AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
ರಾಜೇಶ್ ದುಗ್ಗುಮನೆ
| Updated By: Lakshmi Hegde|

Updated on:Mar 24, 2021 | 4:48 PM

Share

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ