AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ವಾಸ್ತವ್ಯ, ಯಾಕೆ ಗೊತ್ತಾ!?

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸೂಪರ್ ಸ್ಟಾರ್  ರಜಿನಿಕಾಂತ್ ವಾಸ್ತವ್ಯ ಹೂಡಿದ್ದಾರೆ. ವನ್ಯಜೀವಿ ಕುರಿತು ಸಾಕ್ಷ್ಯಚಿತ್ರದಲ್ಲಿ ನಟಿಸಲು ತಲೈವಾ ಆಗಮಿಸಿದ್ದು, ಚಿತ್ರೀಕರಣಕ್ಕೆ ಅರಣ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಚಿತ್ರೀಕರಿಸಿದ ಬೇರ್ ಗ್ರೀಲ್ಸ್ ಅವರೇ ರಜಿನಿಕಾಂತ್ ಅವರ ಸಾಕ್ಷ್ಯ ಚಿತ್ರ ಡೈರೆಕ್ಷನ್ ಮಾಡಲಿದ್ದಾರೆ. ಬೆನಿಜಾಯ್ ಏಷ್ಯಾ ಗ್ರೂಪ್​ನ ಸೆವೆನ್ ಟಾರಸ್ ಸ್ಟುಡಿಯೋದಿಂದ ವನ್ಯಜೀವಿ ಸಾಕ್ಷ್ಯಚಿತ್ರ ತಯಾರಾಗುತ್ತಿದ್ದು, ಜನವರಿ 27ರಂದು ಅರ್ಧ ದಿನ ಮಾತ್ರ ಶೂಟಿಂಗ್ ನಡೆಸಿದೆ. ಜನವರಿ 28ರ ಬೆಳಗ್ಗೆ 10 ರಿಂದ ಸಂಜೆ […]

ಬಂಡೀಪುರ ಅರಣ್ಯದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ವಾಸ್ತವ್ಯ, ಯಾಕೆ ಗೊತ್ತಾ!?
ಸಾಧು ಶ್ರೀನಾಥ್​
|

Updated on:Jan 29, 2020 | 11:59 AM

Share

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸೂಪರ್ ಸ್ಟಾರ್  ರಜಿನಿಕಾಂತ್ ವಾಸ್ತವ್ಯ ಹೂಡಿದ್ದಾರೆ. ವನ್ಯಜೀವಿ ಕುರಿತು ಸಾಕ್ಷ್ಯಚಿತ್ರದಲ್ಲಿ ನಟಿಸಲು ತಲೈವಾ ಆಗಮಿಸಿದ್ದು, ಚಿತ್ರೀಕರಣಕ್ಕೆ ಅರಣ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಚಿತ್ರೀಕರಿಸಿದ ಬೇರ್ ಗ್ರೀಲ್ಸ್ ಅವರೇ ರಜಿನಿಕಾಂತ್ ಅವರ ಸಾಕ್ಷ್ಯ ಚಿತ್ರ ಡೈರೆಕ್ಷನ್ ಮಾಡಲಿದ್ದಾರೆ.

ಬೆನಿಜಾಯ್ ಏಷ್ಯಾ ಗ್ರೂಪ್​ನ ಸೆವೆನ್ ಟಾರಸ್ ಸ್ಟುಡಿಯೋದಿಂದ ವನ್ಯಜೀವಿ ಸಾಕ್ಷ್ಯಚಿತ್ರ ತಯಾರಾಗುತ್ತಿದ್ದು, ಜನವರಿ 27ರಂದು ಅರ್ಧ ದಿನ ಮಾತ್ರ ಶೂಟಿಂಗ್ ನಡೆಸಿದೆ. ಜನವರಿ 28ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮತ್ತು ಜ.29 ರಂದು ಅರ್ಧ ದಿನ ಶೂಟಿಂಗ್ ನಡೆಸಲಿದೆ. ಇಂದು ಮಧ್ಯಾಹ್ನದ ನಂತರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಹುಲಿ ಸಂರಕ್ಷಿತಾರಣ್ಯದಲ್ಲಿ ಶೂಟಿಂಗ್ ನಡೆಯುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಶಬ್ದಮಾಲಿನ್ಯ, ವಾಯುಮಾಲಿನ್ಯವಾಗದಂತೆ ಅರಣ್ಯ ಇಲಾಖೆ ಷರತ್ತು ವಿಧಿಸಿದೆ. ಅಲ್ಲದೆ, ಅರಣ್ಯ ಸಂಪತ್ತಿಗೆ ಧಕ್ಕೆಯಾಗದಂತೆ ಹಾಗೂ ಜವಾಬ್ದಾರಿಯುತ ಅರಣ್ಯಾಧಿಕಾರಿಗಳ ಸಮಕ್ಷಮದಲ್ಲಿ ಚಿತ್ರೀಕರಣ ನಡೆಸುವಂತೆ ಸೂಚನೆ ನೀಡಿದೆ.

Published On - 10:47 am, Tue, 28 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?