AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ

Saanvi Sudeep: ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಲಿಕ್ಕರ್​ ಸಿಗದೇ ಇರುವುದಕ್ಕೆ ಕೆಲವರಿಗೆ ಕಿರಿಕಿರಿ ಆಗಿದೆ. ಹಾಗಾಗಿ ಕೀಳು ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ. ಅಂಥವರಿಗೆ ಸುದೀಪ್​ ಮಗಳು ಸಾನ್ವಿ ಛೀಮಾರಿ ಹಾಕಿದ್ದಾರೆ.

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ
(ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ)
TV9 Web
| Edited By: |

Updated on:Nov 01, 2021 | 9:08 AM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ನಾಡು ಬರಡಾಗಿದೆ. ಅವರು ನಿಧನರಾಗಿ ನಾಲ್ಕು ದಿನ ಕಳೆದಿದ್ದರೂ ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಆದರೆ ಇಂಥ ಸಂದರ್ಭದಲ್ಲೂ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​​ಗೆ ಅಗೌರವ ತೋರುವಂತಹ ಪೋಸ್ಟ್​ಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರ ಬಗ್ಗೆ ನಟ ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಗರಂ ಆಗಿದ್ದಾರೆ.

ಅಪ್ಪು ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿತ್ತು. ಆದರೆ ಈ ಆದೇಶದಿಂದ ಲಿಕ್ಕರ್​ ಸಿಗದೇ ಇರುವುದಕ್ಕೆ ಕೆಲವರಿಗೆ ಕಿರಿಕಿರಿ ಆಗಿದೆ. ಅದರಲ್ಲೂ ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವವರು ಎಣ್ಣೆ ಸಿಗದಿದ್ದಕ್ಕೆ ಕೀಳು ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ.

ಕೆಲವರ ವರ್ತನೆ ಮಿತಿ ಮೀರಿದೆ. ನಿಷೇಧದ ನಡುವೆಯೂ ಲಿಕ್ಕರ್​ ಕೊಂಡುಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಬಳಿಕ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿ, ಅಶ್ಲೀಲ ಪದಗಳಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಅವಮಾನಿಸಿದ್ದಾರೆ. ಬಿಯರ್​ ಬಾಟಲಿಯ ಚಿತ್ರ ಹಂಚಿಕೊಂಡು, ‘ರಾಜ್​ಕುಮಾರ್​​ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ’ ಎಂದು ಕಿಡಿಗೇಡಿಯೊಬ್ಬ ಪೋಸ್ಟ್​ ಮಾಡಿದ್ದಾನೆ. ಇಂಥವರಿಗೆ ಮನುಷ್ಯತ್ವ ಇಲ್ಲವೇ ಎಂದು ಸಾನ್ವಿ ಕೇಳಿದ್ದಾರೆ. ‘ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಛೀಮಾರಿ ಹಾಕಿದ್ದಾರೆ.

Puneeth Rajkumar insult

(ಕಿಡಿಗೇಡಿಯ ಪೋಸ್ಟ್​ಗೆ ಛೀಮಾರಿ ಹಾಕಿದ ಸುದೀಪ್​ ಪುತ್ರಿ ಸಾನ್ವೀ )

‘ಬೆಂಗಳೂರಿನಲ್ಲಿ ಇರುವ ಉತ್ತರ ಭಾರತದ ಸ್ನೇಹಿತರಿಗೆ ಹೇಳೋದೇನೆಂದರೆ, ಕರ್ನಾಟಕ ಸರ್ಕಾರ ಸರಿಯಾದ ಕ್ರಮವನ್ನೇ ಕೈಗೊಂಡಿದೆ. ಇಂಥ ಸಮಯದಲ್ಲಿ ಮದ್ಯ ಮಾರಾಟ ಒಳ್ಳೆಯದಲ್ಲ. ಸ್ವಲ್ಪವಾದರೂ ಪ್ರಜ್ಞಾವಂತಿಕೆ ತೋರಿಸಿ. ಅಗೌರವ ತೋರುವಂತಹ ಮಾತುಗಳನ್ನು ಆಡಬೇಡಿ’ ಎಂದು ವ್ಯಕ್ತಿಯೊಬ್ಬರು ಮಾಡಿದ ಪೋಸ್ಟ್​ ಅನ್ನು ಸಾನ್ವಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಪುನೀತ್ ಅವರ ಸಾಮಾಜಿಕ ಕೆಲಸಗಳು ಎಲ್ಲರಿಗೂ ಮಾದರಿ ಆಗಿವೆ. ಆ ಕಾರಣಕ್ಕಾಗಿಯೇ​ ಅವರನ್ನು ಕೋಟ್ಯಂತರ ಜನರು ಆರಾಧಿಸುತ್ತಾರೆ. ಅವರ ನಿಧನದಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ವಿಚಲಿತರಾಗಿದ್ದಾರೆ. ಅಂಥ ವ್ಯಕ್ತಿ ಬಗ್ಗೆ ಸಾರ್ವಜನಿಕವಾಗಿ ಅವಹೇಳಕಾರಿ ಪದಗಳಲ್ಲಿ ಅವಮಾನ ಮಾಡಿರುವ ಕಿಡಿಗೇಡಿಗಳಿಗೆ ಕಾನೂನಿನ ಮೂಲಕ ಪಾಠ ಕಲಿಸಬೇಕಿದೆ.

ಇದನ್ನೂ ಓದಿ:

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Published On - 8:39 am, Mon, 1 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ