AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ ಅಂಬರೀಷ್​; ಬರ್ತ್​ಡೇ ಪಾರ್ಟಿಯಲ್ಲಿ ಸ್ಟಾರ್​ ಕಲಾವಿದರ ಸಂಗಮ

ಈ ವರ್ಷ ಸುಮಲತಾ ಅಂಬರೀಷ್​ ಅವರಿಗೆ ಹುಟ್ಟುಹಬ್ಬ ಸಖತ್​ ಸ್ಪೆಷಲ್​. ಅದಕ್ಕೆ ಹಲವು ಕಾರಣಗಳು ಇವೆ. ಶನಿವಾರ (ಆಗಸ್ಟ್​ 26) ರಾತ್ರಿಯೇ ಖಾಸಗಿ ಹೋಟೆಲ್​ನಲ್ಲಿ ಪಾರ್ಟಿ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಎಲ್ಲರನ್ನೂ ಅಂಬರೀಷ್​ ಕುಟುಂಬದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ ಅಂಬರೀಷ್​; ಬರ್ತ್​ಡೇ ಪಾರ್ಟಿಯಲ್ಲಿ ಸ್ಟಾರ್​ ಕಲಾವಿದರ ಸಂಗಮ
ಸುಮಲತಾ ಅಂಬರೀಷ್​ ಬರ್ತ್​ಡೇ ಪಾರ್ಟಿ
ಮದನ್​ ಕುಮಾರ್​
|

Updated on:Aug 27, 2023 | 10:03 AM

Share

ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಷ್​ (Sumalatha Ambareesh) ಅವರು ಇಂದು (ಆಗಸ್ಟ್​ 27) ಹುಟ್ಟುಹಬ್ಬದ ಖುಷಿಯಲ್ಲಿದ್ದಾರೆ. ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಅವರು, ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಎರಡೂ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್​ ಅವರಿಗೆ ಸ್ನೇಹಿತರಿದ್ದಾರೆ. ಎಲ್ಲರ ಸಮ್ಮುಖದಲ್ಲಿ ಅದ್ದೂರಿಯಾಗಿ ಪಾರ್ಟಿ ಮಾಡಲಾಗಿದೆ. ಬೆಂಗಳೂರಿನ ಸ್ಟಾರ್​ ಹೋಟೆಲ್​ನಲ್ಲಿ ಪಾರ್ಟಿ ನಡೆದಿದೆ. ಕನ್ನಡ ಚಿತ್ರರಂಗದ (Sandalwood) ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಹಲವು ಸ್ಟಾರ್​ ನಟ-ನಟಿಯರ ಸಂಗಮ ಈ ಔತಣ ಕೂಟದಲ್ಲಿ ಆಗಿದೆ. ಎಲ್ಲರೂ ಸುಮಲತಾ ಅಂಬರೀಷ್​ಗೆ ಹುಟ್ಟುಹಬ್ಬದ (Sumalatha Ambareesh Birthday) ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬರ್ತ್​ಡೇ ವಿಶ್​ ಮಾಡಲಾಗುತ್ತಿದೆ.

ಈ ವರ್ಷ ಸುಮಲತಾ ಅಂಬರೀಷ್​ ಅವರಿಗೆ ಹುಟ್ಟುಹಬ್ಬ ಸಖತ್​ ಸ್ಪೆಷಲ್​. ಅದಕ್ಕೆ ಹಲವು ಕಾರಣಗಳು ಇವೆ. ಶನಿವಾರ (ಆಗಸ್ಟ್​ 26) ರಾತ್ರಿಯೇ ಖಾಸಗಿ ಹೋಟೆಲ್​ನಲ್ಲಿ ಪಾರ್ಟಿ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಎಲ್ಲರನ್ನೂ ಅಂಬರೀಷ್​ ಕುಟುಂಬದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದು 60ನೇ ವರ್ಷದ ಬರ್ತ್​ಡೇ ಎಂಬ ಖುಷಿ ಒಂದು ಕಡೆ. ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಮದುವೆ ಬಳಿಕ ಸುಮಲತಾ ಅಂಬರೀಷ್​ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಎಂಬ ಖುಷಿ ಇನ್ನೊಂದು ಕಡೆ. ಈ ಸಂಭ್ರಮದಲ್ಲಿ ಜೋರಾಗಿ ಸೆಲೆಬ್ರೇಟ್​ ಮಾಡಲಾಗಿದೆ.

ಇದನ್ನೂ ಓದಿ: ಪತಿ ಅಭಿಷೇಕ್, ಅತ್ತೆ ಸುಮಲತಾ ಜೊತೆ ಹಬ್ಬ ಆಚರಿಸಿದ ಅವಿವಾ; ಇಲ್ಲಿವೆ ಫೋಟೋಸ್

ಬಹುಭಾಷಾ ನಟಿಯಾಗಿ ಗುರುತಿಸಿಕೊಂಡವರು ಸುಮಲತಾ ಅಂಬರೀಷ್​. ಕನ್ನಡ , ಮಲಯಾಲಂ, ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. 1978ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಎಲ್ಲ ಭಾಷೆಯ ಸ್ಟಾರ್​ ಕಲಾವಿದರ ಜೊತೆ ತೆರೆ ಹಂಚಿಕೊಂಡಿದ್ದಾರೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಮನೆಮಾತಾಗಿದ್ದಾರೆ. ಈಗ ಸಿನಿಮಾಗಿಂತಲೂ ಹೆಚ್ಚಾಗಿ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರ ಪುತ್ರ ಅಭಿಷೇಕ್​ ಅಂಬರೀಷ್​ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ‘ಜೊತೆಗಿರದ ಜೀವ ಎಂದೆಂದಿಗೂ ಜೀವಂತ’; ಅಂಬರೀಷ್​​ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್​

ಅಂಬರೀಷ್​ ಅವರು ಸಿನಿಮಾದಲ್ಲಿ ಸಾಧನೆ ಮಾಡಿದ ಬಳಿಕ ರಾಜಕೀಯಕ್ಕೆ ಕಾಲಿಟ್ಟು, ಆ ಕ್ಷೇತ್ರದಲ್ಲೂ ಯಶಸ್ಸು ಕಂಡಿದ್ದರು. ಅಂಬರೀಷ್​ ನಂತರ ಸುಮಲತಾ ಕೂಡ ಅದೇ ಹಾದಿಯಲ್ಲಿ ಸಾಗಿದರು. 2019ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು ಸಂಸದೆ ಆಗುವ ಮೂಲಕ ಅವರು ಅಪಾರ ಜನಬೆಂಬಲ ಪಡೆದರು. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:21 am, Sun, 27 August 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು