AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ

Kichcha Sudeep: ಸುದೀಪ್ ನಟನೆಯ ‘ಬಿಲ್ಲ ರಂಗ ಭಾಷಾ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಯನ್ನು ಸುದೀಪ್ ನಿನ್ನೆಯೇ ಘೋಷಣೆ ಮಾಡಿದ್ದರು. ಇಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ
Billa Ranga Baasha
ಮಂಜುನಾಥ ಸಿ.
|

Updated on:Sep 02, 2025 | 11:48 AM

Share

ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಬಿಲ್ಲ ರಂಗ ಭಾಷಾ: ದಿ ಫಸ್ಟ್ ಬ್ಲಡ್’ ಸಿನಿಮಾದ ಸುದೀಪ್ ಅವರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಬಿಲ್ಲ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾದಾಗ ದೊಡ್ಡದಾಗಿ ಸುದ್ದಿಯಾಗಿತ್ತು. ಆದರೆ ಅದಾದ ಬಳಿಕ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​ಡೇಟ್ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ಅನೂಪ್ ಭಂಡಾರಿ ಅವರು ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ಗಮನ ಸೆಳೆಯುತ್ತಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಸುದೀಪ್ ಅವರು ವಾರಿಯರ್ ರೀತಿ ಕಾಣುತ್ತಿದ್ದಾರೆ. ಕೈಯಲ್ಲಿ ರಾಕೆಟ್ ಲಾಂಚರ್ ಹಿಡಿದಿದ್ದಾರೆ. ಬೆನ್ನಿಗೆ ಕತ್ತಿ ಸಿಕ್ಕಿಸಿಕೊಂಡಿದ್ದಾರೆ. ಹಣೆಗೆ ಧರಿಸಿರುವ ಕನ್ನಡಕ ಈ ಸಿನಿಮಾ 40-50ರ ದಶಕದ ಕತೆ ಇರಬಹುದೆಂಬ ಅನುಮಾನ ಮೂಡಿಸುತ್ತಿದೆ. ಸುದೀಪ್ ಅವರ ಜೊತೆಗೆ ಪೋಸ್ಟರ್​​ನಲ್ಲಿರುವ ಬಾವುಟವೊಂದು ಸಹ ಗಮನ ಸೆಳೆಯುತ್ತಿದೆ.

ಪೋಸ್ಟರ್​ ನಲ್ಲಿ ‘ಕ್ರಾಂತಿಕಾರನ ಕೊಲ್ಲಬಹುದು ಕ್ರಾಂತಿಯನಲ್ಲ’ ಎಂಬ ಸಾಲು ಬರೆಯಲಾಗಿದೆ. ಪೋಸ್ಟರ್​​ನಲ್ಲಿ ಹಳೆಯ ಕಾಲದ ಯುದ್ಧ ವಿಮಾನವೊಂದರ ಚಿತ್ರವಿದೆ. ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯ ಚಿತ್ರವೂ ಪೋಸ್ಟರ್​​ನಲ್ಲಿದೆ. ಪೋಸ್ಟರ್​​ನಲ್ಲಿರುವ ಚಿತ್ರಗಳು, ಅದರ ಮೇಲಿರುವ ಸಾಲುಗಳು, ಸುದೀಪ್ ಅವರ ವೇಷ ನೋಡಿದರೆ ಇದು ಸರ್ಕಾರದ ಅಥವಾ ಯಾವುದೋ ದೊಡ್ಡ ವ್ಯವಸ್ಥೆಯ ವಿರುದ್ಧ ಹೋರಾಡುವ ಕ್ರಾಂತಿಕಾರಿಯೊಬ್ಬನ ಕತೆ ಇರಬಹುದೆಂಬ ಅನುಮಾನ ಮೂಡುತ್ತದೆ.

ಇದನ್ನೂ ಓದಿ:ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

‘ಅನೂಪ್ ಭಂಡಾರಿ’ ಜೊತೆಗೆ ಸುದೀಪ್ ಅವರಿಗೆ ಇದು ಎರಡನೇ ಸಿನಿಮಾ. ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾಕ್ಕಾಗಿ ಈ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ ‘ಬಿಲ್ಲ ರಂಗ ಭಾಷಾ’ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾದ ಬಹುತೇಕ ಭಾಗ, ಸೆಟ್​ಗಳಲ್ಲಿಯೇ ಚಿತ್ರೀಕರಣ ಆಗುತ್ತಿದೆ. ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಅನೂಪ್ ಭಂಡಾರಿ, ‘ತಲೆಬಾಗಿಸಲು ಒಪ್ಪದ ಆ ಒಬ್ಬನ ಕಂಡರೆ ಸಾಮ್ರಾಜ್ಯಗಳಿಗೆ ಭಯ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಹ ತಿಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 2 September 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ