AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಶ್​ ಅವರಿಗಿದ್ದ ಆ ಗುಣ ದರ್ಶನ್​ಗೂ ಇದೆ: ಸುಮಲತಾ

Sumalatha: ದರ್ಶನ್​ಗೆ ಅತ್ಯಂತ ಆಪ್ತವಾಗಿರುವ ಸಂಸದೆ ಸುಮಲತಾ ಅಂಬರೀಶ್ ಅವರು ದರ್ಶನ್ 25 ಕಾರ್ಯಕ್ರಮದಲ್ಲಿ ದರ್ಶನ್​ ವ್ಯಕ್ತಿತ್ವದ ಬಗ್ಗೆ, ದರ್ಶನ್ ಮಾಡುತ್ತಿರುವ ಸಹಾಯದ ಬಗ್ಗೆ ಮಾತನಾಡಿದರು.

ಅಂಬರೀಶ್​ ಅವರಿಗಿದ್ದ ಆ ಗುಣ ದರ್ಶನ್​ಗೂ ಇದೆ: ಸುಮಲತಾ
ಮಂಜುನಾಥ ಸಿ.
|

Updated on: Feb 17, 2024 | 10:37 PM

Share

ನಟ ದರ್ಶನ್ (Darshan Thoogudeepa) ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ಬೆನ್ನಲ್ಲೆ ಶ್ರೀರಂಗಪಟ್ಟಣದಲ್ಲಿ ದರ್ಶನ್ 25 ಕಾರ್ಯಕ್ರಮವನ್ನು ಬಹು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಸ್ವಾಮೀಜಿಗಳು, ರಾಜಕೀಯ ಮುಖಂಡರು ಹಾಗೂ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ದರ್ಶನ್​ಗೆ ಅತ್ಯಾಪ್ತವಾಗಿರುವ ನಟಿ, ಸಂಸದೆ ಸುಮಲತಾ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ದರ್ಶನ್ ಬಗ್ಗೆ ಅವರು ತಮಗೆ ನೀಡಿದ ಬೆಂಬಲದ ಬಗ್ಗೆ ಭಾವುಕವಾಗಿ ಸುಮಲತಾ ಮಾತನಾಡಿದರು. ಮಾತಿನ ಮಧ್ಯೆ ಚುನಾವಣೆ ಟಿಕೆಟ್ ವಿಷಯವೂ ಬಂತು.

‘ನನ್ನ ಪ್ರೀತಿಯ ಹಿರಿಯ ಮಗ ದರ್ಶನ್, ನಿನ್ನೆಯಷ್ಟೇ ಹುಟ್ಟು ಆಚರಿಸಿಕೊಂಡಿದ್ದಾರೆ, ಕಾಟೇರ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಮಂಡ್ಯದಲ್ಲಿ ಮಾಡಿದ್ದೆವು. ಆಗಲೇ ಹೇಳಿದ್ದೆ ಈ ಸಿನೆಮಾ ದೊಡ್ಡ ಹಿಟ್ ಆಗುತ್ತೆ ಎಂದು, ಅದರ ಸಂಭ್ರಮವೂ ಮಂಡ್ಯದಲ್ಲೇ ಮಾಡ್ತೀವಿ ಅಂದಿದ್ದೆ. ‘ಕಾಟೇರ’ ಸಿನಿಮಾ ಈಗ ದೊಡ್ಡ ಹಿಟ್ ಆಗಿದೆ. ‘ಕಾಟೇರ’ ದರ್ಶನ್ ಅವರನ್ನು ಎಲ್ಲಗೋ ಕರೆದುಕೊಂಡು ಹೋಗಿ ಕೂರಿಸಿದೆ. ಅವರು ಚಿತ್ರರಂಗದಲ್ಲಿ 25 ವರ್ಷ ಕಳೆದಿದ್ದಾರೆ. ಅದು ಸಣ್ಣ ಸಾಧನೆಯಲ್ಲ’ ಎಂದರು ಸುಮಲತಾ.

‘25 ವರ್ಷಗಳ ಹಿಂದೆ ದರ್ಶನ್​ ಮೊದಲ ಸಿನಿಮಾ ‘ಮೆಜೆಸ್ಟಿಕ್​’ ಮುಹೂರ್ತಕ್ಕೆ ನಾನು ಹಾಗೂ ಅಂಬರೀಶ್ ಒಟ್ಟಿಗೆ ಹೋಗಿದ್ದೆವು. ನಮ್ಮ ಬೆಂಗಳೂರಿನ ಮನೆಯ ಬಳಿಯ ದೇವಾಲಯದಲ್ಲಿ ಮುಹೂರ್ತ ನಡೆದಿತ್ತು. ದರ್ಶನ್ ಆಗಿನ್ನು 22-23 ವರ್ಷದ ಯುವಕ. ಈಗ ನೋಡಿದರೆ 25 ವರ್ಷ ಪೂರೈಸಿದ್ದಾನೆ. ಈಗಲೂ ನನಗೆ ಅವನು 25-27 ವರ್ಷದ ಯುವಕನಂತೆ ಕಾಣುತ್ತಾನೆ. ಅಮ್ಮನಿಗೆ ಮಕ್ಕಳು ಯಾವಾಗಲೂ ಚಿಕ್ಕವರೇ ಆಗಿರುತ್ತಾರೆ’ ಎಂದರು ಸುಮಲತಾ.

ಇದನ್ನೂ ಓದಿ:ಮೋದಿ ಭೇಟಿಯಾದ ಸುಮಲತಾ ಅಂಬರೀಶ್, ಪ್ರಧಾನಿ ಮಾತಿಗೆ ಸಂಸದೆ ಫುಲ್ ಖುಷ್

ದರ್ಶನ್ ಬದುಕಿನಲ್ಲಿ ಸವಾಲು ಎದುರಿಸಿ ಬೆಳೆದ ವ್ಯಕ್ತಿ. ಶ್ರಮದಿಂದ ಬೆಳೆದು ಅಭಿಮಾನಿಗಳ ಪ್ರೀತಿಗಳಿಸಿದ್ದಾನೆ‌. ಸಾರ್ವಜನಿಕ ಜೀವನದಲ್ಲಿ ಇರುವವರು ಮಾದರಿಯಾಗ ಬೇಕು. ದರ್ಶನ್ ಕಷ್ಟಪಟ್ಟು ಬೆಳೆದ ರೀತಿ ನಿಮಗೆಲ್ಲರಿಗೂ ಸ್ಪೂರ್ತಿ ಆಗಬೇಕು. ಬರ್ತಡೇ ಆಚರಣೆ ಬದಲು ಬಡವರಿಗೆ ಸಹಾಯ ಮಾಡಲು ದರ್ಶನ್ ಕೋರಿದ್ದರು, ಅವರಿಗೆ ಅದನ್ನೆಲ್ಲ ಮಾಡಲಾಗದೆ ಹಾಗೆ ಮಾಡಿದ್ದಲ್ಲ, ನಿಮಗೂ ಆ ಅಭ್ಯಾಸ ಬರಲಿ ಎಂಬ ಕಾರಣಕ್ಕೆ ಮಾಡಿದ್ದು, ಮಕ್ಕಳ ಯಶಸ್ಸು ತಾಯಿಗೆ ಸಂತೋಷ. ಅಂಬರೀಶ್ ಹೋದ ಮೇಲೆ ನಮ್ಮ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದಾರೆ. ಅಭಿಷೇಕ್‌ಗೆ ದರ್ಶನ್ ಗೈಡ್ ಮಾಡ್ತಾನೆ, ಅಭಿಷೇಕ್​ಗೆ ದರ್ಶನ್ ದೊಡ್ಡ ಅಣ್ಣನಂತೆ ಇದ್ದಾನೆ. ನಾನು ಸಹ ಹೆಚ್ಚು ಹೊಗಳಿದರೆ ನಾಳೆ ಮನೆಗೆ ಬಂದು ಬೈತಾನೆ’ ಎಂದು ತಮಾಷೆಯಾಗಿ ಹೇಳಿದರು.

ಕಳೆದ ಮಂಡ್ಯ ಲೋಕಸಭೆ ಚುನಾವಣೆ ನೆನಪು ಮಾಡಿಕೊಂಡ ಸುಮಲತಾ, ‘ಕಳೆದ ಚುನಾವಣೆ ಸಮಯದಲ್ಲಿ ನನ್ನ ಮನಸ್ಥಿತಿ ಯಾರಿಗೂ ಗೊತ್ತಿರಲಿಲ್ಲ. ಬಹಳ ಗೊಂದಲದಲ್ಲಿದ್ದೆ. ನನ್ನ ಹತ್ತಿರದಲ್ಲಿರುವವರಿಗೆ ಮಾತ್ರವೇ ನನ್ನ ಸಂಕಷ್ಟ ಗೊತ್ತಿತ್ತು. ಆದರೆ ದರ್ಶನ್ ಹಾಗೂ ಯಶ್ ಬಂದರು, ನನ್ನ ಪರವಾಗಿ ಪ್ರಚಾರ ಮಾಡಿದ್ದು ಮಾತ್ರವೇ ಅಲ್ಲದೆ ನನಗೆ ಬೆಂಬಲ ಸಹ ನೀಡಿದರು. ಅದನ್ನು ನಾನು ಇಂದು ನೆನಪಿಸಿಕೊಳ್ಳಲೇ ಬೇಕು’ ಎಂದ ಸುಮಲತಾ, ಕಾರ್ಯಕ್ರಮ ಆಯೋಜನೆ ಮಾಡಿದ ಸಚ್ಚಿದಾನಂದ್ ಬಗ್ಗೆ ಮಾತನಾಡುತ್ತಾ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸುಮಲತಾ ಅವರು ಸಚ್ಚಿದಾನಂದ್​ಗೆ ಸ್ಪರ್ಧಿಸಲು ಬಿಡುತ್ತಾರಾ, ಅಭಿಷೇಕ್​ಗೆ ಟಿಕೆಟ್ ಕೇಳ್ತಾರಾ ಅಥವಾ ತಾವೇ ಸ್ಪರ್ಧಿಸುತ್ತಾರಾ ಎಂದು ಸುದ್ದಿಗಳು ಹರಿದಾಡಿತ್ತು. ಅಭಿಷೇಕ್ ಅಥವಾ ಸಚ್ಚಿದಾನಂದ್​ಗೆ ಟಿಕೆಟ್ ಕೇಳುವ ಅವಕಾಶ ಇದ್ದರೆ ನಾನು ಸಚ್ಚಿಗಾಗಿಯೇ ಕೇಳುತ್ತೇನೆ’ ಎಂದರು.

ನಾವು ನಡೆದು ಬಂದ ದಾರಿ ಯಾವತ್ತು ಮರೆಯಬಾರದು‌, ಆ ಗುಣ ದರ್ಶನ್‌ನಲ್ಲಿದೆ, ಎಲ್ಲರನ್ನು ಜೊತೆಗೂಡಿಸಿಕೊಂಡು ಬೆಳೆಸುವ ಗುಣ ದರ್ಶನ್‌ಗೆ ಇದೆ. ಅಂಬರೀಶ್ ಅವರಲ್ಲಿ ಬಿಟ್ಟರೆ ಆ ಗುಣ ಕಂಡದ್ದು ದರ್ಶನ್‌ನಲ್ಲಿ ಮಾತ್ರ. ದರ್ಶನ್ ಹೀಗೆ ಸಂತೋಷವಾಗಿ, ನೆಮ್ಮದಿಯಾಗಿ ಜೀವನ ನಡೆಸಿಕೊಂಡು ಹೋಗುತ್ತಿರಬೇಕು ಎಂಬುದು ನನ್ನ ಹಾರೈಕೆ, ನನ್ನ ಜೊತೆ ಅಂಬರೀಶ್ ಇದ್ದಾರೆ, ನನ್ನ ಹಿಂದೆ ನನ್ನ ಮಕ್ಕಳಿದ್ದಾರೆ, 5 ವರ್ಷ ನಿಮ್ಮ‌ ಪ್ರೀತಿಗಳಿಸಿದ್ದೇನೆ. ಮಂಡ್ಯದ ಮಣ್ಣಿನ ತಿಲಕ ಇಟ್ಟು ಅಂಬರೀಶ್‌ರನ್ನು ಬೀಳ್ಕೊಟ್ಟೆವು‌, ಸುಮಲತಾ ಕೂಡ ಈ ಮಣ್ಣನ್ನ ಬಿಡಲ್ಲ, ಮಂಡ್ಯವನ್ನ ಎಂದಿಗೂ ಬಿಡೋದಿಲ್ಲ’ ಎಂದರು ಸುಮಲತಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ