AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ

‘ದೊಡ್ಮನೆ’ ಹುಡುಗ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ
ಸುಮಲತಾ ಅಂಬರೀಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 30, 2021 | 6:52 PM

Share

ನಟ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಡೀ ಕುಟುಂಬ ದುಃಖದ ಅಲೆಯಲ್ಲಿ ತೇಲುತ್ತಿದೆ. ಒಬ್ಬರಾದ ಮೇಲೆ ಒಬ್ಬರಂತೆ ಬಂದು ಸೆಲೆಬ್ರಿಟಿಗಳು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಈಗ ಸಂಸದೆ, ನಟಿ ಸುಮಲತಾ ಅಂಬರೀಶ್​ ಅವರು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಅಲ್ಲದೆ, ಪುನೀತ್​ ಕುಟಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇಂದು (ಅಕ್ಟೋಬರ್​ 30) ಸಂಜೆ 6:30ರ ಸುಮಾರಿಗೆ ಸುಮಲತಾ ಅವರು ಆಗಮಿಸಿದರು. ಪುನೀತ್​ ಅಂತಿಮ ದರ್ಶನ ಪಡೆದ ಅವರು, ಪುನೀತ್​ ಪತ್ನಿ ಅಶ್ವಿನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು. ಈ ವೇಳೆ ಸುಮಲತಾ ತುಂಬಾನೇ ಭಾವುಕರಾಗಿದ್ದರು. ನಂತರ ಅವರು ಅಲ್ಲಿಂದ ತೆರಳಿದರು.

‘ದೊಡ್ಮನೆ ಹುಡುಗ’ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ಕಾರಣದಿಂದಲೂ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಸಾಕಷ್ಟು ಕಾರ್ಯಕ್ರಮಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಲಕ್ಷಾಂತರ ಅಭಿಮಾನಿಗಳು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಜ್ಯೂ.ಎನ್​ಟಿಆರ್​, ಚಿರಂಜೀವಿ, ನಂದಮೂರಿ ಬಾಲಕೃಷ್ಣ ಮೊದಲಾದವರು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಸ್ಯಾಂಡಲ್​ವುಡ್​ನ ಬಹುತೇಕರು ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿದ್ದಾರೆ.

ಅಪ್ಪನ ದರ್ಶನ ಪಡೆದ ಧೃತಿ:

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ