AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 24, 2021 | 4:48 PM

Share

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ