AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ಸಮರ: ಬಿಗ್​ ಬಾಸ್ ಶುರು ಸಮಯಕ್ಕೇ​ ಡಿ ಬಾಸ್ ರಾಬರ್ಟ್​ ಸಿನಿಮಾ ಪ್ರಿ-ರೀಲಿಸ್ ಈವೆಂಟ್

ದರ್ಶನ್​ ಹಾಗೂ ಸುದೀಪ್​ ನಡುವಿನ ಸ್ನೇಹ ಮುರಿದು ಬಿದ್ದಿರುವ ವಿಚಾರ ಗೊತ್ತೇ ಇದೆ. ಹೀಗಿರುವಾಗ ಎರಡೂ ಕಾರ್ಯಕ್ರಮಗಳು ಒಂದೇ ಸಮಯಕ್ಕೆ ಆಯೋಜನೆಗೊಂಡಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ತಾರಾ ಸಮರ: ಬಿಗ್​ ಬಾಸ್ ಶುರು ಸಮಯಕ್ಕೇ​ ಡಿ ಬಾಸ್ ರಾಬರ್ಟ್​ ಸಿನಿಮಾ ಪ್ರಿ-ರೀಲಿಸ್ ಈವೆಂಟ್
ದರ್ಶನ್​-ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Feb 28, 2021 | 5:04 PM

Share

ಭಾನುವಾರ ಬಂತೆಂದರೆ ಸಾಕು ಪ್ರೇಕ್ಷಕರನ್ನು ರಂಜಿಸೋಕೆ ಕಿರುತೆರೆಯರವರು ಒಂದಿಲ್ಲೊಂದು ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಇಂದು ಪ್ರೇಕ್ಷರ ಪಾಲಿಗೆ ಹಬ್ಬದೂಟವೇ ಸರಿ. ಏಕೆಂದರೆ, ಒಂದುಕಡೆ ಕನ್ನಡ ಬಿಗ್​ ಬಾಸ್​ ಸೀಸನ್​ 8ಗೆ ಗ್ರ್ಯಾಂಡ್​ ಎಂಟ್ರಿ ಸಿಗುತ್ತಿದ್ದರೆ, ಮತ್ತೊಂದು ಕಡೆ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಎರಡೂ ಕಾರ್ಯಕ್ರಮಗಳು ಪ್ರಾಮುಖ್ಯತೆ ಪಡೆದುಕೊಂಡಿವೆ.

ಸಂಜೆ ಆರು ಗಂಟೆಗೆ ಕಿಚ್ಚ ಸುದೀಪ್​ ಬಿಗ್​ ಬಾಸ್​ ಸೀಸನ್​ 8ಗೆ ಗ್ರ್ಯಾಂಡ್​ ಓಪನಿಂಗ್​ ನೀಡಲಿದ್ದಾರೆ. ರಾಬರ್ಟ್​ ಸಿನಿಮಾ ಪ್ರಿ ರೀಲೀಸ್​ ಕಾರ್ಯಕ್ರಮ ಕೂಡ ಹುಬ್ಬಳ್ಳಿಯಲ್ಲಿ ಆರು ಗಂಟೆಗೆ ಆರಂಭವಾಗಲಿದೆ. ಎರಡೂ ಕಾರ್ಯಕ್ರಮಗಳು ಸ್ಯಾಂಡಲ್​ವುಡ್​ ಪ್ರೇಕ್ಷಕರ ಪಾಲಿಗೆ ತುಂಬಾನೇ ಇಂಪಾರ್ಟೆಂಟ್​.

ದರ್ಶನ್​ ಹಾಗೂ ಸುದೀಪ್​ ನಡುವಿನ ಸ್ನೇಹ ಮುರಿದು ಬಿದ್ದಿರುವ ವಿಚಾರ ಗೊತ್ತೇ ಇದೆ. ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗೋಲ್ಲ ಎನ್ನುವದು ಗುಟ್ಟಾಗಿ ಏನು ಉಳಿದಿಲ್ಲ. ಹೀಗಿರುವಾಗ ಎರಡೂ ಕಾರ್ಯಕ್ರಮಗಳು ಒಂದೇ ಸಮಯಕ್ಕೆ ಆಯೋಜನೆಗೊಂಡಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಲರ್ಸ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರಸಾರವಾಗುತ್ತಿದೆ. ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ ರಾತ್ರಿ 10-11 ಗಂಟೆವರೆಗೂ ನಡೆಯಲಿದೆ. 17 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆ ಪ್ರವೇಶಿಸುವ ನಿರೀಕ್ಷೆ ಇದೆ. ಮನೆ ಒಳಗೆ ಅಭ್ಯರ್ಥಿಗಳು ಹೋಗುವುದರ ಜತೆಗೆ ಮನರಂಜನೆ ಕಾರ್ಯಕ್ರಮಗಳು ಕೂಡ ಇರಲಿವೆ.

ಹುಬ್ಬಳ್ಳಿಯಲ್ಲಿ ರಾಬರ್ಟ್​ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ರಾಬರ್ಟ್​ ಪ್ರಿ ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಯಸ್ ಮಿಡಿಯಾ ಡಿಜಿಟಲ್ ವೇದಿಕೆ (ಯ್ಯೂಟ್ಯೂಬ್) ಹಾಗೂ ಸಾಮಾಜಿಕ ಜಾಲತಾಣದಲ್ಲಿ ನೀವು ಈ ಕಾರ್ಯಕ್ರಮ ವೀಕ್ಷಣೆ ಮಾಡಬಹುದು. ದರ್ಶನ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ