AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ತಂತ್ರಜ್ಞರಿಗೆ ವಿಶೇಷ ಪ್ಯಾಕೇಜ್​ ಘೋಷಿಸಿ; ಸಿಎಂ ಯಡಿಯೂರಪ್ಪ ಬಳಿ ಸುನೀಲ್​ ಪುರಾಣಿಕ್​, ನಟಿ ತಾರಾ ಮನವಿ

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು.

ಚಿತ್ರರಂಗದ ತಂತ್ರಜ್ಞರಿಗೆ ವಿಶೇಷ ಪ್ಯಾಕೇಜ್​ ಘೋಷಿಸಿ; ಸಿಎಂ ಯಡಿಯೂರಪ್ಪ ಬಳಿ ಸುನೀಲ್​ ಪುರಾಣಿಕ್​, ನಟಿ ತಾರಾ ಮನವಿ
ಬಿ.ಎಸ್​.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
|

Updated on: May 21, 2021 | 7:05 PM

Share

 ಕೊವಿಡ್​ ನಿಯಂತ್ರಣಕ್ಕೆ ಹೇರಲಾದ ಲಾಕ್​ಡೌನ್​ನಿಂದ ಚಿತ್ರರಂಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊತ್ತು ಊಟಕ್ಕೆ ಸಿನಿಮಾವನ್ನೇ ನಂಬಿಕೊಂಡಿದ್ದ ತಂತ್ರಜ್ಞರು ಈಗ ಸಂಕಷ್ಟ ಅನುಭವಿಸುವಂತಾಗಿದೆ. ಹೀಗಾಗಿ, ಚಿತ್ರರಂಗದ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್​ ಪುರಾಣಿಕ್​ ಹಾಗೂ ಹಿರಿಯ ನಟಿ ತಾರಾ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಳಿ ಮನವಿ ಮಾಡಿದ್ದಾರೆ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೀಗಾಗಿ, ಇಂದು (ಮೇ 21) ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ತೆರಳಿ ಸುನೀಲ್​ ಪುರಾಣಿಕ್​ ಹಾಗೂ ಹಿರಿಯ ನಟಿ ತಾರಾ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಯಾಮರಾಮೆನ್​ಗಳು ಹಾಗೂ ಲೈಟ್​ಬಾಯ್ಸ್ ಸೇರಿದಂತೆ ಸಿನಿಮಾ ಕ್ಷೇತ್ರದಲ್ಲಿ ದುಡಿಯುವವರಿಗೆ ವಿಶೇಷ ಪ್ಯಾಕೇಜ್​​ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಿತ್ತು. ಈ ಪ್ಯಾಕೇಜ್​ನಲ್ಲಿ ಹೂವು ಬೆಳೆಗಾರರು, ಆಟೋ ಚಾಲಕರಿಗೆ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಪರಿಹಾರ ಘೋಷಣೆ ಮಾಡಲಾಗಿತ್ತು. ಅಲ್ಲದೆ, ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದರು. ಆದರೆ, ಚಿತ್ರರಂಗದ ತಂತ್ರಜ್ಞರಿಗೆ ಯಾವುದೇ ಪ್ಯಾಕೇಜ್​ ಘೋಷಣೆ ಆಗಿರಲಿಲ್ಲ.

ಇದನ್ನೂ ಓದಿ: ನಿರ್ದೇಶಕರಿಗೂ ಪ್ರೋತ್ಸಾಹ ಧನ ನೀಡಿ; ಸರ್ಕಾರಕ್ಕೆ ಮನವಿ ಮಾಡಿದ ಟೆಶಿ ವೆಂಕಟೇಶ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್