AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ ಸುದೀಪ್ ತಾಯಿ ಸರೋಜಾ ನಿಧನ

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Breaking: ನಟ ಸುದೀಪ್ ತಾಯಿ ಸರೋಜಾ ನಿಧನ
ಮಂಜುನಾಥ ಸಿ.
|

Updated on:Oct 20, 2024 | 9:26 AM

Share

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್​ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.

ಇದನ್ನೂ ಓದಿ: ‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಸುದೀಪ್​ ಅವರ ತಾಯಿ ಮಂಗಳೂರು ಮೂಲದವರು, ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು’.

ಸುದೀಪ್​ರ ತಾಯಿ ಸರೋಜಾ ಆಗಾಗ್ಗೆ ಕೆಲವು ಸಿನಿಮಾ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ಸುದೀಪ್​ರ ಸಹೋದರಿ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ಸರೋಜಾ ಅವರು ವೇದಿಕೆ ಮೇಲೆ ಮಗ, ಮೊಗನನ್ನು ಕಂಡು ತುಸು ಭಾವುಕರಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Sun, 20 October 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ