Breaking: ನಟ ಸುದೀಪ್ ತಾಯಿ ಸರೋಜಾ ನಿಧನ

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Breaking: ನಟ ಸುದೀಪ್ ತಾಯಿ ಸರೋಜಾ ನಿಧನ
Follow us
|

Updated on:Oct 20, 2024 | 9:26 AM

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್​ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.

ಇದನ್ನೂ ಓದಿ: ‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಸುದೀಪ್​ ಅವರ ತಾಯಿ ಮಂಗಳೂರು ಮೂಲದವರು, ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು’.

ಸುದೀಪ್​ರ ತಾಯಿ ಸರೋಜಾ ಆಗಾಗ್ಗೆ ಕೆಲವು ಸಿನಿಮಾ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ಸುದೀಪ್​ರ ಸಹೋದರಿ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ಸರೋಜಾ ಅವರು ವೇದಿಕೆ ಮೇಲೆ ಮಗ, ಮೊಗನನ್ನು ಕಂಡು ತುಸು ಭಾವುಕರಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Sun, 20 October 24

ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ