AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ

Kichcha Sudeep: ಸುದೀಪ್ ನಟನೆಯ ‘ಬಿಲ್ಲ ರಂಗ ಭಾಷಾ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಯನ್ನು ಸುದೀಪ್ ನಿನ್ನೆಯೇ ಘೋಷಣೆ ಮಾಡಿದ್ದರು. ಇಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ
Billa Ranga Baasha
ಮಂಜುನಾಥ ಸಿ.
|

Updated on:Sep 02, 2025 | 11:48 AM

Share

ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಬಿಲ್ಲ ರಂಗ ಭಾಷಾ: ದಿ ಫಸ್ಟ್ ಬ್ಲಡ್’ ಸಿನಿಮಾದ ಸುದೀಪ್ ಅವರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಬಿಲ್ಲ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾದಾಗ ದೊಡ್ಡದಾಗಿ ಸುದ್ದಿಯಾಗಿತ್ತು. ಆದರೆ ಅದಾದ ಬಳಿಕ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​ಡೇಟ್ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ಅನೂಪ್ ಭಂಡಾರಿ ಅವರು ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ಗಮನ ಸೆಳೆಯುತ್ತಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಸುದೀಪ್ ಅವರು ವಾರಿಯರ್ ರೀತಿ ಕಾಣುತ್ತಿದ್ದಾರೆ. ಕೈಯಲ್ಲಿ ರಾಕೆಟ್ ಲಾಂಚರ್ ಹಿಡಿದಿದ್ದಾರೆ. ಬೆನ್ನಿಗೆ ಕತ್ತಿ ಸಿಕ್ಕಿಸಿಕೊಂಡಿದ್ದಾರೆ. ಹಣೆಗೆ ಧರಿಸಿರುವ ಕನ್ನಡಕ ಈ ಸಿನಿಮಾ 40-50ರ ದಶಕದ ಕತೆ ಇರಬಹುದೆಂಬ ಅನುಮಾನ ಮೂಡಿಸುತ್ತಿದೆ. ಸುದೀಪ್ ಅವರ ಜೊತೆಗೆ ಪೋಸ್ಟರ್​​ನಲ್ಲಿರುವ ಬಾವುಟವೊಂದು ಸಹ ಗಮನ ಸೆಳೆಯುತ್ತಿದೆ.

ಪೋಸ್ಟರ್​ ನಲ್ಲಿ ‘ಕ್ರಾಂತಿಕಾರನ ಕೊಲ್ಲಬಹುದು ಕ್ರಾಂತಿಯನಲ್ಲ’ ಎಂಬ ಸಾಲು ಬರೆಯಲಾಗಿದೆ. ಪೋಸ್ಟರ್​​ನಲ್ಲಿ ಹಳೆಯ ಕಾಲದ ಯುದ್ಧ ವಿಮಾನವೊಂದರ ಚಿತ್ರವಿದೆ. ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯ ಚಿತ್ರವೂ ಪೋಸ್ಟರ್​​ನಲ್ಲಿದೆ. ಪೋಸ್ಟರ್​​ನಲ್ಲಿರುವ ಚಿತ್ರಗಳು, ಅದರ ಮೇಲಿರುವ ಸಾಲುಗಳು, ಸುದೀಪ್ ಅವರ ವೇಷ ನೋಡಿದರೆ ಇದು ಸರ್ಕಾರದ ಅಥವಾ ಯಾವುದೋ ದೊಡ್ಡ ವ್ಯವಸ್ಥೆಯ ವಿರುದ್ಧ ಹೋರಾಡುವ ಕ್ರಾಂತಿಕಾರಿಯೊಬ್ಬನ ಕತೆ ಇರಬಹುದೆಂಬ ಅನುಮಾನ ಮೂಡುತ್ತದೆ.

ಇದನ್ನೂ ಓದಿ:ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

‘ಅನೂಪ್ ಭಂಡಾರಿ’ ಜೊತೆಗೆ ಸುದೀಪ್ ಅವರಿಗೆ ಇದು ಎರಡನೇ ಸಿನಿಮಾ. ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾಕ್ಕಾಗಿ ಈ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ ‘ಬಿಲ್ಲ ರಂಗ ಭಾಷಾ’ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾದ ಬಹುತೇಕ ಭಾಗ, ಸೆಟ್​ಗಳಲ್ಲಿಯೇ ಚಿತ್ರೀಕರಣ ಆಗುತ್ತಿದೆ. ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಅನೂಪ್ ಭಂಡಾರಿ, ‘ತಲೆಬಾಗಿಸಲು ಒಪ್ಪದ ಆ ಒಬ್ಬನ ಕಂಡರೆ ಸಾಮ್ರಾಜ್ಯಗಳಿಗೆ ಭಯ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಹ ತಿಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 2 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ