AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರ ಮುಗಿಸಿ ಬಂದ ಸುದೀಪ್, ಜೊತೆಯಾದ ಎಲ್ಲರಿಗೂ ಧನ್ಯವಾದ ಅರ್ಪಣೆ, ಅಭಿಮಾನಿಗಳಿಗೆ ವಿಶೇಷ ಪ್ರೀತಿ

Kichcha Sudeep: ಬಿಜೆಪಿ ಪರ ಪ್ರಚಾರ ಯಾತ್ರೆ ಮಾಡಿರುವ ನಟ ಸುದೀಪ್, ಪ್ರಚಾರದಲ್ಲಿ ಜೊತೆಯಾದವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಕ್ಷಮೆಯನ್ನೂ ಕೇಳಿದ್ದಾರೆ.

ಪ್ರಚಾರ ಮುಗಿಸಿ ಬಂದ ಸುದೀಪ್, ಜೊತೆಯಾದ ಎಲ್ಲರಿಗೂ ಧನ್ಯವಾದ ಅರ್ಪಣೆ, ಅಭಿಮಾನಿಗಳಿಗೆ ವಿಶೇಷ ಪ್ರೀತಿ
ಸುದೀಪ್
Follow us
ಮಂಜುನಾಥ ಸಿ.
|

Updated on: May 10, 2023 | 7:00 AM

ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಬಹಿರಂಗ ಪ್ರಚಾರ ಮೇ 08 ರಂದು ಅಂತ್ಯವಾಗಿದ್ದು ಇಂದು (ಮೇ 10) ಮತದಾನ ನಡೆಯಲಿದೆ. ನಟ ಸುದೀಪ್ (Sudeep) ಈ ಬಾರಿ ಬಿಜೆಪಿ (BJP) ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಲ್ಲದೆ ರಾಜ್ಯದಾದ್ಯಂತ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡಿದರು. ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆ ಬೆಂಗಳೂರಿಗೆ ವಾಪಸ್ಸಾಗಿರುವ ನಟ ಸುದೀಪ್ (Sudeep), ಮತದಾನ ಇನ್ನು ಕೆಲವೇ ಗಂಟೆಗಳಿರುವಂತೆ, ಪ್ರಚಾರದಲ್ಲಿ ಜೊತೆಯಾಗಿ ಎಲ್ಲರಿಗೂ ಧನ್ಯವಾದ ಹೇಳಿರುವ ಜೊತೆಗೆ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹಾಗೂ ಕ್ಷಮೆಯನ್ನೂ ಕೋರಿದ್ದಾರೆ.

ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭಾವುಕ ಪದ್ಯವೊಂದನ್ನು ಹಂಚಿಕೊಂಡಿದ್ದು, ”ನಿಮ್ಮ ಕಣ್ಣಲ್ಲಿ ಕಂಡ ಅಪಾರ ಪ್ರೀತಿ, ನನ್ನ ಬದುಕಿನ ರೀತಿ, ನಿಮ್ಮ ನಿರಂತರ ರಣಕೇಕೆ, ಸಾಕಿಷ್ಟು ಈ ಜನುಮಕೆ. ಹಣತೆ ಹೊತ್ತಿರಿ ಆರತಿ ಎತ್ತಿದಿರಿ, ದಾರಿಯುದ್ದಕ್ಕೂ ಹೂವು ಚೆಲ್ಲಿದಿರಿ. ನಿಮ್ಮ ಎದೆಯ ಮೇಲಿನ ಹಚ್ಚೆಯಂತೆ ಸದಾ ಜೊತೆಗಿರುವೆ” ಎಂದಿದ್ದಾರೆ ನಟ ಸುದೀಪ್.

”ಜನಸಾಗರದ ನೂಕು ನುಗ್ಗಲಲ್ಲಿ ಕೆಲವರಿಗೆ ಬಿದ್ದ ಲಾಠಿ ಏಟಿಕೆ ಕ್ಷಮೆ ಇರಲಿ. ಸ್ನೇಹಿತರೆ ನಿಮ್ಮ ಪ್ರತಿ ಮನದಲ್ಲಿ ಈ ಪ್ರೀತಿ ಹೀಗೆಯೇ ಇರಲಿ. ಕರುನಾಡಲ್ಲಿ ನಡೆದ ಈ ಮೆರವಣಿಗೆಯುದ್ದಕ್ಕೂ ಜೊತೆಯಾಗಿ ಸಾಗಿದ ಮಾಧ್ಯಮ ಮಿತ್ರರಿಗೆ. ಕಾಳಜಿಯಿಂದ ಕಾವಲಿಟ್ಟ ಪೊಲೀಸರಿಗೆ ಮಿಲಿಟರಿ ಕಮಾಂಡೊ ಸಿಬ್ಬಂದಿಗೆ. ಲಕ್ಷಾಂತರ ಕಾರ್ಯಕರ್ತರಿಗೆ ಹೃದಯಗೀತೆಯಾದ ನನ್ನ ಸ್ನೇಹಿತರಿಗೆ ಚಿರರುಣಿ” ಎಂದು ಬರೆದಿದ್ದಾರೆ ನಟ ಸುದೀಪ್. ಕೊನೆಯಲ್ಲಿ ಪ್ರೀತಿಯಿಂದ ನಿಮ್ಮ ಕಿಚ್ಚ, ಲವ್ ಯೂ ಆಲ್ ಎಂಬ ಕಿರುಸಾಲು ಸಹ ಸೇರಿಸಿದ್ದಾರೆ.

ಮೇ 8 ರಂದು ಬಹಿರಂಗ ಪ್ರಚಾರ ಅಂತ್ಯವಾಗಿ ಬೆಂಗಳೂರಿಗೆ ವಾಪಸ್ಸಾಗುತ್ತಲೇ ಸುದೀಪ್ ಟ್ವೀಟ್ ಒಂದನ್ನು ಮಾಡಿದ್ದರು. ಸುದೀರ್ಘ ಪ್ರಚಾರದ ಬಳಿಕ ಬೆಂಗಳೂರಿಗೆ ವಾಪಸ್ಸಾಗಿದ್ದೇನೆ. ಇದು ಒಂದು ರೀತಿಯಲ್ಲಿ ಕಲಿಕೆಯಹ ಅನುಭವ ಸಹ. ಈ ನನ್ನ ಪಯಣದಲ್ಲಿ ಪ್ರಾರಂಭದಿಂದಲೂ ನನ್ನ ಜೊತೆಗಿದ್ದು ನನಗೆ ಸಹಕಾರ ನೀಡಿದ ಚಕ್ರವರ್ತಿ ಚಂದ್ರಚೂಡ್​ಗೆ ಧನ್ಯವಾದ. ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ” ಎಂದು ಬರೆದುಕೊಂಡಿದ್ದರು. ಚಕ್ರವರ್ತಿ ಚಂದ್ರಚೂಡ್ ಅವರೊಟ್ಟಿಗೆ ಚಿತ್ರವನ್ನು ಸುದೀಪ್ ಹಂಚಿಕೊಂಡಿದ್ದರು.

ಇದನ್ನೂ ಓದಿ:ಇಂದಿನ ಬಿಜೆಪಿ ನಾಯಕರ ರಾಜ್ಯ ಪ್ರವಾಸ; ಮೋದಿ, ಯೋಗಿ, ಶಾ, ಕಿಚ್ಚ ಸುದೀಪ್ ಸೇರಿ ಘಟಾನುಘಟಿ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ ಗೊತ್ತಾ?

ಚುನಾವಣೆ ಘೋಷಣೆ ಸಮಯದಲ್ಲಿ ವಿಶೇಷ ಸುದ್ದಿಗೋಷ್ಠಿ ಕರೆದಿದ್ದ ನಟ ಸುದೀಪ್, ತಾವು ಈ ಬಾರಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಘೋಷಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಅದ್ಭುತವಾದ ವ್ಯಕ್ತಿ, ಅಂಥಹಾ ವ್ಯಕ್ತಿಗೆ ಮತ್ತೊಂದು ಅವಕಾಶ ಸಿಗಬೇಕು ಹಾಗಾಗಿಯೇ ತಾವು ಪ್ರಚಾರ ಮಾಡುತ್ತಿರುವುದಾಗಿ ಹೇಳಿದರು. ಬಸವರಾಜ ಬೊಮ್ಮಾಯಿ ಅವರು ಯಾರನ್ನು ಸೂಚಿಸುತ್ತಾರೆಯೋ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಸುದೀಪ್ ಹೇಳಿದ್ದರು. ಅಂತೆಯೇ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರದಿಂದಲೇ ಆರಂಭಿಸಿ ಕರ್ನಾಟಕದ ಹಲವಾರು ಕ್ಷೇತ್ರಗಳನ್ನು ಸುದೀಪ್ ಪರ್ಯಟನೆ ಮಾಡಿದರು. ಉತ್ತರ ಕರ್ನಾಟಕದಿಂದ ಆರಂಭಿಸಿ ಹಲವು ಕ್ಷೇತ್ರಗಳನ್ನು ಸುದೀಪ್ ಪರ್ಯಟನೆ ಮಾಡಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ