AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ

ಈ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್​ ‘ನಟ ಸುದೀಪ್​ ಹಾಗೂ ನನ್ನ ನಡುವೆ ಒಳ್ಳೆಯ ಸ್ಪರ್ಧೆ ಇದೆ. ಇದನ್ನು ಸ್ಟಾರ್​ ವಾರ್​ ಎಂದು ಭಾವಿಸುವುದು ಬೇಡ’ ಎಂದು ಮನವಿ ಮಾಡಿದ್ದಾರೆ.

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ
TV9 Web
| Edited By: |

Updated on: Sep 26, 2021 | 5:41 PM

Share

ಅಕ್ಟೋಬರ್​ 14ರಂದು ಎರಡು ಸ್ಟಾರ್​ ಸಿನಿಮಾಗಳು ಒಟ್ಟಿಗೆ ರಿಲೀಸ್​ ಆಗುತ್ತಿವೆ. ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್​ ‘ಸಲಗ’ ಸಿನಿಮಾ ಒಂದೇ ದಿನ ರಿಲೀಸ್​ ಆಗುವುದು ಬಹುತೇಕ ಖಚಿತವಾಗಿದೆ. ಈ ವಿಚಾರದ ಬಗ್ಗೆ ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಮಾತನಾಡಿದ್ದಾರೆ.

‘ಇದು ಸ್ಟಾರ್​ವಾರ್ ಅಲ್ಲ. ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರ ನಿರ್ಧಾರ ತಡವಾಗಿದೆ. ಕಳೆದ ಒಂದೂವರೆ ವರ್ಷದಿಂದ ನಾವು ಕಾಯುತ್ತಿದ್ದೆವು. 3 ಸಿನಿಮಾಗಳ ನಿರ್ಮಾಪಕರು ಮಾತುಕತೆ ನಡೆಸಿದ್ದೆವು. ಸರ್ಕಾರ ಅನುಮತಿ ನೀಡಿದ ನಂತರ ಮೊದಲು ‘ಸಲಗ’ ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚರ್ಚೆಯಾಗಿತ್ತು. ಮೊದಲೇ ಮಾತುಕತೆ ನಡೆಸಿರುವಂತೆ ‘ಸಲಗ’ ಚಿತ್ರ ಬಿಡುಗಡೆ ಆಗುತ್ತಿದೆ. ದಸರಾ ಹಬ್ಬ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಸಲಗ ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು ಶ್ರೀಕಾಂತ್​.

‘ನಮ್ಮ ಚಿತ್ರಕ್ಕೆ ನಟ ಸುದೀಪ್ ಟ್ವೀಟ್​ ಮಾಡಿ ಹಾರೈಸಿದ್ದಾರೆ. ನಟ ಸುದೀಪ್​ ಮೊದಲಿನಿಂದಲೂ ‘ಸಲಗ’ ಜೊತೆಗಿದ್ದಾರೆ. ಕನ್ನಡದ 2 ಸಿನಿಮಾಗಳು ಒಟ್ಟಿಗೆ ಬರುತ್ತಿರುವುದರಿಂದ ಸಂತಸ ಇದೆ. ಕನ್ನಡ ಚಿತ್ರರಂಗದ ನಾವೆಲ್ಲರೂ ಒಂದಾಗಿದ್ದೇವೆ. ಒಂದೊಂದು ಊರಿನಲ್ಲಿ 2ಕ್ಕಿಂತಲೂ ಹೆಚ್ಚು ಟಾಕೀಸ್​ಗಳಿವೆ. ಆದ್ದರಿಂದ 2 ಚಿತ್ರಗಳಿಗೆ ಟಾಕೀಸ್​ ಸಮಸ್ಯೆ ಉಂಟಾಗುವುದಿಲ್ಲ’ ಎಂದರು ಅವರು.

ಈ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್​, ‘ನಟ ಸುದೀಪ್​ ಹಾಗೂ ನನ್ನ ನಡುವೆ ಒಳ್ಳೆಯ ಸ್ಪರ್ಧೆ ಇದೆ. ಇದನ್ನು ಸ್ಟಾರ್​ ವಾರ್​ ಎಂದು ಭಾವಿಸುವುದು ಬೇಡ. ಅಭಿಮಾನಿಗಳು ಯಾರೂ ಆ ರೀತಿ ಭಾವಿಸಬೇಡಿ. ಕಷ್ಟಪಟ್ಟು ನಾನು ಈ ಸಲಗ ಚಿತ್ರವನ್ನು ಮಾಡಿದ್ದೇನೆ. ನಾಳೆ ಮತ್ತೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಒಬ್ಬ ನಿರ್ಮಾಪಕನನ್ನ ಕಾಪಾಡುವುದು ನಿಮ್ಮ ಜವಾಬ್ದಾರಿ. ನಮ್ಮ ನಿಲುವಿನಲ್ಲಿ ಯಾವುದೇ ರೀತಿ ಬದಲಾವಣೆ ಇಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು