AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ

Kichcha Sudeep: ಸುದೀಪ್ ನಟನೆಯ ‘ಬಿಲ್ಲ ರಂಗ ಭಾಷಾ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಯನ್ನು ಸುದೀಪ್ ನಿನ್ನೆಯೇ ಘೋಷಣೆ ಮಾಡಿದ್ದರು. ಇಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ.

ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ
Billa Ranga Baasha
ಮಂಜುನಾಥ ಸಿ.
|

Updated on:Sep 02, 2025 | 11:48 AM

Share

ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಬಿಲ್ಲ ರಂಗ ಭಾಷಾ: ದಿ ಫಸ್ಟ್ ಬ್ಲಡ್’ ಸಿನಿಮಾದ ಸುದೀಪ್ ಅವರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಬಿಲ್ಲ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾದಾಗ ದೊಡ್ಡದಾಗಿ ಸುದ್ದಿಯಾಗಿತ್ತು. ಆದರೆ ಅದಾದ ಬಳಿಕ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​ಡೇಟ್ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ಅನೂಪ್ ಭಂಡಾರಿ ಅವರು ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ಗಮನ ಸೆಳೆಯುತ್ತಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಸುದೀಪ್ ಅವರು ವಾರಿಯರ್ ರೀತಿ ಕಾಣುತ್ತಿದ್ದಾರೆ. ಕೈಯಲ್ಲಿ ರಾಕೆಟ್ ಲಾಂಚರ್ ಹಿಡಿದಿದ್ದಾರೆ. ಬೆನ್ನಿಗೆ ಕತ್ತಿ ಸಿಕ್ಕಿಸಿಕೊಂಡಿದ್ದಾರೆ. ಹಣೆಗೆ ಧರಿಸಿರುವ ಕನ್ನಡಕ ಈ ಸಿನಿಮಾ 40-50ರ ದಶಕದ ಕತೆ ಇರಬಹುದೆಂಬ ಅನುಮಾನ ಮೂಡಿಸುತ್ತಿದೆ. ಸುದೀಪ್ ಅವರ ಜೊತೆಗೆ ಪೋಸ್ಟರ್​​ನಲ್ಲಿರುವ ಬಾವುಟವೊಂದು ಸಹ ಗಮನ ಸೆಳೆಯುತ್ತಿದೆ.

ಪೋಸ್ಟರ್​ ನಲ್ಲಿ ‘ಕ್ರಾಂತಿಕಾರನ ಕೊಲ್ಲಬಹುದು ಕ್ರಾಂತಿಯನಲ್ಲ’ ಎಂಬ ಸಾಲು ಬರೆಯಲಾಗಿದೆ. ಪೋಸ್ಟರ್​​ನಲ್ಲಿ ಹಳೆಯ ಕಾಲದ ಯುದ್ಧ ವಿಮಾನವೊಂದರ ಚಿತ್ರವಿದೆ. ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯ ಚಿತ್ರವೂ ಪೋಸ್ಟರ್​​ನಲ್ಲಿದೆ. ಪೋಸ್ಟರ್​​ನಲ್ಲಿರುವ ಚಿತ್ರಗಳು, ಅದರ ಮೇಲಿರುವ ಸಾಲುಗಳು, ಸುದೀಪ್ ಅವರ ವೇಷ ನೋಡಿದರೆ ಇದು ಸರ್ಕಾರದ ಅಥವಾ ಯಾವುದೋ ದೊಡ್ಡ ವ್ಯವಸ್ಥೆಯ ವಿರುದ್ಧ ಹೋರಾಡುವ ಕ್ರಾಂತಿಕಾರಿಯೊಬ್ಬನ ಕತೆ ಇರಬಹುದೆಂಬ ಅನುಮಾನ ಮೂಡುತ್ತದೆ.

ಇದನ್ನೂ ಓದಿ:ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

‘ಅನೂಪ್ ಭಂಡಾರಿ’ ಜೊತೆಗೆ ಸುದೀಪ್ ಅವರಿಗೆ ಇದು ಎರಡನೇ ಸಿನಿಮಾ. ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾಕ್ಕಾಗಿ ಈ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ ‘ಬಿಲ್ಲ ರಂಗ ಭಾಷಾ’ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾದ ಬಹುತೇಕ ಭಾಗ, ಸೆಟ್​ಗಳಲ್ಲಿಯೇ ಚಿತ್ರೀಕರಣ ಆಗುತ್ತಿದೆ. ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಅನೂಪ್ ಭಂಡಾರಿ, ‘ತಲೆಬಾಗಿಸಲು ಒಪ್ಪದ ಆ ಒಬ್ಬನ ಕಂಡರೆ ಸಾಮ್ರಾಜ್ಯಗಳಿಗೆ ಭಯ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಹ ತಿಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 2 September 25

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್