AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

ಪೃಥ್ವಿ ಅಂಬರ್ ತಮ್ಮ ಹುಟ್ಟೂರಾದ ಕಾಸರಗೋಡಿಗೆ ತೆರಳಿದ್ದಾರೆ. ಅಲ್ಲಿ ಕೃಷಿ ಹಾಗೂ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಪೃಥ್ವಿ ಮಾತನಾಡಿದ್ದಾರೆ.

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ
ಪೃಥ್ವಿ ಅಂಬರ್
ರಾಜೇಶ್ ದುಗ್ಗುಮನೆ
|

Updated on: May 19, 2021 | 3:31 PM

Share

ಕೊರೊನಾ ವೈರಸ್​ ಮಿತಿ ಮೀರುತ್ತಿರುವುದರಿಂದ ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಹುಟ್ಟೂರು ಸೇರಿದ್ದಾರೆ. ಕೆಲವರು ಕೃಷಿಯಲ್ಲಿ ತೊಡಗಿಕೊಂಡರೆ ಇನ್ನೂ ಕೆಲವರು ಸ್ಕ್ರಿಪ್ಟ್​ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್​ ಈ ಎರಡೂ ಕೆಲಸವನ್ನು ಏಕಕಾಲಕ್ಕೆ ಮಾಡುತ್ತಿದ್ದಾರೆ. ಲಾಕ್​ಡೌನ್​ ಅವಧಿಯಲ್ಲಿ ತಮ್ಮೂರಾದ ಕಾಸರಗೋಡಿಗೆ ತೆರಳಿರುವ ಅವರು, ದಿನಚರಿ ಬದಲಿಸಿಕೊಂಡಿದ್ದಾರೆ. ಆ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ ಜತೆ ಮಾತನಾಡಿದ್ದಾರೆ. 

 ಲಾಕ್​ಡೌನ್​ ಸ್ಪೆಷಲ್​ ಏನು?

ನಾನು ಕಾಸರಗೋಡಲ್ಲಿದ್ದೇನೆ. ಗೆಳೆಯರ ಜತೆ ಸೇರಿ ಸ್ಕ್ರಿಪ್ಟ್​ ಮಾಡುತ್ತಿದ್ದೇನೆ. ಮಲ್ಲಿಗೆ ತೋಟ ಇದೆ ಅದರಲ್ಲಿ ಕೆಲಸ ಮಾಡುತ್ತಿದ್ದೇನೆ. ತರಕಾರಿ ಕೂಡ ಬೆಳೆಯುತ್ತಿದ್ದೇನೆ. ಚಿಕ್ಕವನಿದ್ದಾಗ ಕೃಷಿ ಮಾಡುತ್ತಿದೆ. ಹೀಗಾಗಿ, ಅದನ್ನು ಮರೆತಿಲ್ಲ. ಬಿಡುವ ಸಿಕ್ಕಾಗ ಸಿನಿಮಾ ನೋಡುತ್ತಿದ್ದೇನೆ. ಕೆಲವು ರಿಸರ್ಚ್​ ಮಾಡುತ್ತಾ ಇದೀನಿ.

 ಯಾವೆಲ್ಲಾ ಸಿನಿಮಾಗಳಲ್ಲಿ ಬ್ಯುಸಿ?

ದಿಯಾ ಸಿನಿಮಾ ತೆರೆಕಂಡ ನಂತರ ಸಾಕಷ್ಟು ಆಫರ್​ಗಳು ಬಂದವು. ಹೀಗಾಗಿ, ದಿಯಾ ಆದಮೇಲೆ ನಿರಂತರವಾಗಿ ಶೂಟ್​ನಲ್ಲಿ ಬ್ಯುಸಿಯಾದೆ. ಈಗ ಮನೆಯವರ ಜತೆ ಸಮಯ ಕಳೆಯೋಕೆ ಟೈಮ್​ ಸಿಕ್ಕಿದೆ. ಈ ಸಂದರ್ಭದಲ್ಲಿ ನಮ್ಮನ್ನು ನಾವು ಅವಲೋಕನ ಮಾಡಿಕೊಳ್ಳಬಹುದು. ಆಗ, ನಾವೆಲ್ಲಿ ತಪ್ಪು ಮಾಡುತ್ತಿದ್ದೇವೆ ಎಂಬುದು ಗೊತ್ತಾಗುತ್ತದೆ.

ನಾನು ಸ್ಕ್ರಿಪ್ಟ್​ ಕೆಲಸ ಮಾಡಿದ ಒಂದು ಪ್ರಾಜೆಕ್ಟ್​ ಶೂಟ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ನಾನು ಮತ್ತು ಖುಷಿ ನಟಿಸುತ್ತಿದ್ದೇವೆ. ಇದೊಂದು ಲವ್​ ಸ್ಟೋರಿ. ದಿಯಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ದರ್ಶನ್​ ಅಪೂರ್ವ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಜೂನ್​ನಲ್ಲಿ ಸಿನಿಮಾ ಶೂಟಿಂಗ್​ ಪ್ಲ್ಯಾನ್​ ಮಾಡಿಕೊಂಡಿದ್ದೆವು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್​ ಮುಂದೆ ಹೋಗಿದೆ.

ಫ್ರೆಂಡ್ಸ್​ ಜತೆ ಸೇರಿ ಹಾರರ್​ ಸಿನಿಮಾ ಮಾಡ್ತಾ ಇದೀನಿ. ಇದರ ಕೆಲಸ ಕೂಡ ಶುರುವಾಗಬೇಕಿದೆ.  ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’ ಚಿತ್ರದ​ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ನಡೆಯುತ್ತಿದೆ.

 ಈ ಪರಿಸ್ಥಿತಿ ಬಗ್ಗೆ ಏನು ಹೇಳ್ತೀರಾ?

ನಿಜಕ್ಕೂ ಇದು ಕಷ್ಟದ ಸಮಯ. ಹೀಗಾಗಿ, ಎಲ್ಲರೂ ಮಾಸ್ಕ್​ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಇದರ ಜತೆಗೆ, ಸರ್ಕಾರ ಏನು ಮಾಡುತ್ತಿದೆಯೋ ಅದೇ ರೀತಿಯಲ್ಲಿ ನಾವು ಕೂಡ ಮಾಡಬೇಕು. ಈ ಸಂದರ್ಭದಲ್ಲಿ ಮನೆಯಲ್ಲೇ ಇರಬೇಕು. ಆದರೆ, ಕೆಲವರು ಅನಗತ್ಯ ತಿರುಗಾಡುತ್ತಿದ್ದಾರೆ. ಆ ರೀತಿ ಮಾಡಬಾರದು. ಪ್ರತೀ ಊರು ಹಾಗೂ ವಾರ್ಡ್​ನ ಮುಖ್ಯಸ್ಥರು ಇದರ ಮೇಲ್ವಿಚಾರಣೆ ಮಾಡಬೇಕು. ಊರಲ್ಲಿ ಒಂದು ಮನೆಗೆ ಕೊರೊನಾ ಬಂದಿದೆ ಎಂದರೆ, ಅವರಿಗೆ ಎಲ್ಲರೂ ಅಗತ್ಯ ಇರುವ ಸಹಾಯ ಮಾಡಬೇಕು. ಆಗ ಅವರಿಗೆ ಹೊರ ಬರುವ ಅವಶ್ಯಕತೆ ಇರುವುದಿಲ್ಲ.

 ಫಿಟ್​ ಆಗಿರೋಕೆ ಏನು ಮಾಡ್ತಾ ಇದೀರಾ?

ಬೆಂಗಳೂರಿನಲ್ಲಿದ್ದಾಗ ಜಿಮ್​ ಮಾಡುತ್ತಿದ್ದೆ. ಆದರೆ, ಇಲ್ಲಿ ಅದು ಸಾಧ್ಯವಿಲ್ಲ. ಹೀಗಾಗಿ, ಯೋಗಾಸನ ಮಾಡ್ತೀನಿ. ಮನೆಯವರೆಲ್ಲಿ ಹಿರಿಯರಿದ್ದಾರೆ. ಹೀಗಾಗಿ, ವಾಕಿಂಗ್​ಗೆ ಬ್ರೇಕ್​ ಹಾಕಿದ್ದೆನೆ. ​ಸಣ್ಣ-ಪುಟ್ಟ ವರ್ಕೌಟ್ ಮಾಡೋಕೆ ಏನು ಬೇಕೋ ಅದೆಲ್ಲವೂ ಇದೆ. ಹೀಗಾಗಿ, ಸಣ್ಣಪುಟ್ಟ ವರ್ಕೌಟ್​ ಮಾಡುತ್ತಿದ್ದೇನೆ.

ಇದನ್ನೂ ಓದಿ:  Adhvithi Shetty: ಮಾನಸಿಕ ಆರೋಗ್ಯ​ ಕಾಪಾಡಿಕೊಳ್ಳೋಕೆ ನಟಿ ಅದ್ವಿತಿ ಶೆಟ್ಟಿ ಕೊಟ್ರು ಟಿಪ್ಸ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?