AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಈ ಚಿತ್ರಕ್ಕೆ ಸ್ಫೂರ್ತಿ ಆಯ್ತಾ ಯಶ್ ಲುಕ್

ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ‘ಪುಷ್ಪ’ ಹಾಗೂ ‘ಕೆಜಿಎಫ್’ ಚಿತ್ರದ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ‘ಕೆಜಿಎಫ್’ ಚಿತ್ರಕ್ಕಿಂತ ಪುಷ್ಪ ಉತ್ತಮವಾಗಿ ಮೂಡಿ ಬರುತ್ತದೆ’ ಎಂದು ತೆಲುಗು ಮಂದಿ ಕೊಟ್ಟ ಹೇಳಿಕೆಯೇ ಇದಕ್ಕೆಲ್ಲ ಕಾರಣ. ಈಗ ‘ಕೆಜಿಎಫ್ 2’ ಚಿತ್ರ ಹಾಗೂ ‘ಪುಷ್ಪ 2’ ಚಿತ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ತೆಲುಗಿನ ಈ ಚಿತ್ರಕ್ಕೆ ಸ್ಫೂರ್ತಿ ಆಯ್ತಾ ಯಶ್ ಲುಕ್
ಯಶ್
ರಾಜೇಶ್ ದುಗ್ಗುಮನೆ
|

Updated on:Nov 13, 2024 | 2:54 PM

Share

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇನ್ನು ಕೆಲವೇ ದಿನಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ನವೆಂಬರ್ 17ರಂದು ರಿಲೀಸ್ ಆಗಲಿದೆ. ದೂರದ ಪಾಟ್ನಾದಲ್ಲಿ ತಂಡ ಈವೆಂಟ್ ಆಯೋಜನೆ ಮಾಡಿದೆ. ಹೀಗಿರುವಾಗಲೇ ಅನೇಕರು ‘ಪುಷ್ಪ 2’ ಚಿತ್ರದ ಪೋಸ್ಟರ್​ಗಳನ್ನು ‘ಕೆಜಿಎಫ್’ ಚಿತ್ರದ ಪೋಸ್ಟರ್​ಗಳಿಗೆ ಹೋಲಿಕೆ ಮಾಡಿದ್ದಾರೆ. ಇದನ್ನು ಅನೇಕರು ಒಪ್ಪಿದ್ದಾರೆ.

ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ‘ಪುಷ್ಪ’ ಹಾಗೂ ‘ಕೆಜಿಎಫ್’ ಚಿತ್ರದ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ‘ಕೆಜಿಎಫ್’ ಚಿತ್ರಕ್ಕಿಂತ ಪುಷ್ಪ ಉತ್ತಮವಾಗಿ ಮೂಡಿ ಬರುತ್ತದೆ’ ಎಂದು ತೆಲುಗು ಮಂದಿ ಕೊಟ್ಟ ಹೇಳಿಕೆಯೇ ಇದಕ್ಕೆಲ್ಲ ಕಾರಣ. ಈಗ ‘ಕೆಜಿಎಫ್ 2’ ಚಿತ್ರ ಹಾಗೂ ‘ಪುಷ್ಪ 2’ ಚಿತ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

‘ಕೆಜಿಎಫ್ 2’ ಚಿತ್ರ ಈಗಾಗಲೇ ರಿಲೀಸ್ ಆಗಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಡಿಸೆಂಬರ್ 5ರಂದು ‘ಪುಷ್ಪ 2’ ಚಿತ್ರ ರಿಲೀಸ್ ಆಗುತ್ತಿದೆ. ಮೊದಲ ದಿನ ಈ ಚಿತ್ರ ಭರ್ಜರಿ ಗಳಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಕೆಲವರು ಪೋಸ್ಟರ್ ಮಧ್ಯೆ ಹೋಲಿಕೆ ಮಾಡಿದ್ದಾರೆ.

ರಾಕಿ ಗನ್ ಹಿಡಿದು ಬರೋದು, ರಾಕಿ ಸಿಗರೇಟು ಹಚ್ಚಿಕೊಳ್ಳುದು ಸೇರಿ ಅನೇಕ ಪೋಸ್ಟರ್​ಗಳ ಜೊತೆ ಪುಷ್ಪ ಪೋಸ್ಟರ್​ಗಳನ್ನು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಕೆಲವು ಸಾಮ್ಯತೆಗಳು ಕಾಣಿಸಿವೆ. ಹಾಗಂತ ಇದನ್ನು ಮಾಡುತ್ತಿರುವವರು ಕನ್ನಡದವರಲ್ಲ. ಪಕ್ಕಾ ತೆಲುಗು ಮಂದಿಯೇ ಈ ಪ್ರಶ್ನೆ ಕೇಳುತ್ತಿದ್ದಾರೆ ಅನ್ನೋದು ವಿಶೇಷ. ಈ ಬಗ್ಗೆ ಸುಕುಮಾರ್ ಅವರು ಯಾವ ರೀತಿಯ ಸ್ಪಷ್ಟನೆ ನೀಡುತ್ತಾರೆ ಎಂಬುದನ್ನು ನೋಡಬೇಕಿದೆ.

ಇದನ್ನೂ ಓದಿ: ‘ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು’; ಯಶ್ ಸಹಾಯ ನೆನೆದು ಭಾವುಕರಾದ ‘ಕೆಜಿಎಫ್’ ಚಾಚಾ

‘ಕೆಜಿಎಫ್’ ಹಾಗೂ ‘ಪುಷ್ಪ’ ಚಿತ್ರದ ಒನ್​ಲೈನ್​ ಸ್ಟೋರಿಯ ಮಧ್ಯೆ ಹೋಲಿಕೆ ಇದೆ. ಕಷ್ಟದಿಂದ ಬರೋ ರಾಕಿ ಭಾಯ್ ನಂತರ ಸಾಮ್ರಾಜ್ಯ ಕಟ್ಟುತ್ತಾರೆ. ಎರಡನೇ ಭಾಗದಲ್ಲಿ ಈ ಸಾಮ್ರಾಜ್ಯವನ್ನು ಆಳುತ್ತಾನೆ. ‘ಪುಷ್ಪ’ ಹಾಗೂ ‘ಪುಷ್ಪ 2’ ಕಥೆ ಕೂಡ ಇದೆ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:58 pm, Tue, 12 November 24

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ