AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ

35 years of Anand: ವಿಶೇಷ ಎಂದರೆ, ‘ಆನಂದ್​’ ಚಿತ್ರ ತೆರೆ ಕಾಣುವುದಕ್ಕೂ ಮುನ್ನ ಸುಧಾರಾಣಿ ಅವರ ಹೆಸರು ಜಯಶ್ರೀ ಆಗಿತ್ತು. ಪತ್ರಿಕೆಗಳಲ್ಲಿ ಬರುತ್ತಿದ್ದ ಕೆಲವು ಲೇಖನಗಳಲ್ಲೂ ಅವರ ಹೆಸರನ್ನು ಜಯಶ್ರೀ ಎಂದೇ ಬರೆಯಲಾಗುತ್ತಿತ್ತು.

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ
ಸುಧಾರಾಣಿ-ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 20, 2021 | 9:16 AM

Share

ಕನ್ನಡ ಚಿತ್ರರಂಗದಲ್ಲಿ ಶಿವರಾಜ್​ಕುಮಾರ್​ ಮತ್ತು ಸುಧಾರಾಣಿ ಅವರದ್ದು ಹಿಟ್​ ಜೋಡಿ. ಒಂದೇ ಸಮಯಕ್ಕೆ ಚಿತ್ರರಂಗಕ್ಕೆ ಕಾಲಿಟ್ಟ ಈ ಮಹಾನ್​ ಕಲಾವಿದರು ಬಳಿಕ ಸ್ಯಾಂಡಲ್​ವುಡ್​ನಲ್ಲಿ ಮಾಡಿದ್ದು ದೊಡ್ಡ ಸಾಧನೆ. ನಾಯಕ-ನಾಯಕಿಯಾಗಿ ಇಬ್ಬರೂ ನಟಿಸಿದ ಮೊದಲ ಸಿನಿಮಾ ‘ಆನಂದ್​’. 1986ರಲ್ಲಿ ತೆರೆಕಂಡ ಆ ಚಿತ್ರಕ್ಕೀಗ 35 ವರ್ಷ ತುಂಬಿದೆ. ಅದನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಸುಧಾರಾಣಿ ಅವರಿಗೆ ಈ ಸಿನಿಮಾದಿಂದ ಚಿತ್ರರಂಗದಲ್ಲಿ ಬಹುದೊಡ್ಡ ಯಶಸ್ಸು ಸಿಕ್ಕಿತ್ತು. ಡಾ. ರಾಜ್​ಕುಮಾರ್​ ಪುತ್ರನ ಮೊದಲ ಚಿತ್ರಕ್ಕೆ ಹೀರೋಯಿನ್​ ಆಗುವುದು ಎಂದರೆ ತಮಾಷೆಯ ಮಾತಲ್ಲ. ಅಂತಹ ಸುವರ್ಣ ಅವಕಾಶ ಅವರಿಗೆ ಒದಗಿಬಂದಿತ್ತು. ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಸುಧಾರಾಣಿ ಅವರು ನಂತರ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಮೆರೆದರು. ಈಗ ‘ಆನಂದ್​’ ಚಿತ್ರ 35 ವಸಂತಗಳನ್ನು ಪೂರೈಸಿರುವುದಕ್ಕೆ ಸುಧಾರಾಣಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ವಿಶೇಷ ಎಂದರೆ, ಆಗಿನ್ನೂ ಸುಧಾರಾಣಿ ಅವರ ಹೆಸರು ಜಯಶ್ರೀ ಆಗಿತ್ತು. ಪತ್ರಿಕೆಗಳಲ್ಲಿ ಬರುತ್ತಿದ್ದ ಕೆಲವು ಲೇಖನಗಳಲ್ಲೂ ಅವರ ಹೆಸರನ್ನು ಜಯಶ್ರೀ ಎಂದೇ ಬರೆಯಲಾಗುತ್ತಿತ್ತು. ಆನಂದ್​ ಸಿನಿಮಾದಿಂದಾಗಿ ಅವರು ಸುಧಾರಾಣಿಯಾಗಿ ಬದಲಾದರು. ಚಿತ್ರಕ್ಕಾಗಿ ಶಿವರಾಜ್​ಕುಮಾರ್ ಜೊತೆ​ ಮಾಡಿಸಿದ್ದ ಫೋಟೋಶೂಟ್​, ಶೂಟಿಂಗ್​ ಸಮಯದ ಫೋಟೋ, ಶತದಿನೋತ್ಸವ ಸಂಭ್ರಮದ ಪೋಸ್ಟರ್,​ ಆಹ್ವಾನ ಪತ್ರಿಕೆ ಹಾಗೂ ಸೋಲೋ ಫೋಟೋಶೂಟ್​ ಮುಂತಾದ್ದನ್ನು ಸುಧಾರಾಣಿ ಈಗ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

‘1986ರ ಜೂನ್​ 19. ನನ್ನ ಜೀವನದ ಬಹುಮುಖ್ಯ ದಿನ. ಆನಂದ್​ ಸಿನಿಮಾ ತೆರೆಕಂಡು 35 ವರ್ಷ ಕಳೆಯಿತು. ಇದು ಸಾಧ್ಯವಾಗಲು ಕಾರಣರಾದ ಎಲ್ಲರಿಗೂ ನನ್ನ ಧನ್ಯವಾದಗಳು. ನನ್ನ ಮೊದಲ ದಿನದ ಶೂಟಿಂಗ್​ನಿಂದ 100 ದಿನಗಳ ಸಮಾರಂಭದವರೆಗಿನ ಕೆಲವು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಇನ್​ಸ್ಟಗ್ರಾಮ್​ನಲ್ಲಿ ಸುಧಾರಾಣಿ ಬರೆದುಕೊಂಡಿದ್ದಾರೆ.

ಶಿವಣ್ಣ ಚಿತ್ರರಂಗಕ್ಕೆ ಕಾಲಿಟ್ಟು 35 ವರ್ಷ ಆಯಿತು ಎಂದು ‘ಹ್ಯಾಟ್ರಿಕ್​​ ಹೀರೋ’ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆನಂದ್​ ಚಿತ್ರದ ತುಣುಕುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂಭ್ರಮಿಸಲಾಗುತ್ತಿದೆ. ‘ಆನಂದ್​’ ಚಿತ್ರಕ್ಕೆ ಸಿಂಗೀತಂ ಶ್ರೀನಿವಾಸ್​ ರಾವ್​ ನಿರ್ದೇಶನ ಮಾಡಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ನಿರ್ಮಾಪಕಿ ಆಗಿದ್ದರು. ರಾಜೇಶ್​, ತಾರಾ, ಜಯಂತಿ, ತೂಗುದೀಪ ಶ್ರೀನಿವಾಸ್​ ಮುಂತಾದವರು ಸಹ ನಟಿಸಿದ್ದರು.

ಇದನ್ನೂ ಓದಿ:

550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್