AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸಿನಿಮಾದ ಎದುರು ಸುದೀಪ್ ಸಿನಿಮಾ, ಶುರುವಾಯ್ತು ‘ಬಿಆರ್​ಬಿ’

Kichcha Sudeep: ನಟ ಕಿಚ್ಚ ಸುದೀಪ್ ನಟನೆಯ ಕಳೆದ ಸಿನಿಮಾ ‘ಮ್ಯಾಕ್ಸ್’ ಭಾರಿ ದೊಡ್ಡ ಹಿಟ್ ಆಗಿತ್ತು. ಇದೀಗ ಸುದೀಪ್ ಹೊಸ ಸಿನಿಮಾ ಚಿತ್ರೀಕರಣ ಶುರು ಮಾಡಿದ್ದಾರೆ. ವಿಶೇಷವೆಂದರೆ ಸುದೀಪ್ ಹಾಗೂ ದರ್ಶನ್ ಅವರ ಸಿನಿಮಾಗಳು ಪರಸ್ಪರ ಎದುರು ಬದುರಾಗಿವೆ? ಅದು ಹೇಗೆ ಸಾಧ್ಯ? ಇಲ್ಲಿದೆ ನೋಡಿ ಮಾಹಿತಿ...

ದರ್ಶನ್ ಸಿನಿಮಾದ ಎದುರು ಸುದೀಪ್ ಸಿನಿಮಾ, ಶುರುವಾಯ್ತು ‘ಬಿಆರ್​ಬಿ’
Sudeep
ಮಂಜುನಾಥ ಸಿ.
|

Updated on:May 01, 2025 | 1:46 PM

Share

ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಭಾರಿ ದೊಡ್ಡ ಹಿಟ್ ಆಗಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಮ್ಯಾಕ್ಸ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಸುದೀಪ್ ಅನೂಪ್ ಭಂಡಾರಿ ಜೊತೆಗೆ ಸಿನಿಮಾ ಘೋಷಿಸಿದ್ದರು. ಅದರಂತೆ ಈಗ ಭಂಡಾರಿ ಜೊತೆಗಿನ ಸಿನಿಮಾ ಸೆಟ್ಟೇರಿದೆ. ಅನುಪ್ ಭಂಡಾರಿ ನಿರ್ದೇಶನದ ‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ ನಟ ಸುದೀಪ್.

ಈ ಕುರಿತ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸಿನಿಮಾದ ತಂತ್ರಜ್ಞರಿಗೆ ಇತರರಿಗೆ ಐಡಿ ಕಾರ್ಡ್​ಗಳನ್ನು ನೀಡಿ, ಸೆಕ್ಯುರಿಟಿ ಚೆಕ್ ಮಾಡಿ ಸೆಟ್​ನ ಒಳಕ್ಕೆ ಬಿಡಲಾಗುತ್ತಿದೆ. ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿರುವ ಸೆಟ್​ನ ಮುಂದೆ ಸುದೀಪ್ ಹಾಗೂ ಅನುಪ್ ಭಂಡಾರಿಯ ದೊಡ್ಡ ಕಟೌಟ್​ಗಳನ್ನು ನಿಲ್ಲಿಸಲಾಗಿದೆ. ಅತ್ಯುತ್ತಮ ಕ್ಯಾಮೆರಾ ಉಪಕರಣಗಳನ್ನು ಬಳಸಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ, ಸುದೀಪ್ ಸಹ ಜತನದಿಂದ ಮೇಕಪ್ ಹಾಕಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಏಪ್ರಿಲ್ 22 ರಿಂದಲೇ ಕಂಠೀರವ ಸ್ಟುಡಿಯೋನಲ್ಲಿ ಶುರುವಾಗಿದೆ. ಸಿನಿಮಾಕ್ಕಾಗಿ ಭಾರಿ ದೊಡ್ಡ ಸೆಟ್ ನಿರ್ಮಾಣ ಮಾಡಲಾಗಿದೆ. ವಿಶೇಷವೆಂದರೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣವೂ ಸಹ ಕಂಠೀರವ ಸ್ಟುಡಿಯೋನಲ್ಲಿಯೇ ನಡೆಯುತ್ತಿದೆ. ಎದುರು ಬದುರು ಸೆಟ್​ಗಳಲ್ಲಿಯೇ ದರ್ಶನ್ ಹಾಗೂ ಸುದೀಪ್ ಅವರ ಸಿನಿಮಾಗಳ ಚಿತ್ರೀಕರಣ ನಡೆಯುತ್ತಿರುವುದು ವಿಶೇಷ.

ಇದನ್ನೂ ಓದಿ:ತೆಲುಗು ಸ್ಟಾರ್ ನಟನ ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ

‘ಬಿಲ್ಲಾ ರಂಗ ಭಾಷಾ’ ಸಿನಿಮಾದ ನಿರ್ದೇಶನವನ್ನು ಅನೂಪ್ ಭಂಡಾರಿ ಮಾಡುತ್ತಿದ್ದಾರೆ. ಸುದೀಪ್ ಜೊತೆಗೆ ಇದು ಎರಡನೇ ಸಿನಿಮಾ ಅವರಿಗೆ. ಈ ಹಿಂದೆ ಅವರು ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶಿಸಿದ್ದರು. ‘ಬಿಲ್ಲಾ ರಂಗ ಭಾಷಾ’ ಸಿನಿಮಾವನ್ನು ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ನಾಯಕಿ ಯಾರೆಂದು ಅಧಿಕೃತ ಘೋಷಣೆ ಆಗಿಲ್ಲ, ಆದರೆ ಶ್ರೀನಿಧಿ ಶೆಟ್ಟಿ ನಾಯಕಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದ ಸಂಗೀತ ನಿರ್ದೇಶಕರು ಇನ್ನಿತರೆ ತಂತ್ರಜ್ಞರ ಘೋಷಣೆ ಇನ್ನಷ್ಟೆ ಆಗಬೇಕಿದೆ.

‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಬಳಿಕ ಸುದೀಪ್ ತಮಿಳಿನ ಚೇರನ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಈ ಹಿಂದೆ ಕೆಆರ್​ಜಿ ನಿರ್ಮಾಣ ಸಂಸ್ಥೆಯ ಜೊತೆಗೆ ಹೊಸ ಸಿನಿಮಾ ಘೋಷಣೆ ಮಾಡಿದ್ದರು ಆದರೆ ಸಿನಿಮಾದ ಚಿತ್ರೀಕರಣ ಇನ್ನಷ್ಟೆ ಶುರುವಾಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Thu, 1 May 25

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?