AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವರ್ಗದಲ್ಲಿರೋ ಅಂಬರೀಷ್​ಗೆ ಜನ್ಮದಿನದ ಶುಭಾಶಯ’; ಪ್ರೀತಿಯಿಂದ ಕವಿತೆ ಬರೆದ ಸುಮಲತಾ

ಅಂಬರೀಷ್ ಅವರ ಬಾಲ್ಯದ ಫೋಟೋ, ಯಂಗ್ ಆಗಿದ್ದಾಗಿನ ಫೋಟೋ ಹಾಗೂ ವಯಸ್ಸಾದ ಮೇಲಿನ ಫೋಟೋಗಳನ್ನು ಸುಮಲತಾ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಪ್ರೀತಿಯಿಂದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕವನ ರೂಪದಲ್ಲಿ ಈ ಸಾಲುಗಳು ಇವೆ.

‘ಸ್ವರ್ಗದಲ್ಲಿರೋ ಅಂಬರೀಷ್​ಗೆ ಜನ್ಮದಿನದ ಶುಭಾಶಯ’; ಪ್ರೀತಿಯಿಂದ ಕವಿತೆ ಬರೆದ ಸುಮಲತಾ
ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on:May 29, 2024 | 11:10 AM

Share

ಸುಮಲತಾ (Sumalatha) ಅಂಬರೀಷ್ ಹಾಗೂ ಅಂಬರೀಷ್ ಅವರದ್ದು ಪ್ರೇಮ ವಿವಾಹ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ, ಈಗ ಅಂಬಿ ನಮ್ಮ ಜೊತೆ ಇಲ್ಲ. ಅವರಿಲ್ಲದೆ ಆರು ವರ್ಷ ಕಳೆಯುತ್ತಾ ಬಂದಿದೆ. ಈಗ ಅಂಬಿ ಜನ್ಮದಿನಕ್ಕೆ ಸುಮಲತಾ ಬರ್ತ್​​ಡೇ ವಿಶ್ ತಿಳಿಸಿದ್ದಾರೆ. ‘ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳು’ ಎಂದು ಸುಮಲತಾ ಹೇಳಿದ್ದಾರೆ.

ಅಂಬರೀಷ್ ಅವರ ಬಾಲ್ಯದ ಫೋಟೋ, ಯಂಗ್ ಆಗಿದ್ದಾಗಿನ ಫೋಟೋ ಹಾಗೂ ವಯಸ್ಸಾದ ಮೇಲಿನ ಫೋಟೋಗಳನ್ನು ಸುಮಲತಾ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಪ್ರೀತಿಯಿಂದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕವನ ರೂಪದಲ್ಲಿ ಈ ಸಾಲುಗಳು ಇವೆ.

‘ನಿಮ್ಮ ನೆನಪಾಗುತ್ತಿದೆ..

ಯಾವಾಗಲೂ ನಗು ತರುತ್ತದೆ..

ನಿನ್ನನ್ನು ಮಿಸ್ ಮಾಡಿಕೊಳ್ಳೋದು ಯಾವಾಗಲೂ ಉಳಿಯುವ ನೋವು..

ನೀವು ನಮ್ಮ ಜೀವನದ ಒಂದು ಭಾಗ

ಅದು ಪ್ರತಿ ದಿನ, ಪ್ರತಿ ಕ್ಷಣ ಮತ್ತು ಎಂದೆಂದಿಗೂ…

ನೀವು ಬದುಕನ್ನು ಮೀರಿದವರು

ನೀವೇ ಜೀವನ

ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳು

ಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ ಅವರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಡಾ.ಅಂಬರೀಷ್ ಫೌಂಡೇಶನ್ ಹಾಗೂ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಾಧಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಮಂಡ್ಯದ ರೈತ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?

ಸುಮಲತಾ ಮಾತು

ಅಂಬರೀಷ್ ಅವರ ಸಮಾಧಿಗೆ ತೆರಳಿ ಸುಮಲತಾ ಪೂಜೆ ಸಲ್ಲಿಸಿದರು. ‘ಅಂಬಿ ಅವರು ನಮ್ಮ ಮನಸ್ಸಲ್ಲಿ ಅಷ್ಟೇ ಅಲ್ಲ ಅಭಿಮಾನಿಗಳ ಮನಸ್ಸಲ್ಲಿ ಇದ್ದಾರೆ. ಆರು ವರ್ಷವಾದರೂ ಅಭಿಮಾನಿಗಳು ಈ ರೀತಿ ಸೆಲೆಬ್ರೇಷನ್ ಮಾಡುತ್ತಾರೆ. ಅವರು ಮಾಡಿದ ಒಳ್ಳೆ ಕೆಲಸಗಳಿಂದ ಜನ ಶಾಶ್ವತವಾಗಿ ಅವರನ್ನು ನೆನಪಿನಲ್ಲಿ ಉಳಿಸಿಕೊಂಡಿದ್ದಾರೆ. ಆ ಪ್ರೀತಿಯನ್ನೇ ನೋಡ್ಕೊಂಡು ನಾವು ತೃಪ್ತಿ ಪಡುತ್ತಿದ್ದೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:06 am, Wed, 29 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ