AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರಕ್ಕಾಗಿ ಈಗಲೇ ಐಟಂ ಸಾಂಗ್​ ಸಿದ್ಧಪಡಿಸಲು ಮುಂದಾದ ನಿರ್ದೇಶಕ; ಈ ಬಾರಿ ಸಮಂತಾಗಿಲ್ಲ ಚಾನ್ಸ್​

‘ಪುಷ್ಪ’ ಸಿನಿಮಾದ ವಿಶೇಷ ಹಾಡು ಮೊದಲೇ ಶೂಟ್​ ಆಗಿದ್ದರೆ ಮತ್ತಷ್ಟು ಹೈಪ್​ ಪಡೆದುಕೊಳ್ಳುತ್ತಿತ್ತು ಎಂಬುದು ಅವರ ಭಾವನೆ. ಈ ಕಾರಣಕ್ಕೆ, ‘ಪುಷ್ಪ 2’ ಸಿನಿಮಾ ಕೆಲಸದ ಆರಂಭದಲ್ಲೇ ಈ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಈಗಲೇ ಐಟಂ ಸಾಂಗ್​ ಸಿದ್ಧಪಡಿಸಲು ಮುಂದಾದ ನಿರ್ದೇಶಕ; ಈ ಬಾರಿ ಸಮಂತಾಗಿಲ್ಲ ಚಾನ್ಸ್​
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 09, 2022 | 2:57 PM

Share

‘ಪುಷ್ಪ’ ಚಿತ್ರ (Pushpa Movie)  ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಸಿನಿಮಾಗೆ ಆರಂಭದಲ್ಲಿ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಇಷ್ಟೊಂದು ಗಳಿಕೆ ಮಾಡಿದ್ದು ಸ್ವತಃ ಚಿತ್ರತಂಡಕ್ಕೆ ಅಚ್ಚರಿ ಮೂಡಿಸಿದೆ. ‘ಪುಷ್ಪ’ದಲ್ಲಿ ಬರುವ ಸಮಂತಾ ಐಟಂ ಸಾಂಗ್​ ಕೂಡ ಚಿತ್ರದ ಮೈಲೇಜ್​ ಹೆಚ್ಚಿಸಿದೆ ಎಂಬುದಕ್ಕೆ ಯಾವುದೇ ಅನುಮಾನ ಉಳಿದಿಲ್ಲ. ಸಿನಿಮಾ ಗೆಲುವಿನಿಂದ ನಿರ್ದೇಶಕ ಸುಕುಮಾರ್​ಗೆ ಹೊಸ ಹುರುಪು ಬಂದಿದೆ. ಅವರು ಪಾರ್ಟ್​ 2 ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಬಾರಿ ಅವರು ಐಟಂ ಸಾಂಗ್​ ಬಗ್ಗೆ ವಿಶೇಷ ಆಸಕ್ತಿ ತೋರಿದ್ದಾರೆ. ಆರಂಭದಿಂದಲೇ ಈ ಬಗ್ಗೆ ಟಾಕ್​ ಶುರುವಾಗುವಂತೆ ನೋಡಿಕೊಳ್ಳುವ ಆಲೋಚನೆಯಲ್ಲಿ ಅವರಿದ್ದಾರೆ.

ಸುಕುಮಾರ್​ ತಮ್ಮ ಪ್ರತಿ ಸಿನಿಮಾದಲ್ಲಿ ಐಟಂ ಸಾಂಗ್​ಗೆ ಆದ್ಯತೆ ನೀಡುತ್ತಾರೆ. ಸ್ಟಾರ್​ ನಟಿಯರನ್ನು ಕರೆಸಿ ಹೆಜ್ಜೆ ಹಾಕಿಸುತ್ತಾರೆ. ‘ಹೂ ಅಂತೀಯಾ ಮಾವ.. ಉಹೂ ಅಂತೀಯಾ..’ ಹಾಡಿನಲ್ಲಿ ನಟಿಸೋಕೆ ಆರಂಭದಲ್ಲಿ ಸನ್ನಿ ಲಿಯೋನ್​, ನೋರಾ ಫತೇಹಿ ಮೊದಲಾದವರಿಗೆ ಆಫರ್​ ನೀಡಲಾಗಿತ್ತು. ಆದರೆ, ಡೇಟ್ಸ್​ ಹೊಂದಾಣಿಕೆ ಹಾಗೂ ಮತ್ತಿತರ ಕಾರಣಕ್ಕೆ ಅವರ್ಯಾರೂ ಈ ಹಾಡಿನಲ್ಲಿ ಹೆಜ್ಜೆ ಹಾಕೋಕೆ ಒಪ್ಪಿರಲಿಲ್ಲ. ಹೀಗಾಗಿ, ಹಾಡಿನ ಶೂಟಿಂಗ್​ ವಿಳಂಬವಾಗುತ್ತಲೇ ಇತ್ತು. ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಇರುವಾಗ ಸಮಂತಾ ಸಿನಿಮಾದ ಸೆಟ್​ ಸೇರಿಕೊಂಡರು. ತರಾತುರಿಯಲ್ಲಿ ಹಾಡಿನ ಶೂಟಿಂಗ್​ ಮಾಡಲಾಯಿತು. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಇರುವಾಗ ಲಿರಿಕಲ್​ ಸಾಂಗ್​ ರಿಲೀಸ್​ ಆಗಿತ್ತು. ಆದಾಗ್ಯೂ ಹಾಡು ಒಳ್ಳೆಯ ಸದ್ದು ಮಾಡಿದೆ. ಈ ಬಾರಿ ಆ ರೀತಿ ಗಡಿಬಿಡಿ ಆಗದಂತೆ ಎಚ್ಚರವಹಿಸಲು ಸುಕುಮಾರ್ ನಿರ್ಧರಿಸಿದ್ದಾರೆ.

‘ಪುಷ್ಪ’ ಸಿನಿಮಾದ ವಿಶೇಷ ಹಾಡು ಮೊದಲೇ ಶೂಟ್​ ಆಗಿದ್ದರೆ ಮತ್ತಷ್ಟು ಹೈಪ್​ ಪಡೆದುಕೊಳ್ಳುತ್ತಿತ್ತು ಎಂಬುದು ಅವರ ಭಾವನೆ. ಈ ಕಾರಣಕ್ಕೆ, ‘ಪುಷ್ಪ 2’ ಸಿನಿಮಾ ಕೆಲಸದ ಆರಂಭದಲ್ಲೇ ಈ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆಯೂ ಲೆಕ್ಕಾಚಾರ ಹಾಕುತ್ತಿದ್ದಾರೆ.

ಈ ಬಾರಿ ಮತ್ತೆ ಸಮಂತಾ ಅವರಿಗೆ ಅವಕಾಶ ನೀಡೋದು ಅನುಮಾನ ಎನ್ನಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲೂ ಅವರು ಬಂದರೆ ಮೊದಲಿನಷ್ಟೇ ಕ್ರೇಜ್​ ತೋರಿಸುತ್ತಾರೆ ಎಂಬುದು ಅನುಮಾನ. ಹೀಗಾಗಿ, ಹೊಸ ನಟಿಯರಿಗೆ ಚಾನ್ಸ್​ ನೀಡೋಕೆ ಸುಕುಮಾರ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಎರಡನೇ ಪಾರ್ಟ್​ನ ಕೆಲಸಗಳು ಯಾವಾಗ ಆರಂಭವಾಗುತ್ತದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: Samantha: ಸಮಂತಾ ಪವರ್​ಫುಲ್​ ವರ್ಕೌಟ್; ವೈರಲ್​ ಆಗುತ್ತಿದೆ ಹೊಸ ವಿಡಿಯೋ

ಸಮಂತಾ ದೂರಾದ ಬಳಿಕ ನಾಗ ಚೈತನ್ಯ ಜತೆ ಖಾಸಗಿ ವಿಮಾನದಲ್ಲಿ ಕಾಣಿಸಿಕೊಂಡ ಈ ಸುಂದರಿ ಯಾರು?

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​