AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 24, 2021 | 4:48 PM

Share

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ