಆಗಿದೆ.

‘ಕಿಚ್ಚನಿಗೆ ಒಂದು ಅಚ್ಚರಿ ಕಾದಿದೆ’: ಸುದೀಪ್​ ಬರ್ತ್​ಡೇಗೂ ಮುನ್ನ ಸಿಹಿ ಸುದ್ದಿ ನೀಡಿದ ಪತ್ನಿ ಪ್ರಿಯಾ
ಪ್ರಿಯಾ​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 01, 2023 | 3:27 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಸೆಪ್ಟೆಂಬರ್ 2ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಹಲವು ಕಾರಣಗಳಿಂದಾಗಿ ಈ ಬಾರಿಯ ಅವರ ಬರ್ತ್​ಡೇ (Sudeep Birthday) ವಿಶೇಷವಾಗಿರಲಿದೆ. ಬೆಂಗಳೂರಿನ ನಂದಿ ಲಿಂಕ್​​ ಗ್ರೌಂಡ್​ನಲ್ಲಿ ಅವರು ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ಆ ಸಂಭ್ರಮದಲ್ಲಿ ಅಪಾರ ಸಂಖ್ಯೆ ಅಭಿಮಾನಿಗಳು ಭಾಗಿಯಾಗಲಿದ್ದಾರೆ. ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ವಿವಿಧ ಸಿನಿಮಾ ತಂಡಗಳು ಸುದೀಪ್​ ಅವರಿಗೆ ಜನ್ಮದಿನದ ವಿಶ್​ ಮಾಡಲಿವೆ. ಅದಕ್ಕೂ ಮುನ್ನವೇ ಸುದೀಪ್​ ಪತ್ನಿ ಪ್ರಿಯಾ ಅವರು ಒಂದು ಸರ್ಪ್ರೈಸ್​ ನೀಡುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾ ಮೂಲಕ ಗುಡ್​ ನ್ಯೂಸ್​ ನೀಡಿದ್ದಾರೆ. ಇದನ್ನು ಕಂಡು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಪ್ರಿಯಾ ಸುದೀಪ್​ (Priya Sudeep) ನೀಡುವ ಸರ್ಪ್ರೈಸ್​ ಏನು ಎಂಬುದನ್ನು ತಿಳಿಯುವ ಕಾತರ ಮೂಡಿದೆ.

‘ಇಂದು ನಿಮ್ಮ ಪ್ರೀತಿಯ ಕಿಚ್ಚ ಸುದೀಪರ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಲು ಕಾತುರದಿಂದ ಕಾಯುತ್ತಿದ್ದೇನೆ. ಇಂದಿನ ಕಾರ್ಯಕ್ರಮದಲ್ಲಿ ನನ್ನ ಕಡೆಯಿಂದ ನಿಮ್ಮೆಲ್ಲರ ಪರವಾಗಿ ಕಿಚ್ಚನಿಗೆ ಒಂದು ವಿಶೇಷವಾದ ಅದ್ದೂರಿ ಅಚ್ಚರಿ ಕಾದಿದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅಚ್ಚರಿಯನ್ನು ಆನಂದಿಸಿ, ಕಿಚ್ಚನನ್ನು ಹರಸಿ’ ಎಂದು ಪ್ರಿಯಾ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ.

ಪ್ರಿಯಾ ಸುದೀಪ್​ ಟ್ವೀಟ್​:

Kichcha 46 ಟೈಟಲ್​ ಏನು?

ಕಿಚ್ಚ ಸುದೀಪ್​ ಅವರು ‘ವಿಕ್ರಾಂತ್​ ರೋಣ’ ಸಿನಿಮಾ ಬಳಿಕ ತಮ್ಮ 46ನೇ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾದ ಶೂಟಿಂಗ್​ ಭರದಿಂದ ಸಾಗುತ್ತಿದೆ. ಆದರೆ ಟೈಟಲ್​ ಏನು ಎಂಬುದು ಇನ್ನೂ ರಿವೀಲ್​ ಆಗಿಲ್ಲ. ಸದ್ಯಕ್ಕೆ ಇದನ್ನು Kichcha 46 ಎಂದು ಕರೆಯಲಾಗುತ್ತಿದೆ. ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. 2023ರಲ್ಲೇ ಈ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಸುದೀಪ್​ ಅವರು ಗುರಿ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ನಕ್ಷತ್ರಕ್ಕೆ ಸುದೀಪ್​ ಹೆಸರು:

ಹಲವು ರೀತಿಯಲ್ಲಿ ಜನರು ಸುದೀಪ್​ ಮೇಲೆ ಅಭಿಮಾನ ತೋರುತ್ತಿದ್ದಾರೆ. ಅವರ ಜನ್ಮದಿನದ ಹೊಸ್ತಿಲಿನಲ್ಲಿ ‘ಅರಸು ಕ್ರಿಯೇಷನ್ಸ್​’ ಸಂಸ್ಥೆ ಕಡೆಯಿಂದ ಒಂದು ವಿಶೇಷವಾದ ಉಡುಗೊರೆ ನೀಡಲಾಗಿದೆ. ಆಕಾಶದಲ್ಲಿನ ಒಂದು ನಕ್ಷತ್ರಕ್ಕೆ ಕಿಚ್ಚ ಸುದೀಪ ಎಂದು ಹೆಸರು ಇಡಲಾಗಿದೆ. ಈ ಮೂಲಕ ಸುದೀಪ್​ಗೆ ವಿಶೇಷವಾದ ಗೌರವ ಸಲ್ಲಿಸಲಾಗಿದೆ. ರಿಯಲ್​ ನಕ್ಷತ್ರಕ್ಕೆ ತಮ್ಮ ನೆಚ್ಚಿನ ನಟನ ಹೆಸರನ್ನು ಇಟ್ಟಿರುವುದು ಅಭಿಮಾನಿಗಳಿಗೆ ಹೆಮ್ಮೆ ತಂದಿದೆ. ಸುದೀಪ್​ ಅವರ ಮುಂಬರುವ ಸಿನಿಮಾಗಳ ಬಗ್ಗೆ ಕಾತರ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ