AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಈ ಚಿತ್ರಕ್ಕೆ ಸ್ಫೂರ್ತಿ ಆಯ್ತಾ ಯಶ್ ಲುಕ್

ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ‘ಪುಷ್ಪ’ ಹಾಗೂ ‘ಕೆಜಿಎಫ್’ ಚಿತ್ರದ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ‘ಕೆಜಿಎಫ್’ ಚಿತ್ರಕ್ಕಿಂತ ಪುಷ್ಪ ಉತ್ತಮವಾಗಿ ಮೂಡಿ ಬರುತ್ತದೆ’ ಎಂದು ತೆಲುಗು ಮಂದಿ ಕೊಟ್ಟ ಹೇಳಿಕೆಯೇ ಇದಕ್ಕೆಲ್ಲ ಕಾರಣ. ಈಗ ‘ಕೆಜಿಎಫ್ 2’ ಚಿತ್ರ ಹಾಗೂ ‘ಪುಷ್ಪ 2’ ಚಿತ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ತೆಲುಗಿನ ಈ ಚಿತ್ರಕ್ಕೆ ಸ್ಫೂರ್ತಿ ಆಯ್ತಾ ಯಶ್ ಲುಕ್
ಯಶ್
ರಾಜೇಶ್ ದುಗ್ಗುಮನೆ
|

Updated on:Nov 13, 2024 | 2:54 PM

Share

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇನ್ನು ಕೆಲವೇ ದಿನಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ನವೆಂಬರ್ 17ರಂದು ರಿಲೀಸ್ ಆಗಲಿದೆ. ದೂರದ ಪಾಟ್ನಾದಲ್ಲಿ ತಂಡ ಈವೆಂಟ್ ಆಯೋಜನೆ ಮಾಡಿದೆ. ಹೀಗಿರುವಾಗಲೇ ಅನೇಕರು ‘ಪುಷ್ಪ 2’ ಚಿತ್ರದ ಪೋಸ್ಟರ್​ಗಳನ್ನು ‘ಕೆಜಿಎಫ್’ ಚಿತ್ರದ ಪೋಸ್ಟರ್​ಗಳಿಗೆ ಹೋಲಿಕೆ ಮಾಡಿದ್ದಾರೆ. ಇದನ್ನು ಅನೇಕರು ಒಪ್ಪಿದ್ದಾರೆ.

ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ‘ಪುಷ್ಪ’ ಹಾಗೂ ‘ಕೆಜಿಎಫ್’ ಚಿತ್ರದ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ‘ಕೆಜಿಎಫ್’ ಚಿತ್ರಕ್ಕಿಂತ ಪುಷ್ಪ ಉತ್ತಮವಾಗಿ ಮೂಡಿ ಬರುತ್ತದೆ’ ಎಂದು ತೆಲುಗು ಮಂದಿ ಕೊಟ್ಟ ಹೇಳಿಕೆಯೇ ಇದಕ್ಕೆಲ್ಲ ಕಾರಣ. ಈಗ ‘ಕೆಜಿಎಫ್ 2’ ಚಿತ್ರ ಹಾಗೂ ‘ಪುಷ್ಪ 2’ ಚಿತ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

‘ಕೆಜಿಎಫ್ 2’ ಚಿತ್ರ ಈಗಾಗಲೇ ರಿಲೀಸ್ ಆಗಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಡಿಸೆಂಬರ್ 5ರಂದು ‘ಪುಷ್ಪ 2’ ಚಿತ್ರ ರಿಲೀಸ್ ಆಗುತ್ತಿದೆ. ಮೊದಲ ದಿನ ಈ ಚಿತ್ರ ಭರ್ಜರಿ ಗಳಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಕೆಲವರು ಪೋಸ್ಟರ್ ಮಧ್ಯೆ ಹೋಲಿಕೆ ಮಾಡಿದ್ದಾರೆ.

ರಾಕಿ ಗನ್ ಹಿಡಿದು ಬರೋದು, ರಾಕಿ ಸಿಗರೇಟು ಹಚ್ಚಿಕೊಳ್ಳುದು ಸೇರಿ ಅನೇಕ ಪೋಸ್ಟರ್​ಗಳ ಜೊತೆ ಪುಷ್ಪ ಪೋಸ್ಟರ್​ಗಳನ್ನು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಕೆಲವು ಸಾಮ್ಯತೆಗಳು ಕಾಣಿಸಿವೆ. ಹಾಗಂತ ಇದನ್ನು ಮಾಡುತ್ತಿರುವವರು ಕನ್ನಡದವರಲ್ಲ. ಪಕ್ಕಾ ತೆಲುಗು ಮಂದಿಯೇ ಈ ಪ್ರಶ್ನೆ ಕೇಳುತ್ತಿದ್ದಾರೆ ಅನ್ನೋದು ವಿಶೇಷ. ಈ ಬಗ್ಗೆ ಸುಕುಮಾರ್ ಅವರು ಯಾವ ರೀತಿಯ ಸ್ಪಷ್ಟನೆ ನೀಡುತ್ತಾರೆ ಎಂಬುದನ್ನು ನೋಡಬೇಕಿದೆ.

ಇದನ್ನೂ ಓದಿ: ‘ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು’; ಯಶ್ ಸಹಾಯ ನೆನೆದು ಭಾವುಕರಾದ ‘ಕೆಜಿಎಫ್’ ಚಾಚಾ

‘ಕೆಜಿಎಫ್’ ಹಾಗೂ ‘ಪುಷ್ಪ’ ಚಿತ್ರದ ಒನ್​ಲೈನ್​ ಸ್ಟೋರಿಯ ಮಧ್ಯೆ ಹೋಲಿಕೆ ಇದೆ. ಕಷ್ಟದಿಂದ ಬರೋ ರಾಕಿ ಭಾಯ್ ನಂತರ ಸಾಮ್ರಾಜ್ಯ ಕಟ್ಟುತ್ತಾರೆ. ಎರಡನೇ ಭಾಗದಲ್ಲಿ ಈ ಸಾಮ್ರಾಜ್ಯವನ್ನು ಆಳುತ್ತಾನೆ. ‘ಪುಷ್ಪ’ ಹಾಗೂ ‘ಪುಷ್ಪ 2’ ಕಥೆ ಕೂಡ ಇದೆ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:58 pm, Tue, 12 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ