AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ಸಮರ: ಬಿಗ್​ ಬಾಸ್ ಶುರು ಸಮಯಕ್ಕೇ​ ಡಿ ಬಾಸ್ ರಾಬರ್ಟ್​ ಸಿನಿಮಾ ಪ್ರಿ-ರೀಲಿಸ್ ಈವೆಂಟ್

ದರ್ಶನ್​ ಹಾಗೂ ಸುದೀಪ್​ ನಡುವಿನ ಸ್ನೇಹ ಮುರಿದು ಬಿದ್ದಿರುವ ವಿಚಾರ ಗೊತ್ತೇ ಇದೆ. ಹೀಗಿರುವಾಗ ಎರಡೂ ಕಾರ್ಯಕ್ರಮಗಳು ಒಂದೇ ಸಮಯಕ್ಕೆ ಆಯೋಜನೆಗೊಂಡಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ತಾರಾ ಸಮರ: ಬಿಗ್​ ಬಾಸ್ ಶುರು ಸಮಯಕ್ಕೇ​ ಡಿ ಬಾಸ್ ರಾಬರ್ಟ್​ ಸಿನಿಮಾ ಪ್ರಿ-ರೀಲಿಸ್ ಈವೆಂಟ್
ದರ್ಶನ್​-ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Feb 28, 2021 | 5:04 PM

Share

ಭಾನುವಾರ ಬಂತೆಂದರೆ ಸಾಕು ಪ್ರೇಕ್ಷಕರನ್ನು ರಂಜಿಸೋಕೆ ಕಿರುತೆರೆಯರವರು ಒಂದಿಲ್ಲೊಂದು ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಇಂದು ಪ್ರೇಕ್ಷರ ಪಾಲಿಗೆ ಹಬ್ಬದೂಟವೇ ಸರಿ. ಏಕೆಂದರೆ, ಒಂದುಕಡೆ ಕನ್ನಡ ಬಿಗ್​ ಬಾಸ್​ ಸೀಸನ್​ 8ಗೆ ಗ್ರ್ಯಾಂಡ್​ ಎಂಟ್ರಿ ಸಿಗುತ್ತಿದ್ದರೆ, ಮತ್ತೊಂದು ಕಡೆ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಎರಡೂ ಕಾರ್ಯಕ್ರಮಗಳು ಪ್ರಾಮುಖ್ಯತೆ ಪಡೆದುಕೊಂಡಿವೆ.

ಸಂಜೆ ಆರು ಗಂಟೆಗೆ ಕಿಚ್ಚ ಸುದೀಪ್​ ಬಿಗ್​ ಬಾಸ್​ ಸೀಸನ್​ 8ಗೆ ಗ್ರ್ಯಾಂಡ್​ ಓಪನಿಂಗ್​ ನೀಡಲಿದ್ದಾರೆ. ರಾಬರ್ಟ್​ ಸಿನಿಮಾ ಪ್ರಿ ರೀಲೀಸ್​ ಕಾರ್ಯಕ್ರಮ ಕೂಡ ಹುಬ್ಬಳ್ಳಿಯಲ್ಲಿ ಆರು ಗಂಟೆಗೆ ಆರಂಭವಾಗಲಿದೆ. ಎರಡೂ ಕಾರ್ಯಕ್ರಮಗಳು ಸ್ಯಾಂಡಲ್​ವುಡ್​ ಪ್ರೇಕ್ಷಕರ ಪಾಲಿಗೆ ತುಂಬಾನೇ ಇಂಪಾರ್ಟೆಂಟ್​.

ದರ್ಶನ್​ ಹಾಗೂ ಸುದೀಪ್​ ನಡುವಿನ ಸ್ನೇಹ ಮುರಿದು ಬಿದ್ದಿರುವ ವಿಚಾರ ಗೊತ್ತೇ ಇದೆ. ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗೋಲ್ಲ ಎನ್ನುವದು ಗುಟ್ಟಾಗಿ ಏನು ಉಳಿದಿಲ್ಲ. ಹೀಗಿರುವಾಗ ಎರಡೂ ಕಾರ್ಯಕ್ರಮಗಳು ಒಂದೇ ಸಮಯಕ್ಕೆ ಆಯೋಜನೆಗೊಂಡಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಲರ್ಸ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರಸಾರವಾಗುತ್ತಿದೆ. ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ ರಾತ್ರಿ 10-11 ಗಂಟೆವರೆಗೂ ನಡೆಯಲಿದೆ. 17 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆ ಪ್ರವೇಶಿಸುವ ನಿರೀಕ್ಷೆ ಇದೆ. ಮನೆ ಒಳಗೆ ಅಭ್ಯರ್ಥಿಗಳು ಹೋಗುವುದರ ಜತೆಗೆ ಮನರಂಜನೆ ಕಾರ್ಯಕ್ರಮಗಳು ಕೂಡ ಇರಲಿವೆ.

ಹುಬ್ಬಳ್ಳಿಯಲ್ಲಿ ರಾಬರ್ಟ್​ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ರಾಬರ್ಟ್​ ಪ್ರಿ ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಯಸ್ ಮಿಡಿಯಾ ಡಿಜಿಟಲ್ ವೇದಿಕೆ (ಯ್ಯೂಟ್ಯೂಬ್) ಹಾಗೂ ಸಾಮಾಜಿಕ ಜಾಲತಾಣದಲ್ಲಿ ನೀವು ಈ ಕಾರ್ಯಕ್ರಮ ವೀಕ್ಷಣೆ ಮಾಡಬಹುದು. ದರ್ಶನ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ