Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವರ್ಗದಲ್ಲಿರೋ ಅಂಬರೀಷ್​ಗೆ ಜನ್ಮದಿನದ ಶುಭಾಶಯ’; ಪ್ರೀತಿಯಿಂದ ಕವಿತೆ ಬರೆದ ಸುಮಲತಾ

ಅಂಬರೀಷ್ ಅವರ ಬಾಲ್ಯದ ಫೋಟೋ, ಯಂಗ್ ಆಗಿದ್ದಾಗಿನ ಫೋಟೋ ಹಾಗೂ ವಯಸ್ಸಾದ ಮೇಲಿನ ಫೋಟೋಗಳನ್ನು ಸುಮಲತಾ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಪ್ರೀತಿಯಿಂದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕವನ ರೂಪದಲ್ಲಿ ಈ ಸಾಲುಗಳು ಇವೆ.

‘ಸ್ವರ್ಗದಲ್ಲಿರೋ ಅಂಬರೀಷ್​ಗೆ ಜನ್ಮದಿನದ ಶುಭಾಶಯ’; ಪ್ರೀತಿಯಿಂದ ಕವಿತೆ ಬರೆದ ಸುಮಲತಾ
ಅಂಬರೀಷ್
Follow us
ರಾಜೇಶ್ ದುಗ್ಗುಮನೆ
|

Updated on:May 29, 2024 | 11:10 AM

ಸುಮಲತಾ (Sumalatha) ಅಂಬರೀಷ್ ಹಾಗೂ ಅಂಬರೀಷ್ ಅವರದ್ದು ಪ್ರೇಮ ವಿವಾಹ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ, ಈಗ ಅಂಬಿ ನಮ್ಮ ಜೊತೆ ಇಲ್ಲ. ಅವರಿಲ್ಲದೆ ಆರು ವರ್ಷ ಕಳೆಯುತ್ತಾ ಬಂದಿದೆ. ಈಗ ಅಂಬಿ ಜನ್ಮದಿನಕ್ಕೆ ಸುಮಲತಾ ಬರ್ತ್​​ಡೇ ವಿಶ್ ತಿಳಿಸಿದ್ದಾರೆ. ‘ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳು’ ಎಂದು ಸುಮಲತಾ ಹೇಳಿದ್ದಾರೆ.

ಅಂಬರೀಷ್ ಅವರ ಬಾಲ್ಯದ ಫೋಟೋ, ಯಂಗ್ ಆಗಿದ್ದಾಗಿನ ಫೋಟೋ ಹಾಗೂ ವಯಸ್ಸಾದ ಮೇಲಿನ ಫೋಟೋಗಳನ್ನು ಸುಮಲತಾ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಪ್ರೀತಿಯಿಂದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕವನ ರೂಪದಲ್ಲಿ ಈ ಸಾಲುಗಳು ಇವೆ.

‘ನಿಮ್ಮ ನೆನಪಾಗುತ್ತಿದೆ..

ಯಾವಾಗಲೂ ನಗು ತರುತ್ತದೆ..

ನಿನ್ನನ್ನು ಮಿಸ್ ಮಾಡಿಕೊಳ್ಳೋದು ಯಾವಾಗಲೂ ಉಳಿಯುವ ನೋವು..

ನೀವು ನಮ್ಮ ಜೀವನದ ಒಂದು ಭಾಗ

ಅದು ಪ್ರತಿ ದಿನ, ಪ್ರತಿ ಕ್ಷಣ ಮತ್ತು ಎಂದೆಂದಿಗೂ…

ನೀವು ಬದುಕನ್ನು ಮೀರಿದವರು

ನೀವೇ ಜೀವನ

ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳು

ಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ ಅವರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಡಾ.ಅಂಬರೀಷ್ ಫೌಂಡೇಶನ್ ಹಾಗೂ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಾಧಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಮಂಡ್ಯದ ರೈತ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?

ಸುಮಲತಾ ಮಾತು

ಅಂಬರೀಷ್ ಅವರ ಸಮಾಧಿಗೆ ತೆರಳಿ ಸುಮಲತಾ ಪೂಜೆ ಸಲ್ಲಿಸಿದರು. ‘ಅಂಬಿ ಅವರು ನಮ್ಮ ಮನಸ್ಸಲ್ಲಿ ಅಷ್ಟೇ ಅಲ್ಲ ಅಭಿಮಾನಿಗಳ ಮನಸ್ಸಲ್ಲಿ ಇದ್ದಾರೆ. ಆರು ವರ್ಷವಾದರೂ ಅಭಿಮಾನಿಗಳು ಈ ರೀತಿ ಸೆಲೆಬ್ರೇಷನ್ ಮಾಡುತ್ತಾರೆ. ಅವರು ಮಾಡಿದ ಒಳ್ಳೆ ಕೆಲಸಗಳಿಂದ ಜನ ಶಾಶ್ವತವಾಗಿ ಅವರನ್ನು ನೆನಪಿನಲ್ಲಿ ಉಳಿಸಿಕೊಂಡಿದ್ದಾರೆ. ಆ ಪ್ರೀತಿಯನ್ನೇ ನೋಡ್ಕೊಂಡು ನಾವು ತೃಪ್ತಿ ಪಡುತ್ತಿದ್ದೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:06 am, Wed, 29 May 24

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ