Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
Follow us
ರಾಜೇಶ್ ದುಗ್ಗುಮನೆ
| Updated By: Lakshmi Hegde

Updated on:Mar 24, 2021 | 4:48 PM

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ