AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.

ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..
ಸನ್ನಿ ಲಿಯೋನ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 24, 2021 | 4:48 PM

Share

ಬಾಲಿವುಡ್​ನಲ್ಲಿ ಮಿಂಚಿರುವ ನಟಿ ಸನ್ನಿ ಲಿಯೋನ್​ ಕನ್ನಡದ ಲವ್​ ಯು ಆಲಿಯಾ ಹಾಗೂ ಡಿಕೆ ಸಿನಿಮಾದ ಹಾಡುಗಳಿಗೆ ಸೊಂಟ ಬಳುಕಿಸಿದ್ದಾರೆ. ನಂತರ ಅವರು ಕನ್ನಡದಲ್ಲಿ ಕಾಣಿಸಿಕೊಂಡಿಲ್ಲ. ಈಗ ಅವರು ಮತ್ತೆ ಕನ್ನಡದ ಹಾಡಿಗೆ ಹೆಜ್ಜೆ ಹಾಕೋಕೆ ರೆಡಿ ಆಗಿದ್ದಾರೆ. ಅಷ್ಟಕ್ಕೂ ಸನ್ನಿ ಕನ್ನಡಕ್ಕೆ ಮತ್ತೆ ಬರೋಕೆ ಕಾರಣ ಏನು? ಯಾವುದು ಆ ಸಿನಿಮಾ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸಚಿನ್​ ಧನಪಾಲ್- ನಟಿ ಅದಿತಿ ಪ್ರಭುದೇವ ನಟಿಸುತ್ತಿರುವ ‘ಚಾಂಪಿಯನ್’​ ಸಿನಿಮಾದಲ್ಲಿ ಸನ್ನಿ ಲಿಯೋನ್​ ಐಟಮ್​ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಈ ಹಾಡಿನ ಶೂಟಿಂಗ್​ ನಡೆಯುತ್ತಿದೆ. ಇನ್ನು, ಈ ಸಿನಿಮಾದಲ್ಲಿ ಸನ್ನಿ ಲಿಯೋನ್​ ನಟಿಸುತ್ತಿರುವ ವಿಚಾರವನ್ನು ನಟಿ ಅದಿತಿ ಪ್ರಭುದೇವ ಕೂಡ ಖಚಿತಪಡಿಸಿದ್ದಾರೆ.

ಈ ಚಿತ್ರ ಕ್ರೀಡೆಯ ಸುತ್ತ ಹೆಣೆದಿರುವ ಚಿತ್ರ. ಈ ಹಾಡಿನಲ್ಲಿ ಬರುವ ಐಟಂ ಸಾಂಗ್​ನಲ್ಲಿ ಸನ್ನಿ ಲಿಯೋನ್​ ಸಖತ್​ ಆಗಿ ಹೆಜ್ಜೆ ಹಾಕುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. ಸಚಿನ್​ ಧನಪಾಲ್​ ಚಿತ್ರದ ನಾಯಕ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಈ ಸಿನಿಮಾ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಸದ್ಯ, ಈ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ.

ನಟಿ ಅದಿತಿ ಪ್ರಭುದೇವ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ. ಗಣೇಶ್​ ನಟನೆಯ ತ್ರಿಬಲ್​ ರೈಡಿಂಗ್​ ಚಿತ್ರಕ್ಕೆ ಅದಿತಿ ನಾಯಕಿ. ಇದಲ್ಲದೆ, ತೋತಾಪುರಿ, ತೋತಾಪುರಿ 2, ಓಲ್ಡ್​ ಮಾಂಕ್​, ಒಂಭತ್ತನೆ ದಿಕ್ಕು, ದಿಲ್​ಮಾರ್​ ಮೊದಲಾದ ಸಿನಿಮಾಗಳಲ್ಲಿ ಅದಿತಿ ನಟಿಸುತ್ತಿದ್ದಾರೆ.

ಸನ್ನಿ ಲಿಯೋನ್​ ಕೂಡ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ವೀರ ಮಹಾದೇವಿ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಶೂಟಿಂಗ್​ ಕೂಡ ಸಾಗುತ್ತಿದ್ದು, ಈ ವರ್ಷ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

Published On - 4:45 pm, Wed, 24 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ