AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 24, 2021 | 4:48 PM

Share

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು