AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆಗಿರದ ಜೀವ ಎಂದೆಂದಿಗೂ ಜೀವಂತ’; ಅಂಬರೀಷ್​​ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್​

Sumalatha Ambareesh: ಅಂಬರೀಷ್​ ಅವರು ಮಾಡಿರುವ ಪಾತ್ರ ಹಾಕಿಕೊಟ್ಟ ಮಾರ್ಗ ಸದಾ ಜೀವಂತ. ಈ ವಿಶೇಷ ದಿನದಂದು ಅಂಬಿಯನ್ನು ಸುಮಲತಾ ನೆನಪಿಸಿಕೊಂಡಿದ್ದಾರೆ.

‘ಜೊತೆಗಿರದ ಜೀವ ಎಂದೆಂದಿಗೂ ಜೀವಂತ’; ಅಂಬರೀಷ್​​ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್​
ಸುಮಲತಾ-ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on:May 29, 2023 | 10:16 AM

Share

ಇಂದು (ಮೇ 29) ಅಂಬರೀಷ್ ಅವರ ಜನ್ಮದಿನ (Ambareesh Birthday). ಈ ವಿಶೇಷ ದಿನದಂದು ಕುಟುಂಬದವರು, ಸೆಲೆಬ್ರಿಟಿಗಳು, ಫ್ಯಾನ್ಸ್​ ಅಂಬಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಂಬರೀಷ್ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗುತ್ತಿದೆ. ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಅಂಬರೀಷ್ ಸ್ಮಾರಕ ಉದ್ಘಾಟನೆ ಆಗಿರುವುದರಿಂದ ಈ ವರ್ಷ ಅವರ ಜನ್ಮದಿನ ಮತ್ತಷ್ಟು ವಿಶೇಷ ಎನಿಸಿಕೊಂಡಿದೆ. ಅವರ ಬರ್ತ್​ಡೇ ಪ್ರಯಕ್ತ ಸುಮಲತಾ ಅಂಬರೀಷ್ (Sumalatha Ambareesh) ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.

ಸುಮಲತಾ ಅಂಬರೀಷ್ ಹಾಗೂ ಅಂಬರೀಷ್ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಇಬ್ಬರೂ ಹಾಯಾಗಿ ಸಂಸಾರ ನಡೆಸಿದರು. ಆದರೆ, ಅನಾರೋಗ್ಯದಿಂದ ಅಂಬರೀಷ್ ಮೃತಪಟ್ಟರು. ಅವರು ಇಲ್ಲ ಎಂಬ ನೋವು ಎಂದಿಗೂ ಮರೆಯಾಗುವಂಥದ್ದಲ್ಲ. ಆದರೆ, ಅವರು ಮಾಡಿರುವ ಪಾತ್ರ ಹಾಕಿಕೊಟ್ಟ ಮಾರ್ಗ ಸದಾ ಜೀವಂತ. ಈ ವಿಶೇಷ ದಿನದಂದು ಅಂಬಿಯನ್ನು ಸುಮಲತಾ ನೆನಪಿಸಿಕೊಂಡಿದ್ದಾರೆ.

‘ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ದೂರಿಯಾಗಿ ಆಚರಿಸುತ್ತಿದ್ದೆವು’ ಎಂದು ಪತ್ರ ಆರಂಭಿಸಿದ್ದಾರೆ ಸುಮಲತಾ.

ಇದನ್ನೂ ಓದಿ: ಅಂಬರೀಷ್ ಜನ್ಮದಿನ: ರೆಬೆಲ್​ ಸ್ಟಾರ್​ ಬಗ್ಗೆ ಇಷ್ಟವಾಗುವ ಈ ಐದು ವಿಚಾರಗಳಿವು..

ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಹ್ಯಾಪಿ ಬರ್ತಡೇ ಮೈ ಅಂಬಿ. ಜೊತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Mon, 29 May 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ