AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂರ ಆಪರೇಷನ್​ಗೆ ಕಿಚ್ಚನ ಮೆಚ್ಚುಗೆ; ‘ನ್ಯಾಯ ಸಿಕ್ಕಿದೆ’ ಎಂದ ಸುದೀಪ್

ಮೇ 7ರಂದು ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರಕ್ಕೆ ನಟ ಕಿಚ್ಚ ಸುದೀಪ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಸೇನೆಯ ಕ್ರಮವನ್ನು ಅವರು ಮೆಚ್ಚಿಕೊಂಡಿದ್ದಾರೆ. ಭಾರತದ ಧೈರ್ಯ ಮತ್ತು ಸೇನೆಯ ಶೌರ್ಯವನ್ನು ಅವರು ತಮ್ಮ ಟ್ವೀಟ್‌ನಲ್ಲಿ ಪ್ರಶಂಸಿಸಿದ್ದಾರೆ.

ಸಿಂಧೂರ ಆಪರೇಷನ್​ಗೆ ಕಿಚ್ಚನ ಮೆಚ್ಚುಗೆ; ‘ನ್ಯಾಯ ಸಿಕ್ಕಿದೆ’ ಎಂದ ಸುದೀಪ್
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:May 07, 2025 | 12:46 PM

ಇಂದು (ಮೇ 7) ಪ್ರತಿಯೊಬ್ಬರ ಭಾರತೀಯನ ಪಾಲಿಗೆ ವಿಶೇಷ ದಿನವಾಗಿತ್ತು. ಏಕೆಂದರೆ, ಪಹಲ್ಗಾಮ್ ದಾಳಿಗೆ (Pahalgam Attack) ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರರ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸೇನೆಯ ಕ್ರಮದ ಬಗ್ಗೆ ಅವರು ಶ್ಲಾಘನೆ ಹೊರಹಾಕಿದ್ದಾರೆ. ಈ ಮೊದಲು ‘ಪಹಲ್ಗಾಮ್’ ದಾಳಿ ಆದಾಗ ಸುದೀಪ್ ಸಂತಾಪ ಸೂಚಿಸಿದ್ದರು.

ಸಿಂಧೂರ ಆಪರೇಷನ್ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ‘ಓರ್ವ ಭಾರತೀಯನಾಗಿ, ಈ ಪವಿತ್ರ ಭೂಮಿಯ ಮಗನಾಗಿ ಹಲ್ಗಾಮ್‌ನಲ್ಲಿ ನಡೆದ ಘಟನೆ ನನಗೆ ನೋವನ್ನು ತಂದಿತ್ತು. ಇಂದು ನನಗೆ ನ್ಯಾಯ ಸಿಕ್ಕಂತೆ ಅನಿಸುತ್ತಿದೆ. ಆಪರೇಷನ್ ಸಿಂಧೂರ: ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ
Image
ಆ ಒಂದು ಘಟನೆಯಿಂದ ಅಂಬಿಗೆ ಅಣ್ಣಾವ್ರ ಮೇಲಿನ ಗೌರವ ಹೆಚ್ಚಿತ್ತು
Image
‘ಎಲ್ಲರಿಗೂ ಒಂದೇ ರೀತಿಯ ಸಂಭಾವನೆ’; ಸಮಂತಾ ಹೊಸ ನಿಯಮ
Image
ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಸರ್ಜಿಕಲ್ ಸ್ಟ್ರೈಕ್; ಉಘೇ ಎಂದ ಬಾಲಿವುಡ್
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ

ಇದನ್ನೂ ಓದಿ: ಸೆಟ್ಟೇರಿತು ಕಿಚ್ಚ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷ’; BRB ಫಸ್ಟ್ ಲುಕ್ ರಿವೀಲ್

‘ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ. ನಮ್ಮ ಧೈರ್ಯಶಾಲಿಗಳು (ಯೋಧರು) ಸಿಂಧೂರದ ಗೌರವವನ್ನು ಬೆಂಕಿ ಮತ್ತು ನಿಖರತೆಯೊಂದಿಗೆ ಮತ್ತೆ ತಂದಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ಅನಂತ ವಂದನೆಗಳು. ದೃಢವಾಗಿ ಮತ್ತು ನಿರ್ಭೀತವಾಗಿ ನಿಂತ ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದ. ಭಾರತ ಮರೆಯುವುದಿಲ್ಲ, ಭಾರತ ಕ್ಷಮಿಸುವುದಿಲ್ಲ’ ಎಂದು ಸುದೀಪ್ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮುಗ್ಧರ ಮೇಲೆ ನಡೆದ ದಾಳಿಯನ್ನು ನೋಡಿ ಸುದೀಪ್ ಮರುಗಿದ್ದರು. ‘ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ’ ಎಂದಿದ್ದ ಸುದೀಪ್, ಇದಕ್ಕೆ ಪ್ರತೀಕಾರ ಬೇಕು ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Wed, 7 May 25

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?