AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಸುಧಾರಾಣಿ; ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ

ಡಾ. ರಾಜ್​ ಕುಟುಂಬದವರು ಮೊದಲಿನಿಂದಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ, ಅವಕಾಶ ನೀಡುತ್ತಾ ಬಂದಿದ್ದಾರೆ. ಈಗ ಶಿವರಾಜ್​ಕುಮಾರ್ ಅವರ ಪುತ್ರಿ ನಿವೇದಿತಾ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಟ್ಟಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಈ ಸಂಸ್ಥೆ ನಿರ್ಮಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾದಲ್ಲಿ ಹೊಸಬರ ಜೊತೆಗೆ ಹಿರಿಯ ಕಲಾವಿದರೂ ಇದ್ದಾರೆ. ನಟಿ ಸುಧಾರಾಣಿ ಅವರು ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ.

ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಸುಧಾರಾಣಿ; ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ
ಸುಧಾರಾಣಿ
ಮದನ್​ ಕುಮಾರ್​
|

Updated on: Jun 28, 2024 | 6:58 PM

Share

ಪ್ರತಿ ಹಂತದಲ್ಲೂ ಸುದ್ದಿ ಮಾಡುತ್ತಿರುವ ‘ಫೈರ್ ಫ್ಲೈ’ (Fire Fly) ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ. ವಿಶೇಷ ಏನೆಂದರೆ, ಇದೇ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ (Sudha Rani) ಅವರು ಅಭಿನಯಿಸುತ್ತಿದ್ದಾರೆ.

‘ಫೈರ್ ಫ್ಲೈ’ ಸಿನಿಮಾಗೆ ನಿವೇದಿತಾ ಶಿವರಾಜ್​ಕುಮಾರ್ ಅವರು ಬಂಡವಾಳ ಹೂಡಿದ್ದು, ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ ಅವರು ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ ಅವರ ಸೇರ್ಪಡೆಯಿಂದ ಸಿನಿಮಾದ ತಾರಾಮೆರುಗು ಹೆಚ್ಚಾಗಿದೆ. ಸುಧಾರಾಣಿ ಅವರು ಪದ್ಮಾ ಎಂಬ ಪಾತ್ರವನ್ನು ಈ ಸಿನಿಮಾದಲ್ಲಿ ನಿಭಾಯಿಸುತ್ತಿದ್ದಾರೆ. ನಾಯಕನ ತಾಯಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಶೂಟಿಂಗ್​ ಮುಗಿಸಿರುವ ಅವರು ಡಬ್ಬಿಂಗ್​ ಸಹ ಪೂರ್ಣಗೊಳಿಸಿದ್ದಾರೆ. ‘ಫೈರ್ ಫ್ಲೈ’ ಸಿನಿಮಾದಲ್ಲಿ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

ಸುಧಾರಾಣಿ ಅವರು ‘ಫೈರ್ ಫ್ಲೈ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ಡಾ. ರಾಜ್​ಕುಮಾರ್​ ಅವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಆದ್ದರಿಂದ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ನಿಂತು ಹೋಗು ಎಂದರೂ ನಾನು ತಯಾರಿದ್ದೇನೆ. ಯಾಕಂದ್ರೆ, ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದ ಮಗು. ಈಗ ಅವಳು ಒಂದು ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾಳೆ. ಆಕೆ ನಿರ್ಮಾಪಕಿ ಆಗಿದ್ದಾಳೆ. ಈ ಬಗ್ಗೆ ನನಗೆ ಬಹಳ ಖುಷಿ ಇದೆ’ ಎಂದು ಸುಧಾರಾಣಿ ಹೇಳಿದ್ದಾರೆ.

ಇದನ್ನೂ ಓದಿ: ಮಗಳ ಜೊತೆ ಮಸ್ತ್ ಡ್ಯಾನ್ಸ್ ಮಾಡಿದ ಸುಧಾರಾಣಿ

‘ಕಥೆಯಿಂದ ಪ್ರೊಡಕ್ಷನ್ ತನಕ ಈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ನಮ್ಮ ಕನ್ನಡದ ಪ್ರೇಕ್ಷಕರು ಈ ಸಿನಿಮಾಗೆ ಬೆಂಬಲ ನೀಡಬೇಕು. ಇಷ್ಟು ಚಿಕ್ಕ ಪಾತ್ರಕ್ಕಾಗಿ ನನ್ನನ್ನು ಕೇಳಬೇಕಾ ಅಂತ ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ಆದರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿ ಇರುವ ಹುಮ್ಮಸ್ಸು, ಆಸಕ್ತಿ ನನಗೆ ಇಷ್ಟವಾಯ್ತು. ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡುತ್ತಿದ್ದಾರೆ. ಈ ರೀತಿ ಇರುವಾಗ ಎಲ್ಲರಿಗೂ ಅವರ ಮೊದಲ ಸಿನಿಮಾ ಮಲ್ಟಿಸ್ಟಾರರ್​, ದೊಡ್ಡ ಬಜೆಟ್, ಆ್ಯಕ್ಷನ್ ಸಿನಿಮಾ ಆಗಿರಬೇಕು ಎಂಬ ಆಲೋಚನೆ ಇರುತ್ತದೆ. ಆದರೆ ಈ ವಿಚಾರದಲ್ಲಿ ವಂಶಿ ಡಿಫರೆಂಟ್​. ಸಂಬಂಧಗಳ ಕುರಿತು ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತು ನೋಡುವಂತಹ ಸಿನಿಮಾ ಮಾಡಿದ್ದಾರೆ’ ಎಂಬುದು ಸುಧಾರಾಣಿ ಅವರ ಮಾತುಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?