AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲೂ ಶೋಕಿ; ಸ್ಟಾರ್ ನಟನ ಸಿನಿಮಾ ಮಾಡಲು ಹೋದ ನಿರ್ಮಾಪಕನೇ ಸುಸ್ತು

ಸುನೀಲ್ ಹಳೆಯ ಗೆಳೆಯ ಸಾಜಿದ್ ನಾಡಿಯಾದ್ವಾಲಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗ ಅಹಾನ್ ಅವರು ನಡೆದುಕೊಳ್ಳುತ್ತಿರುವ ರೀತಿಗೆ ಸಾಜಿದ್ ಸಿಟ್ಟಾಗಿದ್ದಾರೆ. ಸಿನಿಮಾ ನಿಲ್ಲಿಸೋ ಎಚ್ಚರಿಕೆಯನ್ನೂ ನೀಡಿದ್ದಾರೆ. ಸದ್ಯ ಸುನೀಲ್ ಶೆಟ್ಟಿ ಅವರು ಸಾಜಿದ್​ನ ಭೇಟಿ ಮಾಡಿ ಸಿನಿಮಾನ ಅರ್ಧಕ್ಕೆ ನಿಲ್ಲಿಸಬೇಡಿ ಎಂದು ಕೋರಿದ್ದಾರೆ.

ಸೆಟ್​ನಲ್ಲೂ ಶೋಕಿ; ಸ್ಟಾರ್ ನಟನ ಸಿನಿಮಾ ಮಾಡಲು ಹೋದ ನಿರ್ಮಾಪಕನೇ ಸುಸ್ತು
ಸೆಟ್​ನಲ್ಲೂ ಶೋಕಿ; ಸ್ಟಾರ್ ನಟನ ಮಗನ ಚಿತ್ರರಂಗಕ್ಕೆ ಪರಿಚಯಿಸಲು ಹೋದ ನಿರ್ಮಾಪಕನೇ ಸುಸ್ತು
ರಾಜೇಶ್ ದುಗ್ಗುಮನೆ
|

Updated on:Jul 17, 2024 | 3:00 PM

Share

ಬಾಲಿವುಡ್​ನಲ್ಲಿ ಫೇಮಸ್ ಆಗಿರೋ ಅನೇಕ ಹೀರೋ/ಹೀರೋಯಿನ್​ಗಳ ಮಕ್ಕಳು ಚಿತ್ರರಂಗಕ್ಕೆ ಬರೋ ಪ್ರಯತ್ನದಲ್ಲಿದ್ದಾರೆ. ಕೆಲವು ಸೆಲೆಬ್ರಿಟಿ ಮಕ್ಕಳು ನಿರ್ಮಾಪಕರಿಗೆ ಹೊರೆ ಆದ ಉದಾಹರಣೆಯೂ ಇದೆ. ಇದಕ್ಕೆ ಹೊಸ ಉದಾಹರಣೆ ಸುನೀಲ್ ಶೆಟ್ಟಿ ಮಗ ಅಹಾನ್ ಶೆಟ್ಟಿ. ಅವರು ‘ಸಂಕಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸುನೀಲ್ ಅವರ ಹಳೆಯ ಗೆಳೆಯ ಸಾಜಿದ್ ನಾಡಿಯಾದ್ವಾಲಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗ ಅಹಾನ್ ಅವರು ನಡೆದುಕೊಳ್ಳುತ್ತಿರುವ ರೀತಿಗೆ ಸಾಜಿದ್ ಸಿಟ್ಟಾಗಿದ್ದಾರೆ. ಸಿನಿಮಾ ನಿಲ್ಲಿಸೋ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸುನೀಲ್ ಶೆಟ್ಟಿ ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಕಾರಣಕ್ಕೆ ಸಾಜಿದ್ ಹಾಗೂ ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಅಹಾನ್ ಅವರ ಸಿನಿಮಾ ಮಾಡೋ ಜವಾಬ್ದಾರಿಯನ್ನು ಸಾಜಿದ್ ಅವರೇ ತೆಗೆದುಕೊಂಡಿದ್ದಾರೆ. ‘ಸಂಕಿ’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈಗ ಚಿತ್ರವನ್ನು ಅರ್ಧಕ್ಕೆ ಕೈ ಬಿಡಬೇಕು ಎನ್ನುವ ಆಲೋಚನೆ ಸಾಜಿದ್​ಗೆ ಬಂದಿದೆ.

ಅಹಾನ್​ ಜೊತೆ ಬರುವ ಸಹಾಯಕರ ಸಂಖ್ಯೆ ದೊಡ್ಡದಿದೆ. ಇದು ಸಾಜಿದ್​ಗೆ ಹೊರೆ ಆಗುತ್ತಿದೆ. ಹೇರ್ ಸ್ಟೈಲಿಸ್ಟ್ ಒಬ್ಬರು, ಮೇಕಪ್​ ಮಾಡೋಕೆ ಒಬ್ಬರು, ಸ್ಟೈಲಿಸ್ಟ್ ಅಂತಲೇ ಒಬ್ಬರು, ಕಾರು ಚಾಲಕ, ಅಡುಗೆ ಮಾಡೋ ವ್ಯಕ್ತಿ ಹೀಗೆ ಅಹಾನ್ ಖರ್ಚು ದೊಡ್ಡದಾಗುತ್ತಿದೆ. ಹೀಗಾಗಿ, ಸಿನಿಮಾನ ಅರ್ಧಕ್ಕೆ ನಿಲ್ಲಿಸುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ ಎನ್ನಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಬಾಲಿವುಡ್​ನಲ್ಲಿ ಸ್ಟಾರ್ ಹೀರೋಗಳ ಸಿನಿಮಾಗಳೇ ಕಮಾಲ್ ಮಾಡುತ್ತಿಲ್ಲ. ಹೀಗಿರುವಾಗ ಹೊಸಬರ ಸಿನಿಮಾಗೆ ಬೇಡಿಕೆ ಬರಬೇಕು ಎಂದರೆ ಹೇಗೆ ಸಾಧ್ಯ? ಈ ಕಾರಣದಿಂದಲೇ ಸಾಜಿದ್ ಅವರ ಚಿಂತೆ ಮತ್ತಷ್ಟು ಹೆಚ್ಚಿದೆ. ಸದ್ಯ ಒಟಿಟಿ ಹಕ್ಕನ್ನು ಸಾಜಿದ್ ಅಮೇಜಾನ್ ಪ್ರೈಮ್ ವಿಡಿಯೋಗೆ ಮಾರಾಟ ಮಾಡಿದ್ದಾರೆ. ಅಮೇಜಾನ್ ಜೊತೆ ಮೊದಲೇ ಮಾಡಿಕೊಂಡಿರೋ ಒಪ್ಪಂದದಿಂದ ಇದು ಸಾಧ್ಯ ಆಗಿದೆ. ಆದರೆ, ಟಿವಿ ಹಕ್ಕನ್ನು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  ಸುನೀಲ್ ಶೆಟ್ಟಿ ಒಟ್ಟೂ ಆಸ್ತಿ ಎಷ್ಟು? ಈ ನಟನ ಸಂಪಾದನೆಗೆ ಇದೆ ಹಲವು ಮಾರ್ಗ

ಸದ್ಯ ಸುನೀಲ್ ಶೆಟ್ಟಿ ಅವರು ಸಾಜಿದ್​ನ ಭೇಟಿ ಮಾಡಿ ಸಿನಿಮಾನ ಅರ್ಧಕ್ಕೆ ನಿಲ್ಲಿಸಬೇಡಿ ಎಂದು ಕೋರಿದ್ದಾರೆ. ಇದರ ಜೊತೆಗೆ ಅಗತ್ಯ ಸಹಾಯವನ್ನು ಸಾಜಿದ್​ಗೆ ಮಾಡೋದಾಗಿ ಅವರು ಹೇಳಿದ್ದಾರಂತೆ. ಇತ್ತೀಚೆಗೆ ಅನೇಕ ನಿರ್ಮಾಪಕರು ಹೀರೋಗಳ ಸಂಭಾವನೆ ಬಗ್ಗೆ ಅವರ ಖರ್ಚು-ವೆಚ್ಛಗಳ ಬಗ್ಗೆ ಆತಂಕ ಹೊರ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:26 pm, Wed, 17 July 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?