AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ

35 years of Anand: ವಿಶೇಷ ಎಂದರೆ, ‘ಆನಂದ್​’ ಚಿತ್ರ ತೆರೆ ಕಾಣುವುದಕ್ಕೂ ಮುನ್ನ ಸುಧಾರಾಣಿ ಅವರ ಹೆಸರು ಜಯಶ್ರೀ ಆಗಿತ್ತು. ಪತ್ರಿಕೆಗಳಲ್ಲಿ ಬರುತ್ತಿದ್ದ ಕೆಲವು ಲೇಖನಗಳಲ್ಲೂ ಅವರ ಹೆಸರನ್ನು ಜಯಶ್ರೀ ಎಂದೇ ಬರೆಯಲಾಗುತ್ತಿತ್ತು.

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ
ಸುಧಾರಾಣಿ-ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 20, 2021 | 9:16 AM

Share

ಕನ್ನಡ ಚಿತ್ರರಂಗದಲ್ಲಿ ಶಿವರಾಜ್​ಕುಮಾರ್​ ಮತ್ತು ಸುಧಾರಾಣಿ ಅವರದ್ದು ಹಿಟ್​ ಜೋಡಿ. ಒಂದೇ ಸಮಯಕ್ಕೆ ಚಿತ್ರರಂಗಕ್ಕೆ ಕಾಲಿಟ್ಟ ಈ ಮಹಾನ್​ ಕಲಾವಿದರು ಬಳಿಕ ಸ್ಯಾಂಡಲ್​ವುಡ್​ನಲ್ಲಿ ಮಾಡಿದ್ದು ದೊಡ್ಡ ಸಾಧನೆ. ನಾಯಕ-ನಾಯಕಿಯಾಗಿ ಇಬ್ಬರೂ ನಟಿಸಿದ ಮೊದಲ ಸಿನಿಮಾ ‘ಆನಂದ್​’. 1986ರಲ್ಲಿ ತೆರೆಕಂಡ ಆ ಚಿತ್ರಕ್ಕೀಗ 35 ವರ್ಷ ತುಂಬಿದೆ. ಅದನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಸುಧಾರಾಣಿ ಅವರಿಗೆ ಈ ಸಿನಿಮಾದಿಂದ ಚಿತ್ರರಂಗದಲ್ಲಿ ಬಹುದೊಡ್ಡ ಯಶಸ್ಸು ಸಿಕ್ಕಿತ್ತು. ಡಾ. ರಾಜ್​ಕುಮಾರ್​ ಪುತ್ರನ ಮೊದಲ ಚಿತ್ರಕ್ಕೆ ಹೀರೋಯಿನ್​ ಆಗುವುದು ಎಂದರೆ ತಮಾಷೆಯ ಮಾತಲ್ಲ. ಅಂತಹ ಸುವರ್ಣ ಅವಕಾಶ ಅವರಿಗೆ ಒದಗಿಬಂದಿತ್ತು. ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಸುಧಾರಾಣಿ ಅವರು ನಂತರ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಮೆರೆದರು. ಈಗ ‘ಆನಂದ್​’ ಚಿತ್ರ 35 ವಸಂತಗಳನ್ನು ಪೂರೈಸಿರುವುದಕ್ಕೆ ಸುಧಾರಾಣಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ವಿಶೇಷ ಎಂದರೆ, ಆಗಿನ್ನೂ ಸುಧಾರಾಣಿ ಅವರ ಹೆಸರು ಜಯಶ್ರೀ ಆಗಿತ್ತು. ಪತ್ರಿಕೆಗಳಲ್ಲಿ ಬರುತ್ತಿದ್ದ ಕೆಲವು ಲೇಖನಗಳಲ್ಲೂ ಅವರ ಹೆಸರನ್ನು ಜಯಶ್ರೀ ಎಂದೇ ಬರೆಯಲಾಗುತ್ತಿತ್ತು. ಆನಂದ್​ ಸಿನಿಮಾದಿಂದಾಗಿ ಅವರು ಸುಧಾರಾಣಿಯಾಗಿ ಬದಲಾದರು. ಚಿತ್ರಕ್ಕಾಗಿ ಶಿವರಾಜ್​ಕುಮಾರ್ ಜೊತೆ​ ಮಾಡಿಸಿದ್ದ ಫೋಟೋಶೂಟ್​, ಶೂಟಿಂಗ್​ ಸಮಯದ ಫೋಟೋ, ಶತದಿನೋತ್ಸವ ಸಂಭ್ರಮದ ಪೋಸ್ಟರ್,​ ಆಹ್ವಾನ ಪತ್ರಿಕೆ ಹಾಗೂ ಸೋಲೋ ಫೋಟೋಶೂಟ್​ ಮುಂತಾದ್ದನ್ನು ಸುಧಾರಾಣಿ ಈಗ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

‘1986ರ ಜೂನ್​ 19. ನನ್ನ ಜೀವನದ ಬಹುಮುಖ್ಯ ದಿನ. ಆನಂದ್​ ಸಿನಿಮಾ ತೆರೆಕಂಡು 35 ವರ್ಷ ಕಳೆಯಿತು. ಇದು ಸಾಧ್ಯವಾಗಲು ಕಾರಣರಾದ ಎಲ್ಲರಿಗೂ ನನ್ನ ಧನ್ಯವಾದಗಳು. ನನ್ನ ಮೊದಲ ದಿನದ ಶೂಟಿಂಗ್​ನಿಂದ 100 ದಿನಗಳ ಸಮಾರಂಭದವರೆಗಿನ ಕೆಲವು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಇನ್​ಸ್ಟಗ್ರಾಮ್​ನಲ್ಲಿ ಸುಧಾರಾಣಿ ಬರೆದುಕೊಂಡಿದ್ದಾರೆ.

ಶಿವಣ್ಣ ಚಿತ್ರರಂಗಕ್ಕೆ ಕಾಲಿಟ್ಟು 35 ವರ್ಷ ಆಯಿತು ಎಂದು ‘ಹ್ಯಾಟ್ರಿಕ್​​ ಹೀರೋ’ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆನಂದ್​ ಚಿತ್ರದ ತುಣುಕುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂಭ್ರಮಿಸಲಾಗುತ್ತಿದೆ. ‘ಆನಂದ್​’ ಚಿತ್ರಕ್ಕೆ ಸಿಂಗೀತಂ ಶ್ರೀನಿವಾಸ್​ ರಾವ್​ ನಿರ್ದೇಶನ ಮಾಡಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ನಿರ್ಮಾಪಕಿ ಆಗಿದ್ದರು. ರಾಜೇಶ್​, ತಾರಾ, ಜಯಂತಿ, ತೂಗುದೀಪ ಶ್ರೀನಿವಾಸ್​ ಮುಂತಾದವರು ಸಹ ನಟಿಸಿದ್ದರು.

ಇದನ್ನೂ ಓದಿ:

550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!