AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾರಾಣಿ-ಶಿವಣ್ಣನ ಸಂಬಂಧದ ಬಗ್ಗೆ ಅಪಪ್ರಚಾರ; ಶ್ವಾನಗಳ ಮೂಲಕ ಉತ್ತರ ಕೊಟ್ಟ ನಟಿ

ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ, AI ಸೃಷ್ಟಿಯ ತಪ್ಪು ಮಾಹಿತಿಯಿಂದ ಸೆಲೆಬ್ರಿಟಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ನಟಿ ಸುಧಾರಾಣಿ ಕೂಡ ತಮ್ಮ ಬಗ್ಗೆ ಹರಡಿದ 'ಫೇಕ್ ನ್ಯೂಸ್' ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬರ್​ಗಳು ವೀವ್ಸ್​ಗಾಗಿ ಸೆಲೆಬ್ರಿಟಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಕಥೆಗಳನ್ನು ಸೃಷ್ಟಿಸುತ್ತಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಹಾನಿ ಉಂಟುಮಾಡುತ್ತಿದೆ.

ಸುಧಾರಾಣಿ-ಶಿವಣ್ಣನ ಸಂಬಂಧದ ಬಗ್ಗೆ ಅಪಪ್ರಚಾರ; ಶ್ವಾನಗಳ ಮೂಲಕ ಉತ್ತರ ಕೊಟ್ಟ ನಟಿ
ಶಿವಣ್ಣ-ಸುಧಾರಾಣಿ
ರಾಜೇಶ್ ದುಗ್ಗುಮನೆ
|

Updated on:Apr 06, 2026 | 3:07 PM

Share

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ಬಳಕೆ ಮಿತಿಮೀರಿ ಹೆಚ್ಚಿದೆ. ಯಾವುದು ಸುಳ್ಳು-ಯಾವುದು ನಿಜ? ಯಾವುದು ಎಐ-ಯಾವುದು ನಿಜವಾಗಲೂ ನಡೆದ ಘಟನೆ ಎಂಬುದನ್ನು ಪತ್ತೆ ಹಚ್ಚಲು ಅಸಾಧ್ಯ ಎಂಬ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಮಧ್ಯೆ ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಅನೇಕರು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲ, ಸಲ್ಲದ್ದನ್ನು ಹೇಳಲಾಗುತ್ತದೆ. ಈಗ ನಟಿ ಸುಧಾರಾಣಿ (Sudharani) ಕೂಡ ಈ ರೀತಿಯ ಫೇಕ್​ ನ್ಯೂಸ್​​ನ ಸಂತ್ರಸ್ತೆ ಆಗಿದ್ದಾರೆ. ಅವರು ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚೆಗೆ ಕೆಲ ಯೂಟ್ಯೂಬರ್​​​ಗಳು ವೀವ್ಸ್ ಪಡೆಯಲು ಹೊಸ ತಂತ್ರವೊಂದನ್ನು ಕಂಡುಹಿಡಿದ್ದಾರೆ. ಸೆಲೆಬ್ರಿಟಿಗಳು ಹೇಳದೇ ಇರುವ ವಿಷಯವನ್ನು, ‘ಇತ್ತೀಚೆಗೆ ಅವರು ಸಂದರ್ಶನದಲ್ಲಿ ಹೇಳಿದ್ದಾರೆ’ ಎಂದು ಸೇರಿಸಿ ಸೃಷ್ಟಿಸುತ್ತಿದ್ದಾರೆ. ಇದರಿಂದ ಯೂಟ್ಯೂಬರ್​​ಗಳಿಗೆ ವೀವ್ಸ್ ಆಗುತ್ತಿದೆ ನಿಜ. ಆದರೆ, ಸೆಲೆಬ್ರಿಟಿಗಳ ಹೆಸರು ಹಾಳಾಗುತ್ತಿದೆ. ಸುಧಾರಾಣಿ ಬಗ್ಗೆಯೂ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಸುದ್ದಿಯಲ್ಲೇನಿತ್ತು?

ಯೂಟ್ಯೂಬ್ ಥಂಬ್​​ನೇಲ್ ಮಾದರಿಯ ಸ್ಕ್ರೀನ್​ಶಾಟ್ ಅನ್ನು ಸುಧಾರಾಣಿ ಹಂಚಿಕೊಂಡಿದ್ದಾರೆ. ‘ಶಿವಣ್ಣನನ್ನು ಮದುವೆಯಾಗಬೇಕೆಂದು ಆಸೆ ಪಟ್ಟಿದ್ದರು ಸುಧಾರಾಣಿ. ಆನಂದ್ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ನಟಿ ಸುಧಾರಾಣಿ ಅವರಿಗೆ ಶಿವರಾಜ್ ಕುವಾರ್ ಕಂಡರೆ ಭಯವಿತ್ತು. ನಂತರ ಅವರ ಮೇಲೆ ಪ್ರೀತಿ ಹುಟ್ಟಿತು ಮತ್ತು ಮದುವೆಯಾಗುವ ಆಸೆಯೂ ಇತ್ತು. ಆದರೆ ಡಾ. ರಾಜ್‌ಕುಮಾ‌ರ್ ಅವರ ಮಗ ಎಂಬ ಕಾರಣದಿಂದ ಅವರು ಇದನ್ನು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಈ ವಿಷಯವನ್ನು ಅವರು ಇತ್ತೀಚಿನನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ’ ಎಂದು ಬರೆಯಲಾಗಿದೆ.

ಇದನ್ನೂ ಓದಿ:  ವಿನಯ್ ರಾಜ್​​ಕುಮಾರ್, ಮೇಘನಾ ಶೆಟ್ಟಿ ಜೊತೆಗೆ ಸುಧಾರಾಣಿ ಡ್ಯಾನ್ಸ್: ವಿಡಿಯೋ

ಉತ್ತರ ಕೊಟ್ಟ ನಟಿ

ಸುಧಾರಾಣಿ ಅವರು ಇದಕ್ಕೆ ಉತ್ತರ ಕೊಟ್ಟಿದ್ದಾರೆ. ತಾವು ಮನೆಯಲ್ಲಿ ಸಾಕಿದ ಶ್ವಾನಗಳು ಈ ವಿಷಯಕ್ಕೆ ಸ್ಪಷ್ಟನೆ ಕೊಡುವ ರೀತಿಯಲ್ಲಿ ಅವರು ವಿಡಿಯೋ ಮಾಡಿದ್ದಾರೆ. ಇದು ಫೇಕ್ ನ್ಯೂಸ್ ಎಂದಿದ್ದಾರೆ. ಅಲ್ಲದೆ, ಈ ರೀತಿಯ ವಿಡಿಯೋ ಮಾಡಿದರೆ ಕೇಸ್ ದಾಖಲಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಂಡ ಕಂಡವರೆಲ್ಲ ವಿಡಿಯೋ ಮಾಡೋಕೆ ಆರಂಭಿಸಿದರೆ ಈ ರೀತಿ ಆಗುತ್ತದೆ ಎಂದು ಕೂಡ ಸುಧಾರಾಣಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:05 pm, Mon, 6 April 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ