AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ

‘ದೊಡ್ಮನೆ’ ಹುಡುಗ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ
ಸುಮಲತಾ ಅಂಬರೀಶ್
TV9 Web
| Edited By: |

Updated on: Oct 30, 2021 | 6:52 PM

Share

ನಟ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಡೀ ಕುಟುಂಬ ದುಃಖದ ಅಲೆಯಲ್ಲಿ ತೇಲುತ್ತಿದೆ. ಒಬ್ಬರಾದ ಮೇಲೆ ಒಬ್ಬರಂತೆ ಬಂದು ಸೆಲೆಬ್ರಿಟಿಗಳು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಈಗ ಸಂಸದೆ, ನಟಿ ಸುಮಲತಾ ಅಂಬರೀಶ್​ ಅವರು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಅಲ್ಲದೆ, ಪುನೀತ್​ ಕುಟಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇಂದು (ಅಕ್ಟೋಬರ್​ 30) ಸಂಜೆ 6:30ರ ಸುಮಾರಿಗೆ ಸುಮಲತಾ ಅವರು ಆಗಮಿಸಿದರು. ಪುನೀತ್​ ಅಂತಿಮ ದರ್ಶನ ಪಡೆದ ಅವರು, ಪುನೀತ್​ ಪತ್ನಿ ಅಶ್ವಿನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು. ಈ ವೇಳೆ ಸುಮಲತಾ ತುಂಬಾನೇ ಭಾವುಕರಾಗಿದ್ದರು. ನಂತರ ಅವರು ಅಲ್ಲಿಂದ ತೆರಳಿದರು.

‘ದೊಡ್ಮನೆ ಹುಡುಗ’ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ಕಾರಣದಿಂದಲೂ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಸಾಕಷ್ಟು ಕಾರ್ಯಕ್ರಮಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಲಕ್ಷಾಂತರ ಅಭಿಮಾನಿಗಳು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಜ್ಯೂ.ಎನ್​ಟಿಆರ್​, ಚಿರಂಜೀವಿ, ನಂದಮೂರಿ ಬಾಲಕೃಷ್ಣ ಮೊದಲಾದವರು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಸ್ಯಾಂಡಲ್​ವುಡ್​ನ ಬಹುತೇಕರು ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿದ್ದಾರೆ.

ಅಪ್ಪನ ದರ್ಶನ ಪಡೆದ ಧೃತಿ:

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?